ಸ್ವಾತಂತ್ರ್ಯ ಅಮೃತ ಮಹೋತ್ಸವಕ್ಕೆ ಬಿಡುಗಡೆಯಾಯಿತು “ವಂದೇ ಮಾತರಂ” ಎಂಬ ಅದ್ಭುತ ಹಾಡು.

Sandalwood actors in Vande Mataram Song

ಕನ್ನಡ ಸಾಂಸ್ಕೃತಿಕ ರಂಗದ ಗಣ್ಯರಿಂದ ವಿಶ್ವಭಾರತಿಗೆ ಕನ್ನಡದಾರತಿ

ಭವ್ಯ ಪರಂಪರೆ ಹೊಂದಿರುವ ನಮ್ಮ ಭಾರತಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾಗಿದೆ‌. ದೇಶದಾದ್ಯಂತ ಅಮೃತ ಮಹೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ಈ ಸುಸಂದರ್ಭದಲ್ಲಿ ನಮ್ಮ ನಾಡಿನ ಸಾಂಸ್ಕೃತಿಕ ರಂಗದ ಗಣ್ಯರ ಸಮಾಗಮದಲ್ಲಿ ಮೂಡಿಬಂದಿರುವ “ವಂದೇ ಮಾತರಂ” ಎಂಬ ಅದ್ಭುತ ಗೀತೆ ಬಿಡುಗಡೆಯಾಗಿದೆ.vande mataram sudeep song

ಹೆಸರಾಂತ ನಟ ಹಾಗೂ ರಾಜ್ಯಸಭಾ ಸದಸ್ಯ ಜಗ್ಗೇಶ್ ಈ ಹಾಡನ್ನು ನಿರ್ಮಾಣ ಮಾಡಿದ್ದಾರೆ. ಸಂತೋಷ್ ಆನಂದರಾಮ್ ನಿರ್ದೇಶನ ಮಾಡಿದ್ದಾರೆ. ಪ್ರವೀಣ್ ಡಿ ರಾವ್ ಸಂಗೀತ ನೀಡಿದ್ದು, ವಿಜಯ್ ಪ್ರಕಾಶ್ ಸುಶ್ರಾವ್ಯವಾಗಿ ಹಾಡಿದ್ದಾರೆ. ಶ್ರೀಶ ಕುದವಳ್ಳಿ ಛಾಯಾಗ್ರಹಣ ಮಾಡಿದ್ದಾರೆ. ಕಿಚ್ಚ ಸುದೀಪ, ಶಿವರಾಜಕುಮಾರ್, ರವಿಚಂದ್ರನ್, ಜಗ್ಗೇಶ್, ರಮೇಶ್ ಅರವಿಂದ್,ಅನಂತನಾಗ್,
ಅರ್ಜುನ್ ಸರ್ಜಾ, ಗಣೇಶ್, ಶ್ರೀಮುರಳಿ, ಧನಂಜಯ, ರಿಷಬ್ ಶೆಟ್ಟಿ, ಧ್ರುವ ಸರ್ಜಾ, ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ, ಸಾಲುಮರದ ತಿಮ್ಮಕ್ಕ, ಜೋಗತಿ ಮಂಜಮ್ಮ ಹಾಗೂ ಕ್ರಿಕೆಟ್ ಆಟಗಾರ ವೆಂಕಟೇಶ್ ಪ್ರಸಾದ್ ಈ ಹಾಡಿನಲ್ಲಿ ಅಭಿನಯಿಸಿದ್ದಾರೆ.vande mataram sudeep song

ನನಗೆ ಚಿಕ್ಕ ವಯಸ್ಸಿನಿಂದಲೂ “ಮಿಲೇ ಸುರ್ ಮೇರಾ ತುಮಾರ” ಹಾಡೆಂದರೆ ಬಹಳ ಇಷ್ಟ. ಇಂತಹದೊಂದು ಹಾಡನ್ನು ನಮ್ಮ ಕನ್ನಡ ಕಲಾವಿದರ ಸಮಾಗಮದಲ್ಲಿ ಮಾಡಬೇಕೆಂಬ ಆಸೆಯಿತ್ತು. ಈಗ ಆ ಆಸೆ ಈಡೇರಿದೆ. ಗೆಳೆಯ ಶ್ರೀನಿಧಿ ಅವರು ಕೆಲವು ದಿನಗಳ ಹಿಂದೆ ಈ ಹಾಡಿನ ಬಗ್ಗೆ ಪ್ರಸ್ತಾಪಿಸಿದರು. ನಾನು ನಿರ್ಮಾಣಕ್ಕೆ ಮುಂದಾದೆ. ಕೇವಲ ಹದಿಮೂರು ದಿನಗಳಲ್ಲಿ ಈ ಹಾಡು ನಿರ್ಮಾಣವಾಗಿದೆ. ಸಂತೋಷ್ ಆನಂದ್ ರಾಮ್ ಸೊಗಸಾಗಿ ನಿರ್ದೇಶನ ಮಾಡಿದ್ದಾರೆ. ವಿಜಯ್ ಪ್ರಕಾಶ್ ಧ್ವನಿಯಲ್ಲಿ ಈ ಹಾಡನ್ನು ಕೇಳುವುದೆ ಆನಂದ. ಈ ಹಾಡಿನ‌ ನಿರ್ಮಾಣ ಆರಂಭವಾದಾಗ ನನ್ನ ಎಲ್ಲಾ ಕನ್ನಡ ಚಿತರಂಗದ ನಾಯಕ ಮಿತ್ರರನ್ನು ಫೋನ್ ಮೂಲಕ ಸಂಪರ್ಕಿಸಿ, ಈ ವಿಷಯ ಹೇಳಿದಾಗ ಬಹಳ ಪ್ರೀತಿಯಿಂದ ಬಂದು ಈ ಹಾಡಿನಲ್ಲಿ ಅಭಿನಯಿಸಿದ್ದಾರೆ. ನಾಯಕ ನಟರಷ್ಟೇ ಅಲ್ಲದೇ ವಿವಿಧ ಕ್ಷೇತ್ರಗಳ ಗಣ್ಯರು ಈ ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ.vande mataram sudeep song

