ಇದು ಹೃದಯಗಳ ವಿಷಯ ನೆನಪಿರಲಿ

ಸಾಮಾನ್ಯವಾಗಿ ಹೃದಯಾಘಾತ 60-70 ವರ್ಷಗಳ ನಂತರ ಆಗುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಕಿರಿಯ ವಯಸ್ಸಿನಲ್ಲಿ ಅಂದರೆ 40 ವರ್ಷದ ಕೆಳಗೆ ಇರುವ ವಯಸ್ಕರಲ್ಲಿ ಸಂಭವಿಸುತ್ತಿದೆ. ಶೇ 20 ರಷ್ಟು ಹೃದಯಾಘಾತ ಕಿರಿಯರಲ್ಲಿ ಸಂಭವಿಸುತ್ತಿದೆ.
ಹೃದಯಾಘಾತ (ಹಾರ್ಟ್ ಅಟ್ಯಾಕ್) ಈಗ ಸಾಮಾನ್ಯ ಎನ್ನುವಂತೆ ಆಗುತ್ತಿದೆ. ಹಿಂದೆಲ್ಲ ಹಳ್ಳಿ ಜನರು ಹೊಲ-ಮನೆಯಲ್ಲಿ ಕೆಲಸ ಮಾಡುತ್ತಾರೆ. ಅಂತಹವರಿಗೆ ಹಾರ್ಟ್ ಅಟ್ಯಾಕ್… ಆಗುವುದೇ ಇಲ್ಲ ಎಂಬ ಮಾತಿತ್ತು. ಆದರೆ ಈಗ ಗಾಬರಿ ಪಡುವಂತೆ ಗ್ರಾಮೀಣ ಭಾಗದಲ್ಲೂ ಹೃದಯಾಘಾತಕ್ಕೆ ಒಳಗಾಗುವವರ ಪ್ರಮಾಣ ನಗರ ವಾಸಿಗಳ ಮಟ್ಟಕ್ಕೆ ಬರುತ್ತಿದೆ.
ಹೃದಯಾಘಾತ ಉಂಟಾಗಲು ಕಾರಣಗಳೇನು?
1. ಅಧಿಕ ರಕ್ತದೊತ್ತಡ,
2. ಮಧುಮೇಹ,
3. ರಕ್ತದಲ್ಲಿ ಹೆಚ್ಚಿದ ಕೊಬ್ಬಿನಾಂಶ,
4. ಸ್ಥೂಲಕಾಯತ್ವ,
5. ಧೂಮಪಾನ,
6. ಮದ್ಯಪಾನ
7. ಮಾದಕ ವಸ್ತು ಸೇವನೆ,
8. ಒತ್ತಡದ ಜೀವನ,
9. ವಾಯುಮಾಲಿನ್ಯ
10. ಅನುವಂಶೀಯತೆ
ಒಟ್ಟಿನಲ್ಲಿ ಹೇಳುವುದಾದರೆ ಆಹಾರ ಪದ್ಥತಿ, ದೈಹಿಕ ಚಟುವಟಿಕೆ ಕೊರತೆಯಿಂದ ಜಡತ್ವಜೀವನ ಹಾಗೂ ದುಶ್ವಟಗಳು.ಅತಿಯಾದ ಕಾರ್ಬೊಹೈಡ್ರೇಟ್ಗಳುಳ್ಳ ತಿನಿಸು, ಜಂಕ್ ಫಾಸ್ಟ್ ಫುಡ್, ಹೆಚ್ಚು ಲವಣಾಂಶ ಇರುವ ಪದಾರ್ಥ ಸೇವನೆ, ದೀರ್ಘಕಾಲ ಮೊಬೈಲ್ ಫೋನ್ ಹಾಗೂ ಟಿವಿ ವೀಕ್ಷಣೆಯಿಂದ ಕಾಲ ಕಳೆಯುವುದು ಇತ್ಯಾದಿಗಳಿಂದ ಶರೀರ ಸ್ಥೂಲವಾಗುತ್ತದೆ. ಇದರಿಂದ ರಕ್ತದ ಒತ್ತಡ, ಮಧುಮೇಹ ಪ್ರಾರಂಭವಾಗಿ, ರಕ್ತದಲ್ಲಿ ಕೊಬ್ಬಿನಾಂಶ ಹೆಚ್ಚಾಗುತ್ತದೆ. ಹೃದಯದ ರಕ್ತನಾಳಗಳಲ್ಲಿ ಕೊಲೆಸ್ಟ್ರಾಲ್ ಪ್ಲೇಕ್ಸ್ನಿಂದ ರಕ್ತನಾಳಗಳು ಕಿರಿದಾಗುತ್ತವೆ. ಕೆಲವೊಮ್ಮೆ ಈ ಪ್ಲೇಕ್ಸ್ನಿಂದ ರಕ್ತನಾಳಗಳು ಸಂಪೂರ್ಣವಾಗಿ ಬಂದ್ ಆಗುತ್ತವೆ. ಆಗ ರಕ್ತ ಸಂಚಾರವಿಲ್ಲದೆ ಹೃದಯಾಘಾತ ಸಂಭವಿಸುತ್ತದೆ.
ಲಕ್ಷಣಗಳು
