ಇನ್ ವೆಸ್ಟಿಗೇಶನ್ ಥ್ರಿಲ್ಲರ್ ಲಿಪ್‌ಸ್ಟಿಕ್ ಮರ್ಡರ್ ಈವಾರ ತೆರೆಗೆ

An investigation thriller Lipstick Murder hits screens this week

ಕೊರೋನಾ ನಂತರ ಪ್ರೇಕ್ಷಕರಲ್ಲಿ ಸಿನಿಮಾ ನೋಡುವ ಅಭಿರುಚಿಯೇ ಬದಲಾಗಿದೆ. ಇದೇ ಭಾಷೆಯ ಚಿತ್ರ ನೋಡಬೇಕೆನ್ನುವುದೂ ಹೊರಟುಹೋಗಿದೆ. ಓಟಿಟಿಯಲ್ಲಿ ಎಲ್ಲಾ ಭಾಷೆಯ ಚಿತ್ರಗಳನ್ನು ನೋಡಿದ ಮೇಲೆ ಕಂಟೆಂಟ್ ಆಧಾರಿತ ಚಿತ್ರಗಳ ಮೇಲೇ ಹೆಚ್ಚು ಒಲವು ತೋರಿಸುತ್ತಿದ್ದಾರೆ. ಅದನ್ನು ಮನಗಂಡ ನಿರ್ದೇಶಕ ರಾಜೇಶ್ ಮೂರ್ತಿ ಅವರು ಉತ್ತಮ ಕಂಟೆಂಟ್ ಆಧಾರಿತ ಚಿತ್ರವೊಂದನ್ನು ಲಿಪ್ ಸ್ಟಿಕ್ ಮರ್ಡರ್ ಮೂಲಕ ಹೇಳಹೊರಟಿದ್ದಾರೆ. An investigation thriller  Lipstick Murder hits screens this week

ಕನ್ನಡದಲ್ಲಿ ನಿರ್ಮಾಣವಾದ ಈ ಚಿತ್ರವನ್ನು ನೋಡಿದ ಬಾಲಿವುಡ್ ನ ಹೆಸರಾಂತ ಸಂಸ್ಥೆಯೊಂದು ಅತಿಹೆಚ್ಚು ಮೊತ್ತ ಕೊಟ್ಟು ಡಬ್ಬಿಂಗ್ ರೈಟ್ಸ್ ಖರೀದಿಸಿದ್ದು ತಮಿಳು,ತೆಲುಗು, ಮಲಯಾಳಂ ನಲ್ಲೂ ಉತ್ತಮ ಮೊತ್ತಕ್ಕೆ ಮಾರಾಟವಾಗಿದೆ. ತಂದೆ ಹೆಚ್.ಎಂ.ಕೆ. ಮೂರ್ತಿ ಅವರು ಪ್ರಾದೇಶಿಕ ಭಾಷೆಯಲ್ಲಿ ಮೊಟ್ಟಮೊದಲ ಧಾರಾವಾಹಿ ನಿರ್ಮಿಸಿದವರು. An investigation thriller  Lipstick Murder hits screens this week

ತಂದೆಯಂತೆಯೇ ತಮ್ಮ ಎಲ್ಲಾ ಚಿತ್ರಗಳಲ್ಲಿ ಹೊಸಬರಿಗೆ ಅವಕಾಶ ನೀಡಿ ಬೆಳೆಸುವ ಪರಿಪಾಠ ಬೆಳೆಸಿಕೊಂಡು ಬಂದಿರುವ ರಾಜೇಶ್ ಮೂರ್ತಿ ಅವರ ನಿರ್ದೇಶನದ ಏಳನೇ ಚಿತ್ರ ‘ಲಿಪ್ ಸ್ಟಿಕ್ ಮರ್ಡರ್’ ದಿ. 16ರ ಶುಕ್ರವಾರ ರಾಜ್ಯಾದ್ಯಂತ ತೆರೆಕಾಣುತ್ತಿದೆ. ಒಬ್ಬ ಅಬ್ ನಾರ್ಮಲ್ ಯುವತಿಯ ಕಥೆ ಇಟ್ಟುಕೊಂಡು ರಿವೇಂಜ್ ಸ್ಟೋರಿಯನ್ನು ತೆರೆಮೇಲೆ ತಂದಿದ್ದಾರೆ. ನಮಗೆ ಗೊತ್ತಿಲ್ಲದ ಅಪರಿಚಿತರು ಕರೆದಜಾಗಕ್ಕೆ ಯಾವತ್ತೂ ಹೋಗಬಾರದು.ಅದು ತುಂಬಾ ಡೇಂಜರ್ ಎಂಬ ಸಂದೇಶವನ್ನು ಈ ಚಿತ್ರದ ಮೂಲಕ ಹೇಳಹೊರಟಿದ್ದಾರೆ. ನಟ, ರೂಪದರ್ಶಿ ಆರ್ಯನ್‌ರಾಜ್ ಈ ಚಿತ್ರದ ನಾಯಕನಾಗಿದ್ದು, ಕಥೆಯಲ್ಲಿ ನಡೆಯುವ ಸರಣಿ ಕೊಲೆಗಳನ್ನು ಪತ್ತೆಹಚ್ಚುವ ಪೋಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. An investigation thriller  Lipstick Murder hits screens this week

