ಪೋಸ್ಟ್ ಪ್ರೊಡಕ್ಷನ್ ನಲ್ಲಿ ‘ಆರಾಮ್ ಅರವಿಂದ್ ಸ್ವಾಮಿ’ ಬ್ಯುಸಿ..ಯಾವಾಗ ಬರಲಿದೆ ಅಭಿಷೇಕ್-ಅನೀಶ್ ಕಾಂಬೋದ ಸಿನಿಮಾ..?

Aram Arvind Swamy Anish

ಫಸ್ಟ್ ಲುಕ್ ಹಾಗೂ ಪ್ರಮೋಷನಲ್ ವಿಡಿಯೋ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಆರಾಮ್ ಅರವಿಂದ್ ಸ್ವಾಮಿ ಸಿನಿಮಾ ಸದ್ದಿಲ್ಲದೇ ಚಿತ್ರೀಕರಣ ಮುಗಿಸಿ ಸದ್ಯ ಪೋಸ್ಟ್ ಪ್ರೊಡಕ್ಷನ್ ನಲ್ಲಿ ಬ್ಯುಸಿಯಾಗಿದೆ. ಅಭಿಷೇಕ್ ಶೆಟ್ಟಿ ಹಾಗೂ ಅನೀಶ್ ತೇಜೇಶ್ವರ್ ಕಾಂಬಿನೇಷ್ ನಲ್ಲಿ ಮೂಡಿ ಬರ್ತಿರುವ ಈ ಚಿತ್ರದಲ್ಲಿ ಮಿಲನ ನಾಗರಾಜ್ ಹಾಗೂ ಹೃತಿಕ ಶ್ರೀನಿವಾಸ್ ನಾಯಕಿಯರಾಗಿ ನಟಿಸಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ಹಂಚಿಕೊಂಡಿದೆ ಚಿತ್ರತಂಡ.Aram Arvind Swamy Anish

ನಟ ಅನೀಶ್ ಮಾತನಾಡಿ, ಪ್ರತಿಯೊಂದು ಅಂತ್ಯದಲ್ಲೊಂದು ಆರಂಭ ಇರುತ್ತದೆ ಎಂಬ ಹಾಗೇ ಬೆಂಕಿ ಕಲೆಕ್ಷನ್ ಎಲ್ಲಾ ನೋಡಿ ಎಂಡ್ ಪಾಯಿಂಟ್ ನಲ್ಲಿ ಇದ್ದೇನಾ ಅನಿಸಿತು. ನನ್ನಿಂದ ಪ್ರೇಕ್ಷಕರು ಬೇರೆಯದ್ದನ್ನೂ ನಿರೀಕ್ಷೆ ಮಾಡುತ್ತಿದ್ದಾರೆ ಎಂಬುವುದು ಗೊತ್ತಾಯಿತು. ನನಗೆ ಅಂತಾ ಮಾಡಿಕೊಂಡ ಸಬ್ಜೆಕ್ಟ್ ನ್ನು ನಿನಗೆ ಅಂತಾ ಹೇಳುತ್ತೇನೆ. ಆರಾಮ್ ಅರವಿಂದ್ ಸ್ವಾಮಿ ಎಂದು ಅನೌನ್ಸ್ ಮಾಡಿದ್ದೇನೆ ಎಂದು ಅಭಿಷೇಕ್ ಶೆಟ್ಟಿ ಹೇಳಿದರು. ನಿನಗೆ ಅಂತಾ ಮಾಡಿಕೊಂಡಿದ್ದನ್ನೂ ನನಗೆ ಯಾಕೆ ಹೇಳುತ್ತೀಯಾ? ಅಂದಾಗ, ಇಲ್ಲ ನಿಮಗೆ ಮಾಡುತ್ತೇನೆ ಎಂದು ಕಥೆ ಹೇಳಿದರು. ಕಥೆ ಇಷ್ಟವಾಯ್ತು 15 ನಿಮಿಷದಲ್ಲಿ ಸಿನಿಮಾ ಮಾಡೋಣಾ ಎಂದು ರೆಡಿಯಾದೆವು. ಸಿನಿಮಾ ಹುಚ್ಚಿರುವ ಎಲ್ಲರೂ ಸೇರಿ ಮಾಡಿರುವ ಸಿನಿಮಾವೇ ಆರಾಮ್ ಅರವಿಂದ್ ಸ್ವಾಮಿ ಎಂದರು.Aram Arvind Swamy Anish