ಎದೆಯ ಮಧ್ಯಭಾಗದಲ್ಲಿ ಅತಿಯಾದ ನೋವು, ಕೆಲವೊಮ್ಮೆ ಎದೆ ಉರಿ, ಸಾಮಾನ್ಯವಾಗಿ ಎಡಭುಜ, ತೋಳಿನ ನೋವು, ಗಂಟಲುನೋವು, ಸುಸ್ತು, ಅತಿಯಾಗಿ ಬೆವರುವುದು, ಉಸಿರಾಟದ ತೊಂದರೆ, ತಲೆಸುತ್ತುವಿಕೆ ಹಾಗೂ ಜ್ಞಾನ ತಪ್ಪುವುದು. ತಕ್ಷಣದಲ್ಲಿ ಚಿಕಿತ್ಸೆ ದೊರೆಯದೆ ಇದ್ದರೆ ಸಾವು ಸಂಭವಿಸುತ್ತದೆ.
ಅಂತಹ ಸಂದರ್ಭಗಳಲ್ಲಿ ತಕ್ಷಣ ವೈದ್ಯರ ಸಲಹೆ ಪಡೆದುಕೊಳ್ಳಬೇಕು.
ಅನೇಕ ವೇಳೆ ಗ್ಯಾಸ್ಟ್ರಿಕ್ ತೊಂದರೆ ಎಂದು ತುಂಬಾ ಜನ ಅದನ್ನು ನಿರ್ಲಕ್ಷಿಸುವುದರಿಂದ ಆಸ್ಪತ್ರೆಗೆ ಬರುವುದು ತಡವಾಗಿ, ರೋಗದ ಲಕ್ಷಣಗಳು ತೀವ್ರ ಪ್ರಮಾಣಕ್ಕೆ ಹೋಗಿ ಸಾವು ಸಂಭವಿಸುವ ಸಾಧ್ಯತೆಗಳು ಇರುತ್ತವೆ. ಹಾಗಾಗಿ ಯಾವುದೇ ತರಹದ ಎದೆನೋವು, ಉಸಿರಾಟದ ತೊಂದರೆಯಾದಲ್ಲಿ ವೈದ್ಯರ ಸಲಹೆ ಅತ್ಯಗತ್ಯ.
*ಮುನ್ನೆಚ್ಚರಿಕೆಯ ಮಾರ್ಗಗಳು
* ಆಹಾರ ಸೇವನೆಯಲ್ಲಿ ಇತಿಮಿತಿ ಇರಬೇಕು: ಕಡಿಮೆ ಪ್ರಮಾಣದ ಕಾರ್ಬೊಹೈಡ್ರೇಟ್, ಕಡಿಮೆ ಲವಣಾಂಶದಿಂದ ಕೂಡಿದ ಪದಾರ್ಥಗಳ ಸೇವನೆ, ಕರಿದ ಹಾಗೂ ಜಂಕ್ ಆಹಾರ ಸೇವನೆಯಿಂದ ದೂರವಿರುವುದು/ ಮಿತಿ ಇಟ್ಟುಕೊಳ್ಳುವುದು. ಹೆಚ್ಚಿನ ಪ್ರಮಾಣದ ತರಕಾರಿ/ ತಾಜಾ ಹಣ್ಣುಗಳ ಸೇವನೆ
* ದೈಹಿಕ ಚಟುವಟಿಕೆ- ನಿತ್ಯ ಕನಿಷ್ಠ 45 ನಿಮಿಷಗಳ ನಡಿಗೆ, ವ್ಯಾಯಾಮ, ಯೋಗ ಅಭ್ಯಾಸ, ಇಷ್ಟವಾದ ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕು. ಶರೀರ ದಢೂತಿಯಾಗದಂತೆ ನೋಡಿಕೊಳ್ಳಬೇಕು. ಸಾಕಷ್ಟು ನಿದ್ರೆ ಮತ್ತು ಧ್ಯಾನ ಮಾಡಿ. ಒತ್ತಡ ಕಡಿಮೆ ಮಾಡುವ ವಾತಾವರಣ/ ಶಿಸ್ತುಬದ್ಧ ಜೀವನಶೈಲಿಯನ್ನು ರೂಢಿಸಿಕೊಳ್ಳಬೇಕು.
* ರಕ್ತದ ಒತ್ತಡ ಹಾಗೂ ಮಧುಮೇಹದ ಕಾಯಿಲೆ ಇದ್ದರೆ ವೈದ್ಯರ ಸಲಹೆ ಮೇರೆಗೆ ನಿಗದಿತ ಪ್ರಮಾಣದಲ್ಲಿ ಹತೋಟಿಯಲ್ಲಿಡಬೇಕು.
* ಧೂಮಪಾನ, ಮದ್ಯಪಾನ ಹಾಗೂ ಮಾದಕ ವಸ್ತುಗಳ ಸೇವನೆಯಿಂದ ದೂರವಿರಬೇಕು.
* ಯುವಕ- ಯುವತಿಯರು ಅರಿವು, ಎಚ್ಚರಿಕೆ, ವೈಜ್ಞಾನಿಕ ಚಿಂತನೆ ಮೈಗೂಡಿಸಿಕೊಂಡು ಆರೋಗ್ಯಕರ ಜೀವನ ನಡೆಸಬೇಕು.

 

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…