“2nd ಲೈಫ್‌” ನಲ್ಲಿ ಕರುಳುಬಳ್ಳಿಯ ಕಥೆ.

2nd life kannada movie

ಯಾರಾದರೂ ದೊಡ್ಡ ಅನಾಹುತದಿಂದ ಪಾರಾದಾಗ ಆಡುವ ಮಾತು ನನಗೆ ಇದು “2nd ಲೈಫ್” ಅಂತ. ಈಗ ಅದೇ ಹೆಸರಿನ ಚಿತ್ರವೊಂದು ತೆರೆಗೆ ಬರಲು ಸಿದ್ದವಾಗಿದೆ.2nd life kannada movie

ಜಯಣ್ಣ ಫಿಲಂಸ್ ಹಾಗೂ ಶುಕ್ರ ಫಿಲಂಸ್ ನಿರ್ಮಿಸಿರುವ “2nd ಲೈಫ್” ಚಿತ್ರವನ್ನು ರಾಜು ದೇವಸಂದ್ರ ನಿರ್ದೇಶಿಸಿದ್ದಾರೆ. ಈ ಹಿಂದೆ ಇವರು “ಅಕ್ಷತೆ” ಸೇರಿದಂತೆ ಮೂರು ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಇದು ನಾಲ್ಕನೇ ಚಿತ್ರ. ಈ ಚಿತ್ರದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಚಿತ್ರತಂಡ ಮಾಧ್ಯಮದ ಮುಂದೆ ಹಂಚಿಕೊಂಡರು.2nd life kannada movie

ಇದು ನನ್ನ ನಾಲ್ಕನೇ ನಿರ್ದೇಶನದ ಚಿತ್ರ. ಥ್ರಿಲ್ಲರ್ ಕಥಾಹಂದರ ಹೊಂದಿದೆ ಈ ಚಿತ್ರ. ಮಂಜುಳ ರಮೇಶ್ ಅವರು ಕಥೆ, ಚಿತ್ರಕಥೆ ಬರೆದಿದ್ದಾರೆ. ನಾನು ನಿರ್ದೇಶನ ಮಾಡಿದ್ದೇನೆ. ಆರೋಗ್ಯದ ಕುರಿತು ಜಾಗೃತಿ ಮೂಡಿಸುವ ಚಿತ್ರ ಇದಾಗಿದೆ ಎಂದು ನಿರ್ದೇಶಕ ರಾಜು ದೇವಸಂದ್ರ ತಿಳಿಸಿದರು.2nd life kannada movie

ನಾನು ಈ ಹಿಂದೆ “ಸ್ವಾರ್ಥ ರತ್ನ” ಎಂಬ ಚಿತ್ರದಲ್ಲಿ ‌ಅಭನಯಸಿದ್ದೆ. ಈಗ “2 nd ಲೈಫ್” ಚಿತ್ರದಲ್ಲಿ ನಟಿಸಿದ್ದೇನೆ. ವಿಭಿನ್ನ ಕಥೆಯಿರುವ ಚಿತ್ರ ನಮ್ಮದು. ಮಗು ಹುಟ್ಟಿದ ಕೆಲವೆ ದಿನಗಳಲ್ಲಿ ಕರಳು ಬಳ್ಳಿ(ಹೊಕ್ಕಳ ಬಳ್ಳಿ) ಬೀಳುತ್ತದೆ. ಇದನ್ನು ಶೇಖರಿಸಿಡುವ ಕಾರ್ಯ ಈಗ ಭರದಿಂದ ಸಾಗಿದೆ. ಇದನ್ನು ಕ್ಯಾನ್ಸರ್ ರೋಗಿಗಳ ಚಿಕಿತ್ಸೆಗೆ ಬಳಸಿಕೊಳ್ಳಲಾಗುತ್ತಿದೆ. ಅಂತಹ ಕಥಾವಸ್ತು ಆಧರಿಸಿ ನಮ್ಮ ಚಿತ್ರ ನಿರ್ಮಾಣವಾಗಿದೆ. ಒಂದು ಬೇಜಾರಿನ ಸಂಗತಿ ಅಂದರೆ, ಹೊಸ ಪ್ರಯತ್ನಗಳಿಗೆ ಪ್ರೋತ್ಸಾಹ ನೀಡುವ ಪುನೀತ್ ರಾಜಕುಮಾರ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡಬೇಕಿತ್ತು. ಈ ಸಲುವಾಗಿ ಚರ್ಚಿಸಲು ಅವರು ನಮಗೆ ಸ್ನೇಹಿತರೊಬ್ಬರ ಮೂಲಕ ಸಮಯವನ್ನು ನೀಡಿದ್ದರು. ಆದರೆ ವಿಧಿಬರಹವೇ ಬೇರೆಯಾಗಿತ್ತು. ಈಗ ನಮ್ಮ ಚಿತ್ರದ ಹಾಡು ಪಿ.ಆರ್.ಕೆ ಮೂಲಕವೇ ಬಿಡುಗಡೆಯಾಗಿರುವುದು ಖುಷಿಯ ವಿಚಾರವೆಂದು ನಾಯಕ ಆದರ್ಶ್ ಗುಂಡುರಾಜ್ ತಿಳಿಸಿದರು.2nd life kannada movie

ಈ‌ ಚಿತ್ರದಲ್ಲಿ ನನ್ನದು ಕುರುಡಿಯ ಪಾತ್ರ. ಡೈರೆಕ್ಟರ್ ನನಗೆ ಕಥೆ ಬಗ್ಗೆ ಏನು ಹೇಳಿಲ್ಲ. ಪಾತ್ರದ ಕುರಿತು ಮಾತ್ರ ಹೇಳಿದ್ದಾರೆ ಎಂದರು ನಾಯಕಿ ಸಿಂಧೂ ರಾವ್.

ಸಂಗೀತ ನಿರ್ದೇಶಕ ಆರವ್ ಕೌಶಿಕ್, ಛಾಯಾಗ್ರಹಕ ರಮೇಶ್ ಕೊಯಿರ ಹಾಗೂ ನಟ ಶಿವಪ್ರದೀಪ್, ನವೀನ್ ಶಕ್ತಿ ಮುಂತಾದವರು ಚಿತ್ರದ ಕುರಿತು ಮಾತನಾಡಿದರು.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…