‘ಬೈರಾಗಿ’ಯ ಬೊಂಬಾಟ್‌ ಮಾತು!

ಶಿವರಾಜ್ಕುಮಾರ್ ಅಂದರೆ ಕಮರ್ಷಿಯಲ್ ಅಥವಾ ಮಾಸ್ ಚಿತ್ರಗಳಾಗಿರಬೇಕು ಎಂದು ಅವರ ಅಭಿಮಾನಿಗಳು ಆಸೆಪಡುವುದು ಸಹಜ. ಏಕೆಂದರೆ, ಶಿವರಾಜ್ಕುಮಾರ್ ತಮ್ಮ ಹಲವು ಚಿತ್ರಗಳಲ್ಲಿ ಲಾಂಗ್ ಕೈಯಲ್ಲಿ ಹಿಡಿದು ತೆರೆಯ ಮೇಲೆ ಮಿಂಚಿದ್ದಾರೆ. ಮಾಸ್ ಚಿತ್ರಗಳ ಜೊತೆಗೆ ಫಿಲಾಸಫಿಯತ್ತಲೂ ಶಿವರಾಜ್ಕುಮಾರ್ ಇತ್ತೀಚೆಗೆ ಹೆಚ್ಚುಹೆಚ್ಚು ಆಕರ್ಷಿತರಾಗುತ್ತಿದ್ದಾರಂತೆ. ಹಾಗಂತ ಅವರೇ ಇತ್ತೀಚೆಗೆ ಖುದ್ದಾಗಿ ಹೇಳಿಕೊಂಡಿದ್ದಾರೆ. ಅಷ್ಟೇ ಅಲ್ಲ, ಜುಲೈ 01ರಂದು ಬಿಡುಗಡೆಯಾಗುತ್ತಿರುವ ‘ಬೈರಾಗಿ’ ಚಿತ್ರದಲ್ಲೂ ಒಂದು ಫಿಲಾಸಫಿ ಇದೆ ಎನ್ನುತ್ತಾರೆ ಅವರು.bairagi motion poster e1656476018207

’ಬೈರಾಗಿ’ ಕುರಿತು ಮಾತನಾಡುವ ಅವರು, ‘ಇತ್ತೀಚೆಗೆ ಯಾಕೋ ಫಿಲಾಸಪಿ ವಿಷಯ ಬಹಳ ಆಕರ್ಷಿತವಾಗುತ್ತಿದೆ. ಬಹುಶಃ ನನ್ನ ವಯಸ್ಸು ಸಹ ಅದಕ್ಕೆ ಕಾರಣವಿರಬಹುದು. ಇನ್ನೇನು ಇದೇ ಜುಲೈ 12ಕ್ಕೆ 60ಕ್ಕೆ ಕಾಲಿಡುತ್ತಿದ್ದೇನೆ. ನನ್ನ ಕೈಯಲ್ಲಿ ಸದ್ಯ ಎಂಟ್ಹತ್ತು ಸಿನಿಮಾಗಳಿದ್ದು, ಇವುಗಳ ಪೈಕಿ ಕೆಲವು ಫಿಲಾಸಫಿ ಸಿನಿಮಾಗಳು ಸಹ ಇವೆ. ಹಾಗಂತ ನಾನು ಯಾವುದನ್ನೂ ಹುಡುಕಿಕೊಂಡು ಹೋಗುತ್ತಿಲ್ಲ. ನನ್ನಿಂದ ಇಂಥದ್ದೊಂದು ವಿಷಯವನ್ನು ಹೇಳಿಸಿದರೆ ಚೆನ್ನಾಗಿರುತ್ತದೆ ಎಂದು ನಿರ್ದೇಶಕರೇ ನನ್ನಿಂದ ಇಂಥ ಕಥೆಗಳನ್ನು ಹೇಳಿಸುವ ಪ್ರಯತ್ನ ಮಾಡುತ್ತಿದ್ದಾರೆ. ಬೈರಾಗಿ ಸಹ ಅಂಥದ್ದೇ ಒಂದು ಚಿತ್ರ ಎನ್ನುತ್ತಾರೆ ಶಿವಣ್ಣ. ಈ ಚಿತ್ರ ಯಾವ ವಿಷಯದ ಕುರಿತಾಗಿ ಇರುತ್ತದೆ ಎಂಬ ಪ್ರಶ್ನೆಗೆ ಅವರು ಉತ್ತರಿಸುವುದಿಲ್ಲ. ಚಿತ್ರಮಂದಿರಗಳಲ್ಲೇ ನೇರವಾಗಿ ನೋಡಿ’ ಎಂಬ ಉತ್ತರ ಅವರಿಂದ ಬರುತ್ತದೆ.image 1850 1 1

