ಮೇ 23 ರಿಂದ ಸ್ಟಾರ್ ಸುವರ್ಣದಲ್ಲಿ “ಅರ್ಧಾಂಗಿ”.ಸಂಜೆ 7 ಗಂಟೆಗೆ ನೋಡಲು ಸಿದ್ದರಾಗಿ.

ಧಾರಾವಾಹಿ ಪ್ರಿಯರಿಗೆ ಸಿಹಿಸುದ್ದಿ. ವಿನೂತನ ಧಾರಾವಾಹಿಗಳನ್ನು ಹಾಗೂ ವಿಭಿನ್ನ ಶೋಗಳನ್ನು ನೋಡುಗರಿಗೆ ನೀಡುತ್ತಿರುವ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಇದೇ ಮೇ 23 ರಿಂದ ಆರಂಭವಾಗಲಿದೆ. ಸಂಜೆ 7 ಗಂಟೆಗೆ ಈ ಧಾರಾವಾಹಿ ಪ್ರಸಾರವಾಗಲಿದೆ. ಖ್ಯಾತ ನಟಿ ಪ್ರಿಯಾಂಕ ಉಪೇಂದ್ರ ಈ ಧಾರಾವಾಹಿಯ ರಾಯಭಾರಿಯಾಗಿದ್ದಾರೆ.maxresdefault 1 e1652924852755

ನನ್ನ ಸ್ನೇಹಿತೆ ಉಷಾ ಅವರು ಈ ಧಾರಾವಾಹಿಯ ಕುರಿತು ಹೇಳಿದರು. ನಂತರ ಕಥೆ ಕೇಳಿದೆ. ಇಷ್ಟವಾಯಿತು. ರಾಯಭಾರಿಯಾಗಲು ಒಪ್ಪಿಕೊಂಡೆ. ಒಳ್ಳೆಯ ಕೌಟುಂಬಿಕ ಧಾರಾವಾಹಿ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಟಿ ಪ್ರಿಯಾಂಕ ಉಪೇಂದ್ರ.WhatsApp Image 2022 05 18 at 9.32.21 PM 1

ಚಿಕ್ಕವಯಸ್ಸಿನಲ್ಲೇ ತಾಯಿಯನ್ನು ಕಳೆದುಕೊಂಡ ಅದಿತಿ,‌ ಮಲತಾಯಿ ಆಶ್ರಯದಲ್ಲಿ ಬೆಳೆಯುತ್ತಾಳೆ. ಮಲತಾಯಿ‌ ಮಕ್ಕಳನ್ನು ಸ್ವಂತ ತಂಗಿ-ತಮ್ಮ ಎಂದು ನೋಡಿಕೊಳ್ಳುತ್ತಾಳೆ.‌ ಈ ಸಂದರ್ಭದಲ್ಲಿ ಆಕೆ ಒಂದು ತ್ಯಾಗಕ್ಕೆ ಸಿದ್ದಾವಾಗಬೇಕಾಗುತ್ತದೆ.‌ ಇಪ್ಪತ್ತೆಂಟು ವರ್ಷವಾಗಿದ್ದರೂ, ಎಂಟು ವರ್ಷದ ಮಗುವಿನಷ್ಟೇ ಬುದ್ದಿಯಿರುವ ದಿಗಂತ್ ಎಂಬ ಹುಡುಗನನ್ನು ಮದುವೆಯಾಗಬೇಕಾಗುತ್ತದೆ. ನಂತರ ಏನಾಗುತ್ತದೆ? ಎಂಬುದೆ ಧಾರಾವಾಹಿಯ ಕಥೆ ಎಂದು ನಿರ್ದೇಶಕ ಎಂ ಕುಮಾರ್ ತಿಳಿಸಿದರು.WhatsApp Image 2022 05 19 at 7.05.04 AM

ನನಗೆ ಈ ಪಾತ್ರ ಹೇಳಿದ ತಕ್ಷಣ ” ಸ್ವಾತಮುತ್ತು” ಚಿತ್ರ ನೆನಪಾಯಿತು. ಈ ಪಾತ್ರ ಮಾಡುವುದು ಅಷ್ಟು ಸುಲಭವಲ್ಲ. ಹಾಗಾಗಿ ನಾನು ವಿಶೇಷ ಮಕ್ಕಳಿರುವ “ಅರುಣ ಚೇತನ” ಶಾಲೆಯಲ್ಲಿ ಅವರೊಂದಿಗೆ ಎರಡು ದಿನ ಕಳೆದಿದ್ದೇನೆ ಎಂದು ದಿಗಂತ್ ಪಾತ್ರಧಾರಿ ಪೃಥ್ವಿ ಶೆಟ್ಟಿ ತಿಳಿಸಿದರು.WhatsApp Image 2022 05 18 at 9.32.20 PM

ಕೆಳ‌ ಮಧ್ಯಮದ ಹುಡುಗಿ ಪಾತ್ರ ನನ್ನದು. ಜೀವನದಲ್ಲಿ ಎಷ್ಟೇ ಕಷ್ಟ ಬಂದರೂ ಅಂಜದೇ ನಡೆಯುವ ಹುಡುಗಿ. ತುಂಬಾ ಪ್ರಬುದ್ಧ ಹುಡುಗಿಯ ಪಾತ್ರ ನನ್ನದು ಎಂದರು ಅದಿತಿ ಪಾತ್ರಧಾರಿ ಅಂಜನ ದೇಶಪಾಂಡೆ.

ನನಗೆ ಸ್ಟಾರ್ ಸುವರ್ಣದ ಸ್ನೇಹಿತರೊಬ್ಬರು ಈ ಕಥೆ ಕಳುಹಿಸಿದ್ದರು. ರಾತ್ರಿ ಹನ್ನೊಂದರಿಂದ ಬೆಳಗ್ಗಿನ ಜಾವ ನಾಲ್ಕು ಗಂಟೆವರೆಗೂ ಕಥೆ ಓದಿದೆ. ಇಷ್ಟವಾಯಿತು. ನಿರ್ಮಾಣಕ್ಕೆ ಮುಂದಾದೆ ಎಂದರು ನಿರ್ಮಾಪಕ ಶ್ರೀನಾಥ್ ರಘುರಾಮ್.WhatsApp Image 2022 05 18 at 9.32.21 PM

“ಅರುಣ ಚೇತನ” ವಿಶೇಷ ಮಕ್ಕಳ ಶಾಲೆಯ ಮುಖ್ಯಸ್ಥೆ ಗಾಯಿತ್ರಿ ಪಂಜು ಅವರು ವಿಶೇಷ ಮಕ್ಕಳ ದೈನಂದಿನ ದಿನಚರಿ ಬಗ್ಗೆ ಮಾಹಿತಿ ನೀಡಿದರು. ಸ್ಟಾರ್ ಸುವರ್ಣ ವಾಹಿನಿಯ ಬ್ಯುಸಿನೆಸ್ ಹೆಡ್ ಸುಷ್ಮ ಎಲ್ಲರನ್ನು ಸ್ವಾಗತಿಸಿದರು.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…