ಚಾಣಕ್ಯ ನೀತಿಗಳು ನಮ್ಮ ಬದುಕಿಗೆ, ಉದ್ಯೋಗ ವಲಯಕ್ಕೆ ಇಂದಿಗೂ ಪ್ರಸ್ತುತವಾಗಿವೆ.

chanakya neethi

ಚಾಣಕ್ಯ ನೀತಿಗಳು ನಮ್ಮ ಬದುಕಿಗೆ, ಉದ್ಯೋಗ ವಲಯಕ್ಕೆ ಇಂದಿಗೂ ಪ್ರಸ್ತುತವಾಗಿವೆ. ಅವನ್ನು ಅರ್ಥೈಸಿಕೊಂಡರೆ ನೀವು ಇಂದಿನ ಕಾರ್ಪೋರೇಟ್ ಯುಗದಲ್ಲಿ ಸುಲಭವಾಗಿ ಜಯಿಸಬಹುದು.

12302013160854254025

1. ವಿಷವಿಲ್ಲದ ಹಾವು ಕೂಡಾ ವಿಷಕಾರಿಯಂತೆ ತೋರಿಕೊಳ್ಳಬೇಕು…
ಒಂದು ಊರಿನಲ್ಲಿ ಹಾವು ಎಲ್ಲರಿಗೂ ಕಚ್ಚುತ್ತಿತ್ತು. ಇದರಿಂದ ಜನ ಕತ್ತಲೆಯಲ್ಲಿ ಹೊರ ತಿರುಗಾಡಲೇ ಭಯ ಪಡುತ್ತಿದ್ದರು. ಒಮ್ಮೆ ಸಂತನೊಬ್ಬ ಹಾವನ್ನು ನೋಡಿ, ಇದೇ ಬುದ್ಧಿ ಮುಂದುವರಿಸಿದರೆ ಕಲ್ಲಾಗುವಂತೆ ಶಾಪ ಕೊಡುವುದಾಗಿ ಹೇಳಿದ. ಆಗ ಹಾವು ಇನ್ನು ಮುಂದೆ ಯಾರಿಗೂ ಕಚ್ಚುವುದಿಲ್ಲ ಎಂದು ಪ್ರಾಮಿಸ್ ಮಾಡಿತು. ಕೆಲ ತಿಂಗಳ ಬಳಿಕ ಸಂತನು ಮತ್ತೆ ಅದೇ ಹಾದಿಯಲ್ಲಿ ಬಂದಾಗ ಹಾವಿನೆಡೆಗೆ ಮಕ್ಕಳೆಲ್ಲ ಕಲ್ಲು ತೂರುತ್ತಿದ್ದರು. ಅದನ್ನು ಎತ್ತಿ ಎಸೆಯುತ್ತಿದ್ದರು. ಆಗ ಹಾವು ಸಂತನ ಕಡೆ ನೋಡಿ, ನಿನ್ನಿಂದ ನಾನೀಗ ಸಾಯುವ ಹಂತಕ್ಕೆ ಬಂದಿದ್ದೇನೆ ಎಂದು ದೂಷಿಸಿತು. ಆಗ ಸಂತನು, ನಾನು ನಿನಗೆ ಯಾರಿಗೂ ಕಚ್ಚಬೇಡ ಎಂದೆನೇ ಹೊರತು ಭುಸ್ ಎಂದು ಹೆದರಿಸಬೇಡ ಎನ್ನಲಿಲ್ಲವಲ್ಲ ಎನ್ನುತ್ತಾನೆ. ಇಂದಿನ ಜಗತ್ತಿನಲ್ಲಿ ಕೂಡಾ ಅಷ್ಟೇ. ನಾವು ಯಾರಿಗೂ ತೊಂದರೆಯುಂಟು ಮಾಡದಿದ್ದರೂ ನಮಗೆ ಯಾರಾದರೂ ತೊಂದರೆಯುಂಟು ಮಾಡಲು ಬಂದಾಗ ಹೆದರಿಸುವ ಅಗತ್ಯವಿದೆ. ಚಾಣಕ್ಯ ನೀತಿಯ ಪಾಠ ಕೂಡಾ ಇದೇ ಹೇಳುತ್ತದೆ. ರಾಜಾ ಹರಿಶ್ಚಂದ್ರನಂತೆಯೂ ಬೇಡ, ತೀರಾ ಕೆಟ್ಟವರಾಗಿರುವುದೂ ಬೇಡ. ಆದರೆ, ನಿಮ್ಮ ತಂಟೆಗೆ ಯಾರೂ ಬರದಷ್ಟು ಜೋರಾಗಿ ತೋರಿಸಿಕೊಳ್ಳಿ. ಅಂದರೆ, ಬದುಕುವ ಕೌಶಲ ಬೆಳೆಸಿಕೊಳ್ಳಿ.

