ದರ್ಶನ್ ಪರಪ್ಪನ ಅಗ್ರಹಾರ ಜೈಲು ಸೇರಿ ಹೆಚ್ಚು ಕಡಿಮೆ ಒಂದೂವರೆ ತಿಂಗಳಾಗುತ್ತಿದೆ. ಇನ್ನೂ ಕೆಲವು ದಿನಗಳಂತೂ ದರ್ಶನ್ ಜೈಲಿನಿಂದ ಹೊರಬರುವುದು ಅನುಮಾನ.

ರೇಣುಕಾಸ್ವಾಮಿ ಹತ್ಯೆ ನಡೆದ ಸಂದರ್ಭದಲ್ಲಿ ದರ್ಶನ್ ಧರಿಸಿದ್ದ ಬಟ್ಟೆಯ ಮೇಲೆ ರಕ್ತದ ಕಲೆಗಳು ಪತ್ತೆಯಾಗಿವೆ ಎಂದು ಕೆಲ ಮಾಧ್ಯಮಗಳಲ್ಲಿ ವರದಿಯಾಗಿದೆ.

ಪೊಲೀಸರು ಚಾರ್ಜ್ ಶೀಟ್‌ನಲ್ಲಿ ಮಾಡಿರುವ ಆರೋಪಗಳನ್ನು ಮುಂದಿಟ್ಟುಕೊಂಡು ದರ್ಶನ್ ಪರ ವಕೀಲರು ಜಾಮೀನು ಅರ್ಜಿಯನ್ನು ಸಲ್ಲಿಸಲು ಮುಂದಾಗುತ್ತಾರೆ.

ದರ್ಶನ್‌ಗೆ ಆಪ್ತರಾಗಿರುವ ರಾಕ್​ಲೈನ್ ವೆಂಕಟೇಶ್ ಹಾಗೂ ದೊಡ್ಡಣ್ಣ ಈ ಪೂಜೆಯನ್ನು ಆಯೋಜಿಸಿದ್ದು, ಕಲಾವಿದರಿಗೆ ಆಹ್ವಾನ ನೀಡಲಾಗಿದೆ.

ದರ್ಶನ್ ಬಿಡುಗಡೆಗಾಗಿ ಮಾಡುತ್ತಿರುವ ಈ ವಿಶೇಷ ಪೂಜೆಯನ್ನು ಆಗಸ್ಟ್ 14ರಂದು ಜರುಗುತ್ತಿದೆ. ಕಲಾವಿದರ ಸಂಘದಲ್ಲಿ ಈ ವಿಶೇಷ ಪೂಜೆಯನ್ನು ಹಮ್ಮಿಕೊಂಡಿದ್ದಾರೆ ಎಂದು ವರದಿಗಳಾಗಿವೆ. ಹೀಗಾಗಿ ಕನ್ನಡದ ಎಲ್ಲಾ ಕಲಾವಿದರಿಗೂ ಈ ಪೂಜೆಗೆ ಆಹ್ವಾನವನ್ನು ನೀಡಲಾಗಿದೆ

ಶಿವಣ್ಣ, ಕಿಚ್ಚ ಸುದೀಪ್, ಉಪೇಂದ್ರ, ಯಶ್‌ಗೂ ಆಹ್ವಾನ ನೀಡಲಾಗಿದೆಯಂತೆ. ಆದರೆ, ದರ್ಶನ್ ಬಿಡುಗಡೆಗಾಗಿ ಮಾಡುತ್ತಿರುವ ಈ ಯಾಗದಲ್ಲಿ ಕನ್ನಡದ ಈ ಸೂಪರ್‌ಸ್ಟಾರ್‌ಗಳು ಬರುತ್ತಾರಾ? ಅನ್ನೋ ಪ್ರಶ್ನೆ ಎದುರಾಗಿದೆ

ಕೊಲ್ಲೂರು ಮೂಕಾಂಬಿಕಾ ದೇವಿಯ ಸನ್ನಿಧಾನದಲ್ಲಿ ದರ್ಶನ್ ಪತ್ನಿ ನವ ಚಂಡಿಕಾ ಯಾಗ ಮಾಡಿದ್ದಾರೆ. ದರ್ಶನ್ ಭಾವ, ಸಹೋದರ ದಿನಕರ್ ತೂಗುದೀಪ ಸೇರಿದಂತೆ ಕುಟುಂಬಸ್ಥರು ಸಂಕಷ್ಟದಲ್ಲಿ ಬಹುಬೇಗನೇ ಬಿಡುಗಡೆಯಾಗಿ ಹೊರ ಬರಲಿ ಎಂದು ವಿಶೇಷ ಪೂಜೆ ಸಲ್ಲಿಸಿದ್ದಾರೆ.

Priyanka Jain

CINIPARK

Cream Section Separator