ದುಬೈನಲ್ಲಿ ಅಲ್ಲು ಅರ್ಜುನ್ ಮೇಣದ ಪ್ರತಿಮೆ ಅನಾವರಣ..ಈ ಕೀರ್ತಿಗೆ ಭಾಜನರಾದ ದಕ್ಷಿಣದ ಭಾರತದ ಮೊದಲ ನಟ

Allu Arjun wax statue unveiled

ರೀಲ್ ಜೊತೆ ರಿಯಲ್..ಅಲ್ಲು ಅರ್ಜುನ್ ಮೇಣದ ಪ್ರತಿಮೆ ಅನಾವರಣ…

ಸ್ಟೈಲೀಶ್ ಸ್ಟಾರ್ ಅಲ್ಲು ಅರ್ಜುನ್ ಸಿನಿಮಾರಂಗಕ್ಕೆ ಎಂಟ್ರಿ ಕೊಟ್ಟು 21 ವರ್ಷ ಕಳೆದಿದೆ. 2003 ಮಾರ್ಚ್ 28ರಂದು ಗಂಗೋತ್ರಿ ಸಿನಿಮಾ ಮೂಲಕ ಬನ್ನಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ಅಲ್ಲು ಸಿನಿಪಯಣಕ್ಕೆ 21 ವರ್ಷ ಪೂರೈಸಿದೆ. ಈ ಖುಷಿ ಕ್ಷಣ ನಡುವೆಯೇ ಮೇಡಂ ಟುಸ್ಸಾಡ್ ಮ್ಯೂಸಿಯಂನಲ್ಲಿ ಅಲ್ಲು ಅರ್ಜುನ್ ಮೇಣದ ಪ್ರತಿಮೆ ಅನಾವರಣಗೊಂಡಿದೆ. Allu Arjun wax statue unveiled

Allu Arjun wax statue unveiled

ದುಬೈನ ಮೇಡಮ್ ಟುಸ್ಸಾಡ್ಸ್ ಮ್ಯೂಸಿಕ್ ನಲ್ಲಿ ಅಲ್ಲು ಅರ್ಜುನ್ ಮೇಣದ ಪ್ರತಿಮೆ ಲೋಕಾರ್ಪಣೆಗೊಂಡಿದೆ. ‘ಅಲವೈಕುಂಠಪುರಂಲೋ’ ಚಿತ್ರದ ಅಲ್ಲು ಅರ್ಜುನ್ ಲುಕ್ ನ ಮೇಣದ ಪ್ರತಿಮೆಯನ್ನು ಮಾರ್ಚ್ 28 ರ ರಾತ್ರಿ ಅನಾವರಣ ಮಾಡಲಾಯ್ತು. ತಮ್ಮದೇ ಮೇಣದ ಪ್ರತಿಮೆ ಲುಕ್ ನಲ್ಲಿ ಕೆಂಪು ಬಣ್ಣದ ಸೂಟ್ ಧರಿಸಿ ಬನ್ನಿ ಕಾಣಿಸಿಕೊಂಡಿದ್ದಾರೆ. ಡೂಡ್ಲಿಕೇಟ್ ಪಕ್ಕ ನಿಂತು ತಗ್ಗೋದೇ ಇಲ್ಲ ಅಂತಾ ಪುಷ್ಪ ಸ್ಟೈಲ್ ನಲ್ಲಿ ಪೋಸ್ ಕೊಟ್ಟಿದ್ದಾರೆ.Allu Arjun wax statue unveiled

ಮೇಣದ ಪ್ರತಿಮೆ ಲೋಕಾರ್ಪಣೆ ವೇಳೆ ಅಲ್ಲು ಅರ್ಜುನ್ ಮಗಳು ಅಲ್ಲು ಅರ್ಹಾ, ಸಂಭ್ರಮ ಮುಗಿಲು ಮುಟ್ಟಿತ್ತು. ಅಪ್ಪನ ಪ್ರತಿಮೆಯ ಪಕ್ಕದಲ್ಲಿ ನಿಂತು ಅರ್ಹಾ ತಗ್ಗೊದೇ ಇಲ್ಲ ಎಂದು ಪೋಸ್ ಕೊಟ್ಟಿದ್ದಾಳೆ. ಇನ್ನು ಸ್ಟೈಲಿಶ್ ಸ್ಟಾರ್ ಕೂಡ ತಮ್ಮದೇ ತಮ್ಮದೇ ಮೇಣದ ಪ್ರತಿಮೆಯೊಂದಿಗೆ ಸೆಲ್ಫಿ ಕ್ಲಿಕ್ಕಿಸಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿ ತಗ್ಗೊದೆ ಇಲ್ಲ ಎಂದು ಬರೆದುಕೊಂಡಿದ್ದಾರೆ. ಸದ್ಯ ಅಲ್ಲು ಅರ್ಜುನ್ ಮೇಣದ ಪ್ರತಿಮೆ ಜೊತೆ ಇರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಬನ್ನಿಗೆ ಫ್ಯಾನ್ಸ್ ವಿಷ್ ಮಾಡುತ್ತಿದ್ದಾರೆ.Allu Arjun wax statue unveiled


ಭಾರತೀಯ ಚಿತ್ರರಂಗದ ಹಲವು ತಾರೆಯರ ಮೇಣದ ಪ್ರತಿಮೆಗಳು ಲಂಡನ್ ಮೇಡಂ ಟುಸ್ಸಾಡ್ ಮ್ಯೂಸಿಯಂನಲ್ಲಿವೆ. ಆದ್ರೆ ಅಲ್ಲು ಅರ್ಜುನ್ ಪ್ರತಿಮೆ ಮಾತ್ರ ದುಬೈ ಮ್ಯೂಸಿಯಂನಲ್ಲಿದೆ. ದುಬೈನಲ್ಲಿ ಮೇಣದ ಪ್ರತಿಭೆಗೆ ಭಾಜನರಾಗಿರುವ ದಕ್ಷಿಣ ಭಾರತದ ಮೊದಲ ನಟ ಎಂಬ ಖ್ಯಾತಿ ಅಲ್ಲು ಅರ್ಜುನ್ ತಮ್ಮದಾಗಿಸಿಕೊಂಡಿದ್ದಾರೆ. ಅಂದಹಾಗೇ ಲಂಡನ್ ಮ್ಯೂಸಿಯಂನಲ್ಲಿ ಪ್ರಭಾಸ್, ಮಹೇಶ್ ಬಾಬು, ಹಾಗೂ ಕಾಜಲ್ ಮೇಣದ ಪ್ರತಿಮೆಗಳಿವೆ.Allu Arjun wax statue unveiled

‘ಪುಷ್ಪ: ದಿ ರೈಸ್’ನಲ್ಲಿ ಮೂಲಕ ಅಲ್ಲು ಅರ್ಜುನ್ ಖ್ಯಾತಿ ಹೆಚ್ಚಾಗಿದೆ. ಈ ಚಿತ್ರಕ್ಕಾಗಿ ಅವರು ಅತ್ಯುತ್ತಮ ನಟ, ರಾಷ್ಟ್ರೀಯ ಪ್ರಶಸ್ತಿಯನ್ನು ಪಡೆದಿದ್ದರು. ಈಗ ‘ಪುಷ್ಪಾ 2: ದಿ ರೂಲ್’ ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದೆ. ಆಗಸ್ಟ್ 15 ರಿಂದ ಚಿತ್ರ ತೆರೆಗೆ ಬರಲಿದೆ

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…