ಇವರೆಲ್ಲರಿಗೂ ನನ್ನ ತುಂಬು ಹೃದಯದ ಧನ್ಯವಾದಗಳನ್ನು ಅರ್ಪಿಸುತ್ತೇನೆ. ನಾಡಿನ ಸನ್ಮಾನ್ಯ ಮುಖ್ಯಮಂತ್ರಿಗಳು ಹಾಗೂ ಹಲವು ಮಂತ್ರಿಗಳು ಈ ಹಾಡನ್ನು ಮೆಚ್ಚಿ ಶೇರ್ ಮಾಡಿದ್ದಾರೆ. ತಾವು ಕೂಡ ಈ ಹಾಡನ್ನು ಶೇರ್ ಮಾಡುವ ಮೂಲಕ ಹೆಚ್ಷಿನ ಜನರಿಗೆ ತಲುಪಿಸಿ ಎಂದು ಜಗ್ಗೇಶ್ ವಿನಂತಿಸಿದ್ದಾರೆ. ಪ್ರಧಾನಮಂತ್ರಿಗಳಿಗೂ ಈ ಹಾಡನ್ನು ತೋರಿಸುವ ಪ್ರಯತ್ನ ನಡೆಯುತ್ತಿದೆ ಎಂದು ಜಗ್ಗೇಶ್ ತಿಳಿಸಿದ್ದಾರೆ.vande mataram sudeep song

“ವಂದೇ ಮಾತರಂ” ಎಂದರೆ ಜಾತಿಮತಧರ್ಮ ಎಲ್ಲವನ್ನೂ ದಾಟಿ ನಾವೆಲ್ಲರೂ ಭಾರತಮಾತೆಯ ಮಕ್ಕಳು ಎನ್ನುವ ಸಾರಾಂಶ. ಭಾರತವನ್ನು ಯಾವ ರೀತಿಯಲ್ಲಿ ವಿವರಿಸಬಹುದು ಎಂದು ಹೋದಾಗ, ಅಲ್ಲಿ ನಾವು ಗೋಮಾತೆಯನ್ನು ತಾಯಿಯ ತರಹ ಪೂಜಿಸುತ್ತೇವೆ. ಆ ಪಾತ್ರದಲ್ಲಿ ಶಿವಣ್ಣ ಅಭಿನಯಿಸಿದ್ದಾರೆ. ಭಾರತಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರಗಳ ಮೂಲಕ ಹಾಡು ಆರಂಭವಾಗುತ್ತದೆ ಅಲ್ಲಿ ಸುದೀಪ್ ಇದ್ದಾರೆ. ಹೀಗೆ ಭಾರತದ ಹಿರಿಮೆಯನ್ನು ಈ ಹಾಡಿನಲ್ಲಿ ತೋರಿಸುವ ಪ್ರಯತ್ನವನ್ನು ಹಿರಿಯ ನಟರಾದ ಅನಂತನಾಗ್, ರವಿಚಂದ್ರನ್, ರಮೇಶ್ ಅರವಿಂದ್, ಜಗ್ಗೇಶ್, ಅರ್ಜುನ್ ಸರ್ಜಾ ಹಾಗೂ ಯುವ ಪ್ರತಿಭೆಗಳಾದ ಗಣೇಶ್, ಶ್ರೀಮುರಳಿ, ಧ್ರುವ ಸರ್ಜಾ, ರಿಷಬ್ ಶೆಟ್ಟಿ, ಧನಂಜಯ ಅವರ ಮೂಲಕ ಮಾಡಿದ್ದೇವೆ. ಚಿತ್ರರಂಗದ ನಟರಷ್ಟೇ ಅಲ್ಲದೇ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ, ಸಾಲುಮರದ ತಿಮ್ಮಕ್ಕ, ಜೋಗತಿ ಮಂಜಮ್ಮ ಹಾಗೂ ಕ್ರಿಕೆಟ್ ಆಟಗಾರ ವೆಂಕಟೇಶ್ ಪ್ರಸಾದ್ ಮುಂತಾದವರು ಭಾರತದ ಭವ್ಯ ಪರಂಪರೆಯನ್ನು ಬಿಂಬಿಸುವ ಈ ಹಾಡಿನಲ್ಲಿ ಭಾಗಿಯಾಗಿದ್ದಾರೆ‌. ನಾಲ್ಕುವರೆ ದಿನಗಳಲ್ಲಿ ಈ ಹಾಡಿನ ಚಿತ್ರೀಕರಣ ಮುಗಿದಿದೆ. ಸಹಕಾರ ನೀಡಿದ ನನ್ನ ತಂಡಕ್ಕೆ ಹಾಗೂ ಅಭಿನಯಿಸಿರುವ ಗಣ್ಯರಿಗೆ ಧನ್ಯವಾದ ಎನ್ನುತ್ತಾರೆ ನಿರ್ದೇಶಕ ಸಂತೋಷ್ ಆನಂದ್ ರಾಮ್.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…