ಜಮೀರ್‌ ಅಹ್ಮದ್‌ ಖಾನ್‌ ಆಶ್ಚರ್ಯಕ್ಕೆ ಕಾರಣ ಏನು?

banaras movie zameer ahmed khan

‘ಬನಾರಸ್’ ಚಿತ್ರ ಶುರುವಾಗಿ ಎರಡ್ಮೂರು ವರ್ಷಗಳೇ ಆಗಿವೆ. ಇನ್ನು, ಚಿತ್ರದ ಪ್ರಮೋಷನ್ ಶುರುವಾಗಿ ಕೆಲವು ತಿಂಗಳುಗಳೇ ಆಗಿವೆ. ಒಂದಿಷ್ಟು ಇವೆಂಟ್ಗಳೂ ಆಗಿವೆ. ಆದರೆ, ಎಲ್ಲೂ ನಾಯಕ ಝೈದ್ ಖಾನ್ ಅವರ ತಂದೆ ಶಾಸಕ ಜಮೀರ್ ಅಹ್ಮದ್ ಖಾನ್ ಚಿತ್ರತಂಡದ ಜೊತೆಯಾಗಲೀ, ಝೈದ್ ಜೊಯಾಗಿಲೀ ಕಾಣಿಸಿಕೊಂಡಿರಲಿಲ್ಲ. ಚಿತ್ರದ ಬಗ್ಗೆಯಾಗಲೀ, ತಮ್ಮ ಮಗನ ಬಗ್ಗೆಯಾಗಲೀ ಮಾತನಾಡಿರಲಿಲ್ಲ. ಈಗ ಇದೇ ಮೊದಲ ಬಾರಿಗೆ ಜಮೀರ್ ಅಹ್ಮದ್ ಖಾನ್ ಚಿತ್ರ ಹಾಗೂ ತಮ್ಮ ಮಗನ ಕುರಿತು ಮಾತನಾಡಿದ್ದಾರೆ.banaras movie zameer ahmed khan

‘ನನಗೆ ಹೆಚ್ಚು ಟೈಮ್ ಸಿಗುವುದಿಲ್ಲ ಕನ್ನಡ ಸಿನಿಮಾಗಳನ್ನು ನೋಡುವುದು ಕಡಿಮೆಯೇ. ಮುಂಚೆ ಡಾ. ರಾಜ್ಕುಮಾರ್ ಅವರ ಸಿನಿಮಾಗಳನ್ನು ನೋಡುತ್ತಿದ್ದೆ. ಈಗ ದರ್ಶನ್ ಅವರ ಸಿನಿಮಾಗಳನ್ನು ನೋಡುತ್ತೇನೆ. ಅವರು ನನ್ನ ಹೃದಯದಲ್ಲಿದ್ದಾರೆ. ಅವರಿಗೆ ಯಾವ ರೀತಿ ಧನ್ಯವಾದ ತಿಳಿಸಬೇಕೋ ಗೊತ್ತಿಲ್ಲ. ನಿಜ ಹೇಳಬೇಕೆಂದರೆ, ನನಗಿಂತ ನನ್ನ ಮಗನನ್ನು ಪ್ರೋತ್ಸಾಹಿಸುತ್ತಿರುವುದು ಅವರೇ. ಅವರ ಸಹಾಯವನ್ನು ಮರೆಯೋಕೆ ಸಾಧ್ಯವಿಲ್ಲ. ನಾನು ಈ ಚಿತ್ರ ನೋಡಿದೆ. ನನಗೆ ನಿಜಕ್ಕೂ ಆಶ್ಚರ್ಯವಾಯಿತು. ನನ್ನ ಮಗ ಎಂದು ಹೇಳುತ್ತಿಲ್ಲ. ನಿಜಕ್ಕೂ ಚೆನ್ನಾಗಿ ಮಾಡಿದ್ದಾನೆ. ಇವನು ನನ್ನ ಮಗನಾ ಎಂದು ಆಶ್ಚರ್ಯವಾಯಿತು. ಅವನಿಗೆ ಚಿಕ್ಕಂದಿನಿಂದಲೂ ನಟನೆ ಬಗ್ಗೆ ಆಸಕ್ತಿ. ಅವನು ಓದಿ ಏನಾದರೂ ಆಗಬೇಕು ಎಂಬ ಆಸೆ ಇತ್ತು. ಆದರೆ, ಅವನು ಒಪ್ಪಲಿಲ್ಲ. ಅವನಿಗೆ ಓದಿಗಿಂತ ಸಿನಿಮಾ ಬಗ್ಗೆಯೇ ಹೆಚ್ಚು ಆಸಕ್ತಿ. ನನ್ನ ಮಗ ಅಂತ ನಾನು ಅವನಿಗೆ ಆಶೀರ್ವಾದ ಮಾಡಬಹುದು. ಆದರೆ, ಅವನ ಕೈ ಹಿಡಿಯಕಾಗಿರುವುದು ಪ್ರೇಕ್ಷಕರು’ ಎನ್ನುತ್ತಾರೆ ಖಾನ್.banaras movie zameer ahmed khan

