ಭಾವನೆಗಳೇ ಪಾತ್ರಗಳಾಗಿರುವ “ಭಾವಪೂರ್ಣ” ಚಿತ್ರ ಸೆಪ್ಟೆಂಬರ್ ಎಂಟರಿಂದ ಆರಂಭ.

bhavpurna kannada movie release sep 8th

ರಾಷ್ಟ್ರಪ್ರಶಸ್ತಿ ವಿಜೇತ ಚೇತನ್ ಮುಂಡಾಡಿ ನಿರ್ದೇಶನದ ಮತ್ತೊಂದು ಚಿತ್ರ.

“ಮದಿಪು” ಚಿತ್ರಕ್ಕಾಗಿ ರಾಷ್ಟ್ರಪ್ರಶಸ್ತಿ ಪಡೆದ ನಿರ್ದೇಶಕ ಚೇತನ್ ಮುಂಡಾಡಿ. ಪ್ರಸ್ತುತ ಇವರು ನಿರ್ದೇಶಿಸುತ್ತಿರುವ “ಭಾವಪೂರ್ಣ” ಚಿತ್ರದ ಚಿತ್ರೀಕರಣ ಸೆಪ್ಟೆಂಬರ್ 8 ರಿಂದ ಆರಂಭವಾಗಲಿದೆ. ಈ ಬಗ್ಗೆ ಮಾಹಿತಿ ನೀಡಲು ಚಿತ್ರತಂಡ ಪತ್ರಿಕಾಗೋಷ್ಠಿ ಆಯೋಜಿಸಿತ್ತು.bhavpurna kannada movie

ಈವರೆಗೂ ಕಲಾತ್ಮಕ ಚಿತ್ರಗಳನ್ನು ನಿರ್ದೇಶಿಸಿರುವ ನನಗೆ ಇದು ಮೊದಲ ಕಮರ್ಷಿಯಲ್ ಚಿತ್ರ. ಇದು ತೊಂಭತ್ತರ ಕಾಲಘಟ್ಟದಲ್ಲಿ ನಡೆಯುವ ಕಥೆ. ಭಾವನೆಗಳೇ ಇಲ್ಲಿನ ಪಾತ್ರಗಳು. ಪುಟ್ಟಗ್ರಾಮವೊಂದರಲ್ಲಿ 50ರ ವಯಸ್ಸಿನ ವ್ಯಕ್ತಿಯಲ್ಲಿ ಚಿಗುರುವ ಅನಿವಾರ್ಯ ಬಯಕೆಯನ್ನು ಈಡೇರಿಸಿಕೊಳ್ಳಲು ಆತ ಪಡುವ ಪರಿಪಾಟಗಳೇ ಚಿತ್ರದ ಮುಖ್ಯ ಕಥಾಹಂದರ. ಧರ್ಮಣ್ಣ ಎಂಬ ಮುಖ್ಯಪಾತ್ರದಲ್ಲಿ ಹಿರಿಯ ನಟ ರಮೇಶ್ ಪಂಡಿತ್ ಅಭಿನಯಿಸುತ್ತಿದ್ದಾರೆ. ಮಂಜುನಾಥ್ ಹೆಗಡೆ ಮತ್ತೊಂದು ಪ್ರಮುಖಪಾತ್ರದಲ್ಲಿ ನಟಿಸುತ್ತಿದ್ದಾರೆ. ಶೈಲಶ್ರೀ, ಮಂಗಳಾ, ನಾಗೇಂದ್ರ ಶಾ, ಅಥರ್ವ ಪ್ರಕಾಶ್, ವಿ.ಮನೋಹರ್, ಸುಜಯ್ ಶಾಸ್ತ್ರಿ, ಎಂ.ಕೆ.ಮಠ, ವಿನ್ಯಾ, ಉಗ್ರಂ ಮಂಜು, ಜೆಜಿ ಮುಂತಾದವರು ತಾರಾಬಳಗದಲ್ಲಿದ್ದಾರೆ. ಸೆಪ್ಟೆಂಬರ್ 8 ರಿಂದ ಸೌತಡ್ಕ, ಸಾಗರ, ಜೋಗ, ಮುರುಡೇಶ್ವರದಲ್ಲಿ ಚಿತ್ರೀಕರಣ ನಡೆಯಲಿದೆ ಎಂದು ನಿರ್ದೇಶಕ ಚೇತನ್ ಮುಂಡಾಡಿ ಚಿತ್ರದ ಕುರಿತು ಮಾಹಿತಿ ನೀಡಿದರು.bhavpurna kannada movie

ಈ ಚಿತ್ರದಲ್ಲಿ ಧರ್ಮಣ್ಣ ಎನ್ನುವ ಮುಖ್ಯಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ. ಅನ್ವೇಷಣೆಯ ಮೇಲೆ ಕಥೆ ಸಾಗುತ್ತದೆ ಎಂದು ರಮೇಶ್ ಪಂಡಿತ್ ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ನನಗೆ ಅಳುವ ಹಾಗೂ ಸಂದೇಶ ನೀಡುವ ಚಿತ್ರಗಳಲ್ಲಿ ಆಸಕ್ತಿ ಇಲ್ಲ. ಜನ ಸಿನಿಮಾ ನೋಡಲು ಬರುವುದು ತಮ್ಮ ನಿತ್ಯದ ಕಷ್ಟಗಳನ್ನು ಮರೆಯುವುದಕ್ಕಾಗಿ. ಚಿತ್ರದಲ್ಲೂ ದುಖದ ಸಂಗತಿ ಇದ್ದರೆ ಯಾರು ಇಷ್ಟ ಪಡುವುದಿಲ್ಲ. ಹಾಗಾಗಿ ಚೇತನ್ ಮುಂಡಾಡಿ ಒಳ್ಳೆಯ ಮನೋರಂಜನೆಯಿರುವ ಕಥೆ ಮಾಡಿಕೊಂಡಿದ್ದಾರೆ. ಅವರಿಗೆ ಬೇಕಾದನ್ನು ಒದಗಿಸುವುದನ್ನು ನಾನು ಮಾಡುತ್ತೇನೆ ಎಂದರು ನಿರ್ಮಾಪಕ ಪ್ರಶಾಂತ್ ಅಂಜನಪ್ಪ.bhavpurna kannada movie

“ಭಾವಪೂರ್ಣ” ದ ಬಗ್ಗೆ ಸವಿಸ್ತಾರವಾಗಿ ಸಂಭಾಷಣೆ ಬರೆದಿರುವ ಸುಂದರ್ ವಿವರಿಸಿದರು. ಮತ್ತೊಬ್ಬ ಮುಖ್ಯ ಪಾತ್ರಧಾರಿ ಮಂಜುನಾಥ್ ಹೆಗಡೆ ಸಹ ತಮ್ಮ ಪಾತ್ರದ ಬಗ್ಗೆ ಹೇಳಿಕೊಂಡರು. ವಿ.ಮನೋಹರ್ ಸಂಗೀತ ನಿರ್ದೇಶನ, ಪ್ರಸನ್ನ ಛಾಯಾಗ್ರಹಣ, ಕೀರ್ತಿ ಸಂಕಲನ ಹಾಗೂ ಅನಂತರಾಜ್ ಸಹ ನಿರ್ದೇಶನವಿರುವ ಈ ಚಿತ್ರಕ್ಕೆ ಸುಂದರ್ ವೀಣಾ ಸಂಭಾಷಣೆ ಬರೆದಿದ್ದಾರೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…