ಇನ್ವೆಸ್ಟಿಗೇಶನ್ ಕ್ರೈಮ್ ಥ್ರಿಲ್ಲರ್ ಕಥಾಹಂದರ ಹೊಂದಿದ ಲಿಪ್‌ಸ್ಟಿಕ್ ಮರ್ಡರ್ ಚಿತ್ರಕ್ಕೆ ಸೆನ್ಸಾರ್ ಮಂಡಳಿಯಿಂದ ಯಾವುದೇ ಕಟ್ ಇಲ್ಲದೆ ಯು/ಎ ಸರ್ಟಿಫಿಕೇಟ್ ಸಿಕ್ಕಿದೆ.
ಸಿನಿವ್ಯಾಲಿ ಕ್ರಿಯೇಶನ್ಸ್ ಮೂಲಕ ಬಿ.ಎಸ್. ಮಂಜುನಾಥ್ ಹಾಗೂ ರಾಜೇಶ್‌ಮೂರ್ತಿ ಸೇರಿ ನಿರ್ಮಿಸಿರುವ ಈ ಚಿತ್ರದಲ್ಲಿ ಆನ್‌ಲೈನ್ ಡೇಟಿಂಗ್ ಆಪ್ ಮೂಲಕ ಯುವತಿಯರು, ಯುವಕರನ್ನು ಯಾವರೀತಿ ತಮ್ಮ ಬಲೆಗೆ ಬೀಳಿಸಿಕೊಂಡು ಮೋಸ ಮಾಡುತ್ತಾರೆ ಎಂಬುದನ್ನು ಹೇಳಲಾಗಿದೆ. An investigation thriller  Lipstick Murder hits screens this week

ಡೇಟಿಂಗ್ ಆಪ್ ಮೂಲಕ ಮಹಿಳೆಯರು ಕರೆಯುವ ಜಾಗಕ್ಕೆ ಹೋಗುವ ಯುವಕರು ಯಾವರೀತಿ ಕೊಲೆಯಾಗುತ್ತಾರೆ, ನಾಯಕಿ ಏಕೆ ಇಂಥ ಯುವಕರನ್ನು ಟಾರ್ಗೆಟ್ ಮಾಡುತ್ತಾಳೆ ಎನ್ನುವುದೇ ಈ ಚಿತ್ರದ ಕಥೆ. ಸರಣಿ ಕೊಲೆಗಳ ಹಿಂದಿರುವ ರಹಸ್ಯವನ್ನು ಇನ್ವೆಸ್ಟಿಗೇಶನ್ ಆಫೀಸರ್ ಪತ್ತೆಹಚ್ಚಿ ಆ ಕೊಲೆಗಾರ್ತಿ ಯಾರು, ಕೊಲೆಯಾದವರಿಗೂ ಆಕೆಗೂ ಏನಾದರೂ ಸಂಬಂಧವಿತ್ತೇ, ಆಕೆಯೇನು ಕಿಲ್ಲರಾ, ಒಬ್ಬ ಸೈಕೋನಾ ? ಹೀಗೆ ಏಳುವ ಹಲವಾರು ಸಂದೇಹಗಳಿಗೆ ಚಿತ್ರದಲ್ಲಿ ಉತ್ತರವಿದೆ. An investigation thriller  Lipstick Murder hits screens this week

ಹೈದರಾಬಾದ್ ಮೂಲದ ಅಲೈಕಾ ಈ ಚಿತ್ರದ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ನಿತೀಶ್‌ಕುಮಾರ್ ಅವರ ಸಂಗೀತ ಸಂಯೋಜನೆ, ಆರ್.ವಿನೋದ್ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ. An investigation thriller  Lipstick Murder hits screens this week

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…