‘ಬೈರಾಗಿ’ ಚಿತ್ರದಲ್ಲಿ ಕಥೆಯೇ ಹೀರೋ, ನಾವೆಲ್ಲ ಪಾತ್ರದಾರಿಗಳು ಎನ್ನುವ ಅವರು, ‘’ಟಗರು’ ಚಿತ್ರದ ನಂತರ ನಾನು ಮತ್ತು ಧನಂಜಯ ಮತ್ತೊಮ್ಮೆ ಜೊತೆಯಾಗಿ ನಟಿಸಿದ್ದೇವೆ. ಈ ಚಿತ್ರವು ಟಗರು ಚಿತ್ರಕ್ಕಿಂತಲೂ ವಿಭಿನ್ನವಾಗಿರುವ ಚಿತ್ರ. ಟಗರು ಸಿನಿಮಾದ ರೀತಿಯ ನಿರೀಕ್ಷೆಗಳನ್ನು ಇಟ್ಟುಕೊಳ್ಳಬೇಡಿ. ಈ ಚಿತ್ರವೇ ಬೇರೆ. ಹಾಗಂತ ಬೈರಾಗಿ ಪ್ರೇಕ್ಷಕರ ನಿರೀಕ್ಷೆಗಳನ್ನು ಹುಸಿಗೊಳಿಸುವುದಿಲ್ಲ. ಇದು ಭಾವನೆಯ ಮೇಲೆ ಸಾಗುವ ಸಿನಿಮಾ. ಪ್ರತಿಯೊಬ್ಬರಿಗೂ ಭಾವನೆಗಳು ಇರುತ್ತವೆ. ಚಿತ್ರದಲ್ಲಿ ಬರುವ ಪ್ರತಿಯೊಂದು ಪಾತ್ರಗಳಿಗೂ ಒಂದು ಕಾರಣ ಇದೆ ಮತ್ತು ಮಹತ್ವ ಸಹ ಇದೆ. ಸಿನಿಮಾ ಮುಂದುವರೆಯುತ್ತಿದ್ದಂತೆಯೇ ಎಲ್ಲ ಪಾತ್ರಗಳೂ ಬಹಳ ಚೆನ್ನಾಗಿ ಕನೆಕ್ಟ್ ಆಗುತ್ತವೆ. ಪ್ರತಿಯೊಬ್ಬರಿಗೂ ಆಸೆ, ಆಕಾಂಕ್ಷೆಗಳು ಇರುತ್ತವೆ. ಆದರೆ, ಅದೆಲ್ಲವನ್ನೂ ಮೀರಿದ್ದು ಮನುಷ್ಯತ್ವ ಎಂಬ ಸಂದೇಶವನ್ನು ಈ ಚಿತ್ರದ ಮೂಲಕ ಸಾರಲಾಗಿದೆ’ ಎನ್ನುತ್ತಾರೆ ಶಿವಣ್ಣ.

ಈ ಚಿತ್ರವು ‘ಟಗರು’ ತರಹ ಇರುತ್ತದೆ ಎಂದು ನೋಡಬೇಡಿ ಎಂದು ಮನವಿ ಮಾಡುವ ಧನಂಜಯ, ‘‘ಬೈರಾಗಿ’ಯು ‘ಟಗರು’ಗಿಂತ ವಿಭಿನ್ನವಾದ ಮತ್ತು ಗಂಭೀರವಾದ ಸಿನಿಮಾ. ಹಾಗಾಗಿ, ‘ಬೈರಾಗಿ’ ಸಿನಿಮಾ ಬೇರೆಯದ್ದೇ ಅನುಭವ ನೀಡಲಿದೆ. ಶಿವಣ್ಣ ಅವರೊಂದಿಗೆ ಎರಡು ಚಿತ್ರಗಳಲ್ಲಿ ನಟಿಸುವ ಅವಕಾಶ ಸಿಕ್ಕಿದೆ. ಮುಂದೊಂದು ದಿನ ಅವರ ಚಿತ್ರವನ್ನು ನಿರ್ಮಾಣ ಮತ್ತು ನಿರ್ದೇಶನ ಮಾಡಬೇಕು ಎಂಬ ಆಸೆ ಇದೆ ಎನ್ನುವ ಅವರು ಮುಂದೊಂದು ದಿನ ಅಂಥದ್ದೊಂದು ಕಾಲ ಕೂಡಿ ಬರಲಿ’ ಎಂದು ಆಶಯ ವ್ಯಕ್ತಪಡಿಸುತ್ತಾರೆ.

‘ಬೈರಾಗಿ’ ಚಿತ್ರದಲ್ಲಿ ಪೃಥ್ವಿ ಅಂಬರ್, ಅಂಜಲಿ, ಯಶಾ ಶಿವಕುಮಾರ್, ಶಶಿಕುಮಾರ್ ಮುಂತಾದವರು ಸಹ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ತಮಿಳಿನ ಜನಪ್ರಿಯ ಛಾಯಾಗ್ರಾಹಕ ವಿಜಯ್ ಮಿಲ್ಟನ್ ಕನ್ನಡದಲ್ಲಿ ಮೊದಲ ಬಾರಿಗೆ ನಿರ್ದೇಶಿಸಿರುವ ಈ ಚಿತ್ರವನ್ನು ಕೃಷ್ಣ ಸಾರ್ಥಕ್ ನಿರ್ಮಿಸಿದ್ದು, ಅನೂಪ್ ಸೀಳಿನ್ ಸಂಗೀತ ಸಂಯೋಜಿಸಿದ್ದಾರೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…