ನಟಿ ಮಿಲನಾ ನಾಗರಾಜ್ ಮಾತನಾಡಿ, ಆರಾಮ್ ಅರವಿಂದ್ ಸ್ವಾಮಿ ಸಿನಿಮಾದ ಕಥೆಯನ್ನು ಅಭಿಷೇಕ್ ಅವರು ಬಂದು ಕಥೆ ಹೇಳಿದರು. ಅನೀಶ್ ಅವರ ಜೊತೆ ಸಿನಿಮಾ ಮಾಡೋದು..ಈ ಎರಡು ನನಗೆ ಎಕ್ಸೈಟ್ ಅನಿಸಿತು. ಇಲ್ಲಿವರೆಗೂ ಮಾಡಿದ ಸಿನಿಮಾಗಳಿಗಿಂತ ಈ ಚಿತ್ರದಲ್ಲಿ ನನ್ನ ವಿಭಿನ್ನವಾಗಿದೆ. ಒಂದೊಳ್ಳೆ ತಂಡದ ಜೊತೆ ಕೆಲಸ ಮಾಡಿರುವ ಅನುಭವ ನನಗೆ. ನಾನು ಸಿನಿಮಾ ನೋಡಿಲ್ಲ. ಸಿನಿಮಾ ನೋಡಲು ನಾನು ಎಕ್ಸೈಟ್ ಆಗಿದ್ದಾನೆ. ಅನೀಶ್ ಅವರಿಗೆ ಈ ಕಥೆ ವಿಭಿನ್ನವಾಗಿದೆ ಅನಿಸುತ್ತದೆ. ನಿಮ್ಮ ಆಶೀರ್ವಾದ ನಮ್ಮ ಮೇಲೆ ಇರಲಿದೆ ಎಂದರು.

ಭಗವದ್ಗೀತೆಯಲ್ಲಿ ಎಲ್ಲವೂ ಇದೆ ಆದರೆ ಸುಳ್ಳಿಲ್ಲ

ನಿರ್ದೇಶಕ ಅಭಿಷೇಕ್ ಶೆಟ್ಟಿ ಮಾತನಾಡಿ, ಗುಳ್ಟು ಪ್ರೊಡ್ಯೂಸರ್ ಹಾಗೂ ಅಕೀರಾ ಸಿನಿಮಾ ಪ್ರೊಡ್ಯೂಸರ್ ಒಂದೊಳ್ಳೆ ಕಥೆ ಇದ್ದ ಹೇಳಿ ಎಂದರು. ಕಥೆ ಹೇಳಿದೆ. ಅನೀಶ್ ಅವರಿಗೆ ಕಥೆ ಹುಡುಕುತ್ತಿರುವುದು ಎಂದು ಗೊತ್ತಾಯಿತು. ನಾನು ಒಂದು ಮಾಸ್ ಕಥೆ ಮಾಡಿಕೊಂಡು ಬಂದು ಹೇಳಿದೆ. ಒಪ್ಪಿಕೊಳ್ತಾರೆ ಎಂದುಕೊಂಡಿದ್ದರು, ಅವರು ಔಟ್ ಆಫ್ ದಿ ಬಾಕ್ಸ್ ಕಥೆ ಮಾಡಲು ರೆಡಿ ಇದ್ದರು. ಆಗ ಹೇಳಿದ್ದೇ ಆರಾಮ್ ಅರವಿಂದ್ ಸ್ವಾಮಿ ಕಥೆ. ಎಲ್ಲರೂ ಬಂದು ಆರಾಮ್ ಗೆ ಇದ್ದೀಯಾ ಅಂದು ಕೇಳ್ತಾರೆ. ಯಾರಿಗೂ ನಮ್ಮ ಕಷ್ಟ ಹೇಳೋದಿಕ್ಕೆ ಆಗಲ್ಲ. ಹೇಳಿದ್ರೆ ಸಹಾಯ ಮಾಡ್ತೀಯಾ ಅನ್ನುತ್ತೇವೆ. ಅವರು ನಕ್ಕು ಸುಮ್ಮನೇ ಆಗುತ್ತಾರೆ. ಈ ಬೇಸ್ ಲೈನ್ ಮೇಲೆ ಶುರುವಾದ ಕಥೆ..ಅದ್ಭುತವಾಗಿ ಸಿನಿಮಾ ಬಂದಿದೆ. ಎರಡು ಸಿನಿಮಾ ಆದಾಗ ಎಲ್ಲರೂ ಒಳ್ಳೆ ಭವಿಷ್ಯವಿದೆ ಎನ್ನುವರು. ಆದರೆ ಆರಾಮ್ ಅರವಿಂದ್ ಸ್ವಾಮಿಯೇ ನನ್ನ ಭವಿಷ್ಯ. ಈ ಸಿನಿಮಾದಿಂದ ನನ್ನ ಭವಿಷ್ಯ ಶುರುವಾಗ್ತಿದೆ. ಸಿನಿಮಾಗೆ ಏನೂ ಬೇಕು ಎಲ್ಲವನ್ನೂ ನಿರ್ಮಾಪಕರು ಕೊಟ್ಟಿದ್ದಾರೆ. ಪಾತ್ರ ವರ್ಗ ಎಲ್ಲಾ ಅಭಿನಯವೂ ಚೆನ್ನಾಗಿದೆ ಎಂದರು.Aram Arvind Swamy Anish