ಝೈದ್, ಜಮೀರ್ ಜೊತೆಗೆ ಇದುವರೆಗೂ ಸಿನಿಮಾ ಬಗ್ಗೆ ಚರ್ಚೆ ಮಾಡಿಲ್ಲವಂತೆ. ‘ನಾವು ರಾಜಕಾರಣಿಗಳು. ಸಿನಿಮಾ ಬಗ್ಗೆ ಗೊತ್ತಿಲ್ಲ. ಹಾಗಾಗಿ, ಅವನಿಗೆ ನನ್ನ ಮಾರ್ಗದರ್ಶನ ಕಡಿಮೆಯೇ. ಏನೇ ಇದ್ದರೂ ದರ್ಶನ್ ಮಾತು ಕೇಳು ಅಂತ ಹೇಳಿದ್ದೆ. ದರ್ಶನ್ ಅವರೇ ಅವನಿಗೆ ಮಾರ್ಗದರ್ಶನ ಮಾಡುತ್ತಿರುವುದು. ನನಗೂ ಒಂದೊಮ್ಮೆ ಹೀರೋ ಆಗಬೇಕು ಎಂಬ ಆಸೆ ಇತ್ತು. ನನಗೆ 18 ವರ್ಷ ಇದ್ದಾಗ ಮುಂಬೈಗೆ ಹೋಗಿದ್ದೆ. ನನ್ನ ಹಣೆಬರಹದಲ್ಲಿ ಇರಲಿಲ್ಲ ಅಂತನಿಸುತ್ತದೆ. ಹಾಗಾಗಿ, ನಾನು ನಟ ಆಗಲಿಲ್ಲ. ಅವಕಾಶ ಸಿಕ್ಕಿದ್ದರೆ, ನಾನು ಇನ್ನೊಬ್ಬ ದ್ವಾರಕೀಶ್ ಆಗುತ್ತಿದ್ದೆ. ಹೀರೋ ಅಂತೂ ಖಂಡಿತಾ ಆಗುತ್ತಿರಲಿಲ್ಲ’ ಎನ್ನುತ್ತಾರೆ ಜಮೀರ್ ಅಹ್ಮದ್ ಖಾನ್.banaras movie zameer ahmed khan

‘ಬನಾರಸ್’ ಚಿತ್ರದಲ್ಲಿ ಝೈದ್ ಖಾನ್, ಸೋನಲ್, ಅಚ್ಯುತ್ ಕುಮಾರ್ ಮುಂತಾದವರು ನಟಿಸಿದ್ದು, ಜಯತೀರ್ಥ ಬರೆದು ನಿರ್ದೇಶನ ಮಾಡಿದ್ದಾರೆ. ತಿಲಕ್ರಾಜ್ ಭಲ್ಲಾಳ್ ನಿರ್ಮಿಸಿರುವ ಈ ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ ಸಂಯೋಜಿಸಿದ್ದಾರೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…