99326248 stock vector dishonest businessman shaking hands with a person his shadow showing him stabbing colleague in the b 2

2. ಎಲ್ಲ ಗೆಳೆತನದ ಹಿಂದೆ ಸ್ವಲ್ಪ ಸ್ವಾರ್ಥವಿದೆ ಸ್ವಾರ್ಥವಿಲ್ಲದ ಗೆಳೆತನ ಎಲ್ಲಿಯೂ ಇರುವುದಿಲ್ಲ.
ಯಾರೇ ಹತ್ತಿರವಾಗುತ್ತಿದ್ದಾರೆ ಎಂದರೂ ಅವರ ಆಸಕ್ತಿ ಏನು, ನಿಮ್ಮಿಂದ ಅವರೇನು ಆಪೇಕ್ಷಿಸುತ್ತಿದ್ದಾರೆ, ಏಕೆ ನಿಮಗೆ ಹತ್ತಿರವಾಗುತ್ತಿದ್ದಾರೆ ಎಂಬ ಪ್ರಶ್ನೆ ಕೇಳಿಕೊಳ್ಳಿ. ಸಿನಿಕರಾಗಿ ಎನ್ನುತ್ತಿಲ್ಲ. ಆದರೆ, ದೊಡ್ಡ ಪೊಸಿಶನ್ನಲ್ಲಿರುವವರು ಈ ಬಗ್ಗೆ ಹೆಚ್ಚು ಗಮನ ಹರಿಸಬೇಕು. ಏಕೆಂದರೆ ನಿಮ್ಮ ಸುತ್ತಲಿರುವವರಲ್ಲಿ ಬಹುತೇಕರು ಅವರು ಅಲ್ಲಿರಲು ನಿಮ್ಮಿಂದ ಏನನ್ನೋ ಬಯಸುತ್ತಾರೆ. ಏನು ಮುಖ್ಯವೆಂದರೆ, ನೀವು ಈ ಕುರಿತು ಪ್ರಾಮಾಣಿಕವಾಗಿರುವುದು. ನಿಮ್ಮೆಲ್ಲ ಅಗತ್ಯಗಳ ಹೊರತಾಗಿ ನೀವು ಉತ್ತಮ ಸ್ನೇಹಿತರಾಗಿರುವುದು. ನಿಮ್ಮಿಂದ ಬಯಸಿದರೂ, ನಿಮಗೆ ಬೇಕಾದಾಗ ನಿಲುಕುತ್ತಾರೆ ಎಂಬಂಥ ಗೆಳೆಯರನ್ನು ಸಂಪಾದಿಸಿ.

stickers retro pop art style comic style book panel gossip girl whispering in ear secrets with pink cheek rumor word of mouth concept vector illustration.jpg 2

3. ನಿಮ್ಮ ರಹಸ್ಯಗಳನ್ನು ಯಾರೊಂದಿಗೂ ಶೇರ್ ಮಾಡಬೇಡಿ
ನೀವೇ ರಹಸ್ಯವನ್ನು ನಿಮ್ಮೊಂದಿಗೆ ಇಟ್ಟುಕೊಳ್ಳಲಾರಿರಿ ಎಂದ ಮೇಲೆ ಮತ್ತೊಬ್ಬರು ನಿಮ್ಮ ರಹಸ್ಯ ಕಾಪಾಡಬೇಕೆಂದು ನಿರೀಕ್ಷಿಸುವುದು ತಪ್ಪು. ಹಾಗಾಗಿ, ಶಾಲೆ, ಕಾಲೇಜು, ಕಚೇರಿ ಎಲ್ಲೇ ಇರಲಿ ಜನರು ತಮ್ಮ ಲಾಭಕ್ಕನುಗುಣವಾಗಿ ಬದಲಾಗುತ್ತಿರುತ್ತಾರೆ. ಹೀಗಾಗಿ, ಯಾರೊಂದಿಗೂ ಗುಟ್ಟುಗಳನ್ನು ಹಂಚಿಕೊಳ್ಳಬೇಡಿ.

