ಬಾಲಿವುಡ್‍ನ ಬಿಗ್ ಆಫರ್‍ಗೆ ಬೇಡ ಅಂದರೇಕೆ ಬನಾರಸ್ ಹೀರೋ?

Banaras hero is not the big offer of Bollywood?

ಇದು ಝೈದ್ ಖಾನ್ ಕನ್ನಡ ಪ್ರೇಮ!

ಕನ್ನಡವೂ ಸೇರಿದಂತೆ ಐದು ಭಾಷೆಗಳಲ್ಲಿ ಬಿಡುಗಡೆಯಾಗಿದ್ದ ಬನಾರಸ್ ಎಲ್ಲ ಭಾಷೆಗಳ ಪ್ರೇಕ್ಷಕರ ಮನಗೆದ್ದಿದೆ. ಅದರಲ್ಲಿಯೂ ವಿಶೇಷವಾಗಿ ಕನ್ನಡದ ಪ್ರೇಕ್ಷಕರಂತೂ ಝೈದ್ ಖಾನ್ ನಟನೆ ಕಂಡು ಭೇಷ್ ಅಂದಿದ್ದಾರೆ. ಮೊದಲ ಸಿನಿಮಾದಲ್ಲಿಯೇ ಪಳಗಿದ ನಟನಂತೆ ನಟಿಸಿರೋ ಝದ್‍ಗೆ ಎಲ್ಲ ದಿಕ್ಕಿನಿಂದಲೂ ಮೆಚ್ಚುಗೆಯ ಮಾತುಗಳು ಕೇಳಿ ಬರುತ್ತಿವೆ. ಝೈದ್ ಮುಂದಿನ ದಿನಗಳಲ್ಲಿ ಖಂಡಿತವಾಗಿಯೂ ಮುಖ್ಯ ನಾಯಕನಾಗಿ ನೆಲೆ ಕಂಡುಕೊಳ್ಳುತ್ತಾರೆಂಬಂಥಾ ನಂಬಿಕೆಯೂ ಬಲಗೊಂಡಿದೆ.Banaras hero is not the big offer of Bollywood?

ಇದೇ ಹೊತ್ತಿನಲ್ಲಿ ಝೈದ್ ಖಾನ್ ಅವರಿಗೆ ಬಾಲಿವುಡ್ಡಿನಿಂದ ಬಿಗ್ ಆಫರ್ ಒಂದು ಬಂದಿದೆ. ಹಿಂದಿಯ ಖ್ಯಾತ ನಿರ್ದೇಶಕರೋರ್ವರು ಝೈದ್ ಒಂದೊಳ್ಳೆ ಕಥೆ ಹಿಡಿದು ಝೈದ್‍ರನ್ನು ಸಂಪರ್ಕಿಸಿದ್ದಾರೆ. ಅದು ದೊಡ್ಡ ಬಜೆಟ್ಟಿನ ಚಿತ್ರ. ಪ್ರಸಿದ್ಧ ನಟಿಯೋರ್ವರು ಅದರಲ್ಲಿ ನಟಿಸಲಿದ್ದಾರಂತೆ. ಈ ಅವಕಾಶವನ್ನು ಝೈದ್ ಸೇರಿದಂತೆ ಯಾವ ನಾಯಕನೂ ನಿರಾಕರಿಸಲು ಸಾಧ್ಯವಿರಲಿಲ್ಲ. ಆದರೂ ಕೂಡಾ ಝೈದ್ ಅದನ್ನು ನಿರಾಕರಿಸಿದ್ದಾರೆ. ಅದಕ್ಕೆ ಕಾರಣವಾಗಿರೋದು ಅವರೊಳಗೆ ಹಾಸುಹೊಕ್ಕಾಗಿರುವ ಕನ್ನಡತನ!banaras movie zameer ahmed khan

ಝೈದ್ ಖಾನ್‍ರನ್ನು ಸಂಪರ್ಕಿಸಿದ್ದ ಆ ನಿರ್ದೇಶಕರು ವಿವರಿಸಿದ್ದೆಲ್ಲವೂ ಝೈದ್‍ಗೆ ಇಷ್ಟವಾಗಿತ್ತು. ಆದರೆ ಆ ಚಿತ್ರ ಹಿಂದಿಯಲ್ಲಿ ಮಾತ್ರವೇ ತಯಾರಾಗುತ್ತದೆಂಬ ವಿಚಾರ ಮಾತ್ರ ಝೈದ್ ಅವರಿಗೆ ಹಿಡಿಸಿರಲಿಲ್ಲ. ಅವರು ಕನ್ನಡ ಮತ್ತು ಹಿಂದಿ ಭಾಷೆಗಳಲ್ಲಿ ತಯಾರು ಮಾಡುವಂತೆ ಕೇಳಿಕೊಂಡಿದ್ದರು. ಅದಕ್ಕೆ ಅತ್ತಲಿಂದ ಒಪ್ಪಿಗೆ ಬಂದಿರಲಿಲ್ಲ. ಆಗ ಝೈದ್ ಖಾನ್ `ನೀವು ನನ್ನನ್ನು ಅಪ್ರೋಚ್ ಮಾಡಲು ಕಾರಣವಾಗಿರೋದು ಬನಾರಸ್ ಚಿತ್ರ.banaras movie zameer ahmed khan

ಅದು ಪ್ರಧಾನವಾಗಿ ತಯಾರಾಗಿರೋದು, ಗೆದ್ದಿರೋದು ಕನ್ನಡಿಗರಿಂದಲೇ. ನಾನು ಯಾವ ಕಾರಣಕ್ಕೂ ಕನ್ನಡ ಚಿತ್ರರಂಗವನ್ನು ಬಿಟ್ಟು ಹೋಗಲು ಸಿದ್ಧನಿಲ್ಲ’ ಎಂಬಂಥಾ ನಿಖರ ಉತ್ತರ ನೀಡಿ ಆ ಬಿಗ್ ಆಫರ್ ಅನ್ನು ತಿರಸ್ಕರಿಸಿದ್ದಾರಂತೆ. ಝೈದ್ ಖಾನ್ ಕನ್ನಡಪ್ರೇಮವನ್ನು, ಕನ್ನಡ ಚಿತ್ರರಂಗದ ಮೇಲೆ ಅವರಿಟ್ಟಿರುವ ಅಭಿಮಾನವನ್ನು ಮೆಚ್ಚಿಕೊಳ್ಳಲೇಬೇಕಿದೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…