ಗಡಿನಾಡಿನಲ್ಲಿ ಕನ್ನಡದ ಕಂಪು ಹರಡಿದ ಬನಾರಸ್ ಹೀರೋ!

banaras-movie-hero-zayed-khan-celebrated-karnataka-rajyotsava-in-belagavi

ಕರ್ನಾಟಕದ ಬಹುಭಾಗಗಳಲ್ಲಿ ಯಶಸ್ವಿಯಾಗಿ ರೋಡ್ ಶೋಗಳನ್ನು ನಡೆಸಿದ್ದ ಬನಾರಸ್ ಹೀರೋ ಝೈದ್ ಖಾನ್ ಇದೀಗ ಕನ್ನಡ ರಾಜ್ಯೋತ್ಸವದ ಸಂಭ್ರಮದಲ್ಲಿ ಮಿಂದೇಳುತ್ತಿದ್ದಾರೆ. ವಿಶೇಷವೆಂದರೆ, ಸದಾ ಭಾಷೆ ಮತ್ತು ಗಡಿ ವಿವಾದದಿಂದ ಸದ್ದು ಮಾಡುವ ಬೆಳಗಾವಿಯ ನೆಲದಲ್ಲಿಯೇ ಕನ್ನಡ ರಾಜ್ಯೋತ್ಸವದಲ್ಲಿ ಭಾಗಿಯಾಗಿದ್ದಾರೆ. ಈ ನಿಮಿತ್ತವಾಗಿ ಬೆಳಗಾವಿಗೆ ಬಂದಿಳಿದ ಝೈದ್ ಖಾನ್ ಅವರಿಗೆ ಬೆಳಗಾವಿ ಸೀಮೆಯ ಕನ್ನಡಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಅದ್ದೂರಿ ಸ್ವಾಗತ ಕೋರಲಾಯ್ತು. ಈ ಸಂದರ್ಭದಲ್ಲಿ ಕನ್ನಡಪರ ಹೋರಾಟಗಾರರಾದ ಮನ್ಸೂರ್, ಕನ್ನಡ ರಕ್ಷಣಾ ವೇದಿಕೆಯ ರಾಜು ಕಲ್ಲೂರ್ ಮುಂತಾದವರು ಹಾಜರಿದ್ದರು.banaras-movie-hero-zayed-khan-celebrated-karnataka-rajyotsava-in-belagavi

ಆ ನಂತರದಲ್ಲಿ ಬೆಳಗಾವಿ ಜಿಲ್ಲೆಯ ಜಯಕರ್ನಾಟಕ ಜನಪರ ವೇದಿಕೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅರವತ್ತೇಳನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿಯೂ ಬನಾರಸ್ ಹೀರೋ ಝೈದ್ ಖಾನ್ ಅವರಿಗೆ ಗೌರವ ಲಭಿಸಿತ್ತು. ಆ ಕಾರ್ಯಕ್ರಮದ ವೇದಿಕೆಗೆ ಝೈದ್‌ರನ್ನು ಪ್ರೀತಿಯಿಂದ ಬರಮಾಡಿಕೊಂಡು, ಸನ್ಮಾನಿಸಲಾಯಿತು. ಅದಾದ ಬಳಿಕ ಕನ್ನಡ ರಾಜ್ಯೋತ್ಸವದ ಅಂಗವಾಗಿ ಬೆಳಗಾವಿಯ ಕನ್ನಡ ಪರ ಸಂಘಟನೆಗಳು ಬೃಹತ್ ಪಾದಯಾತ್ರೆಯನ್ನು ಆರಂಭಿಸಿದ್ದವು. ಅದರಲ್ಲಿಯೂ ಝೈದ್ ಖಾನ್ ಉತ್ಸಾಹದಿಂದ ಹೆಜ್ಜೆ ಹಾಕಿದರು.banaras-movie-hero-zayed-khan-celebrated-karnataka-rajyotsava-in-belagavi

ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವದ ಆಚರಣೆ ನಿಜಕ್ಕೂ ಭಿನ್ನವಾಗಿ ನೆರವೇರಿದೆ. ಇದೇ ಸಂದರ್ಭದಲ್ಲಿ ಈ ಸೀಮೆಯ ಕನ್ನಡಪರ ಮನಸುಗಳೆಲ್ಲ ಒಂದುಗೂಡಿ ಹತ್ತು ಸಾವಿರ ಮೀಟರ್ ಕನ್ನಡ ಧ್ವಜ ಪ್ರದರ್ಶನ ನಡೆಸಿ ಗಿನ್ನಿಸ್ ದಾಖಲೆ ಬರೆಯಲಾಯ್ತು. ಈ ಕಾರ್ಯಕ್ರಮದ ನೇತೃತ್ವವನ್ನು ಕಿರಣ್ ಮಾಳೆನವರ್ ಮತ್ತು ಸುನೀಲ್ ವಹಿಸಿಕೊಂಡಿದ್ದರು. ಈ ಕಾರ್ಯಕ್ರಮದಲ್ಲಿ ಬನಾರಸ್ ಹೀರೋ ಝೈದ್ ಖಾನ್ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಗಡಿನಾಡು ಕನ್ನಡ ಸಂಘದ ಅಧ್ಯಕ್ಷರಾದ ಸೈಯದ್ ಮನ್ಸೂರ್, ಪ್ರಸಿದ್ಧ ವಕೀಲರಾದ ತೌಫಿಕ್ ಮೊಯಿನುದ್ದೀನ್, ಡಾ. ಆಸಿಫ್ ಮೊಕಾಶಿ, ಸಂತೋಷ್ ಕಾಮತ್, ಕನ್ನಡ ಸೇನೆಯ ರಾಜು ಹಾಗೂ ಹುಬ್ಬಳಿಯ ಯುವ ನಾಯಕ ರಶೀದ್ ಹಾಗೂ ಆಯೂಬ್ ಉಪಸ್ಥಿತರಿದ್ದರು.banaras-movie-hero-zayed-khan-celebrated-karnataka-rajyotsava-in-belagavi