ನಟಿ ಹೃತಿಕಾ ಶ್ರೀನಿವಾಸ್ ಮಾತನಾಡಿ, ಆರಾಮ್ ಅರವಿಂದ್ ಸ್ವಾಮಿ ನನ್ನ ಎರಡನೇ ಸಿನಿಮಾ. ನನ್ನ ಪಾತ್ರ ಬಹಳ ವಿಭಿನ್ನವಾಗಿದೆ. ನನ್ನ ಪಾತ್ರ ಕೇಳಿದಾಗಲೇ ಥ್ರಿಲ್ ಆಗಿದ್ದೇ. ಪ್ರಾಕ್ಟೀಸ್ ಮಾಡಿ, ಹರ್ಡ್ ವರ್ಕ್ ಪಾತ್ರ ಮಾಡಿದ್ದೇನೆ,. ಒಂದೊಳ್ಳೆ ತಂಡದ ಜೊತೆ ಕೆಲಸ ಮಾಡಿದ ಖುಷಿ ಇದೆ. ಆರಾಮ್ ಅರವಿಂದ್ ಸ್ವಾಮಿ ಒಂದೊಳ್ಳೆ ಸಿನಿಮಾ. ನಿಮ್ಮ ಬೆಂಬಲ ಚಿತ್ರದ ಮೇಲೆ ಇರಲಿ ಎಂದರು.

ನೀವು ನಿಮ್ಮ ಜೀವನವನ್ನು ಬದಲಾಯಿಸಲು ಶ್ರೀ ಕೃಷ್ಣನ ನುಡಿಮುತ್ತು

ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯ ಸಂಗೀತ ನಿರ್ದೇಶನದಲ್ಲಿ ಸಿನಿಮಾ ಮೂಡಿ ಬರ್ತಿದ್ದು, ‘ಅಕಿರ’ ಸಿನಿಮಾ ಖ್ಯಾತಿಯ ಶ್ರೀಕಾಂತ್ ಪ್ರಸನ್ನ, ‘ಗುಳ್ಟು’ ಸಿನಿಮಾ ಖ್ಯಾತಿಯ ಪ್ರಶಾಂತ್ ರೆಡ್ಡಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರಕ್ಕೆ ಸಾಗರ್ ಛಾಯಾಗ್ರಹಣ, ಉಮೇಶ್ ಸಂಕಲನವಿದೆ. ‘ನಮ್ ಗಣಿ ಬಿಕಾಂ ಪಾಸ್, ‘ಗಜಾನನ ಅಂಡ್ ಗ್ಯಾಂಗ್’ ಸಿನಿಮಾಗಳ ಮೂಲಕ ಭರವಸೆ ಮೂಡಿಸಿರುವ ಅಭಿಷೇಕ್ ಶೆಟ್ಟಿ ಅವರಿಗೆ ಆರಾಮ್ ಅರವಿಂದ್ ಸ್ವಾಮಿ ಮೂನರೇ ಸಿನಿಮಾ. ಈ ಚಿತ್ರದ ಮೂಲಕ ಅನೀಶ್ ತೇಜೇಶ್ವರ್ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. ಬೆಂಗಳೂರು, ಕೇರಳ, ಕನಕಪುರ, ಮೈಸೂರು ಭಾಗದಲ್ಲಿ ಚಿತ್ರದ ಚಿತ್ರೀಕರಣ ನಡೆಸಲಾಗಿದೆ. ಮುಂದಿನ ತಿಂಗಳು ಟೈಟಲ್ ಟ್ರ್ಯಾಕ್ ಬಿಡುಗಡೆ ಮಾಡುವ ಮೂಲಕ ಪ್ರಚಾರ ಕಾರ್ಯ ಶುರು ಮಾಡಲಿರುವ ಚಿತ್ರತಂಡ ಜನವರಿ ತಿಂಗಳಲ್ಲಿ ಸಿನಿಮಾವನ್ನು ತೆರೆಗೆ ತರಲಿದೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…