4. ಯಾವುದೇ ಕೆಲಸವನ್ನು ಶುರು ಮಾಡಿದ ಮೇಲೆ ಹೆದರದಿರಿ.
ಪ್ರಾಮಾಣಿಕವಾಗಿ ಕೆಲಸ ಮಾಡುವವರು ಎಲ್ಲರಿಗಿಂತ ಹೆಚ್ಚು ಸಂತೋಷವಾಗಿರುತ್ತಾರೆ. ಹಲವರು ತಮ್ಮ ಕೆಲಸದಲ್ಲಿ ವಿಫಲರಾಗಲು ಕಾರಣವೇ ಅವರು ಕೆಲಸವನ್ನು ಅರ್ಧಕ್ಕೇ ಬಿಡುವುದು. ಉದಾಹರಣೆಗೆ ಹೊಸ ವರ್ಷದಲ್ಲಿ ತೆಗೆದುಕೊಳ್ಳುವ ಎಷ್ಟು ರೆಸಲ್ಯೂಶನ್ಗಳನ್ನು ಸಾಧಿಸುವಿರಿ ಲೆಕ್ಕ ಹಾಕಿ. ನಿರಂತರವಾದ ಪ್ರಾಮಾಣಿಕ ಪರಿಶ್ರಮದಿಂದ ಮಾತ್ರ ಯಶಸ್ಸು ಸಿದ್ದಿಯಾಗಲು ಸಾಧ್ಯ

5. ಯಾವುದೇ ಕೆಲಸ ಆರಂಭಿಸುವ ಮುನ್ನ ನಿಮ್ಮನ್ನು ನೀವೇ ಈ ಪ್ರಶ್ನೆಗಳನ್ನು ಕೇಳಿಕೊಳ್ಳಿ.
ನಾನೇಕೆ ಇದನ್ನು ಮಾಡುತ್ತಿದ್ದೇನೆ, ಇದರ ಫಲಿತಾಂಶ ಏನಿರಬಹುದು, ನಾನು ಯಶಸ್ವಿಯಾಗಬಲ್ಲೆನೇ ಎಂದು. ತೃಪ್ತಿಕರ ಉತ್ತರಗಳನ್ನು ಕೊಟ್ಟುಕೊಳ್ಳಲು ಸಾಧ್ಯವಾದಾಗಷ್ಟೇ ಮುಂದುವರಿಯಿರಿ. ಏಕೆಂದರೆ, ಇಂದಿನ ಯುವಜನತೆ ಎಲ್ಲವನ್ನೂ ಫಟಾಫಟ್ ನಿರ್ಧರಿಸುತ್ತಾರೆ. ಹಾಗಾಗಿಯೇ ಸಂಬಂಧ, ವೃತ್ತಿ, ಬದುಕಿನಲ್ಲಿ ಹೆಚ್ಚು ಸೋಲು ಅನುಭವಿಸುತ್ತಾರೆ. ಬದಲಿಗೆ ಅವರು ಎಲ್ಲಕ್ಕೂ ಮುನ್ನ ಈ ಮೂರು ಪ್ರಶ್ನೆಗಳಿಗೆ ಉತ್ತರ ಕಂಡುಕೊಂಡಿದ್ದೇ ಆದಲ್ಲಿ ಹೆಚ್ಚು ಯಶಸ್ವಿಯಾಗಿಯೂ, ಹೆಚ್ಚು ಸುಖವಾಗಿಯೂ ಇರಬಲ್ಲರು.

snake

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…