ಬೆಳಗಾವಿ ಕನ್ನಡ ರಾಜ್ಯೋತ್ಸವದ ಸಂಭ್ರಮದಲ್ಲಿ ಅಕ್ಷರಶಃ ಕಂಗೊಳಿಸಿತ್ತು. ಅದೆಲ್ಲದರಲ್ಲಿಯೂ ಬನಾರಸ್ ನಾಯಕ ನಟ ಝೈದ್ ಖಾನ್ ಭಾಗಿಯಾಗಿದ್ದು ನಿಜವಾದ ವಿಶೇಷ. ಈ ಸಂದರ್ಭದಲ್ಲಿ ವೀರನಾರಿ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಚೆನ್ನಮ್ಮನ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಪತ್ರಿಕಾಗೋಷ್ಟಿ ನಡೆಸಲಾಯ್ತು. ಅದರಲ್ಲಿ ಬನಾರಸ್ ಹೀರೋ ಝೈದ್ ಖಾನ್ ಮತ್ತು ಅನೇಕ ಕನ್ನಡಪರ ಸಂಘಟನೆಗಳ ಮುಖಂಡರು ಪಾಲ್ಗೊಂಡಿದ್ದರು.

ಇದೇ ಹೊತ್ತಿನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ವತಿಯಿಂದ ಅದ್ದೂರಿ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮಕ್ಕೆ ಝೈದ್ ಖಾನ್‌ರನ್ನು ಆಹ್ವಾನಿಸಲಾಗಿತ್ತು. ಝೈದ್ ಕನ್ನಡತನದ ಮೇಲಿನ ಪ್ರೀತಿಯಿಂದಲೇ ಅದರಲ್ಲಿ ಪಾಲ್ಗೊಂಡಿದ್ದರು. ಈ ಕಾರ್ಯಕ್ರಮದ ನೇತೃತ್ವವನ್ನು ವಾಜೀದ್ ಅಹ್ಮದ್ ಹಿರೇಗುಡಿ, ಕನ್ನಡ ಪರ ಹೋರಾಟಗಾರ ಮಹಾಂತೇಶ್ ರಂಗತಿಮಠ ಸೇರಿದಂತೆ ಅನೇಕ ಕನ್ನಡಪರ ಹೋರಾಟಗಾರರು ವಹಿಸಿಕೊಂಡಿದ್ದರು.banaras-movie-hero-zayed-khan-celebrated-karnataka-rajyotsava-in-belagavi

ಬೆಳಗಾವಿಯಲ್ಲಿ ನಡೆದ ಇಷ್ಟೆಲ ಕಾರ್ಯಕ್ರಮಗಳ ಮೂಲಕ ಬನಾರಸ್ ಹೀರೋ ಝೈದ್ ಖಾನ್ ಕನ್ನಡದ ಕಂಪು ಪಸರಿಸುವ ಕಾರ್ಯ ನಡೆಸಿದರು. ಅತ್ಯಂತ ಅಚ್ಚುಕಟ್ಟಾಗಿ ನಡೆದ ಈ ಎಲ್ಲ ಕಾರ್ಯಕ್ರಮಗಳ ಉಸ್ತುವಾರಿಯನ್ನು ಗಡಿನಾಡು ಕನ್ನಡ ಸಂಘದ ಅಧ್ಯಕ್ಷರಾದ ಸೈಯದ್ ಮನ್ಸೂರ್, ಕನ್ನಡ ಸೇನೆಯ ರಾಜು ಕೋಲಾರ, ಪ್ರಸಿದ್ಧ ವಕೀಲರಾದ ತೌಫಿಕ್ ಮೊಯಿನುದ್ದೀನ್, ಅಯೂಬ್ ಪಾರ್ಕನಳ್ಳಿ, ಡಾ,. ಆಸಿಫ್ ಮೊಕಾಶಿ, ಸಂತೋಷ್ ಕಾಮತ್, ಇಷಾಕ್ ನಿಪ್ಪಾಣಿ, ಹುಬ್ಬಳ್ಳಿ ಕಾಂಗ್ರೆಸ್ ಮುಖಂಡ ರಶೀದ್ ಮುಂತಾದವರು ವಹಿಸಿಕೊಂಡಿದ್ದರು. ಇದೆಲ್ಲದರ ಮೇಲುಸ್ತುವಾರಿಯನ್ನು ರಾಹುಲ್ ಗಾಂಧಿ ಸಾರಥ್ಯದ ಭಾರತ್ ಜೋಡೋ ಯಾತ್ರೆಯ ಉಸ್ತುವಾರಿ ಹೊತ್ತಿದ್ದ ಡಾ ಶಕೀಲ್ ನವಾಜ್ ಹೊತ್ತು, ಸಮರ್ಥವಾಗಿ ನೆರವೇರಿಸಿದರು.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…