ಚಾಂಪಿಯನ್ ಗೆಲುವು ಚಿತ್ರತಂಡದ ಸಂಭ್ರಮ

champion kannada movie success meet

ಉತ್ತರ ಕರ್ನಾಟಕದ ಯುವ ಪ್ರತಿಭೆ ಸಚಿನ್ ಧನಪಾಲ್ ನಾಯಕನಾಗಿ ಅಭಿನಯಸಿದ ಚಾಂಪಿಯನ್ ಚಿತ್ರಕ್ಕೆ ರಾಜ್ಯದೆಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಅಪಾರ ಮೆಚ್ಚುಗೆ ಗಳಿಸಿದೆ. ಚಿತ್ರ ವೀಕ್ಷಿಸಿದ ಬಹುತೇಕರು ಆ್ಯಕ್ಷನ್ ಬ್ಲಾಕ್ ಹಾಗೂ ಹಾಡುಗಳ ಬಗ್ಗೆಯೇ ಹೆಚ್ಚು ಪ್ರಶಂಸೆ ವ್ಯಕ್ತಪಡಿಸುತ್ತಿದ್ದಾರೆ. ಗೆಲುವಿನ ಸಂತಸವನ್ನು ನಿರ್ಮಾಪಕ ಶಿವಾನಂದ್ ಎಸ್.ನೀಲಣ್ಣನವರ್ ಹಾಗೂ ನಾಯಕ ಸಚಿನ್ ಧನಪಾಲ್ ಮಾದ್ಯಮ
ಮಿತ್ರರೊಂದಿಗೆ ಹಂಚಿಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿನ್ ಪ್ರತಿಯೊಬ್ಬರೂ ಚಿತ್ರದ ಮೇಕಿಂಗ್ ಕುರಿತು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ, ನಮ್ಮ ನಿರೀಕ್ಷೆಯಂತೆಯೇ ಚಿತ್ರ ಜನರನ್ನು ತಲುಪಿದೆ. ಆಕ್ಷನ್ ಸೀಕ್ವೇನ್ಸ್ ಬಗ್ಗೆ ಸಾಕಷ್ಟು ಜನ ಮಾತಾಡುತ್ತಿದ್ದಾರೆ. ಗುಡ್ ಮೇಕಿಂಗ್ ಚಿತ್ರ, ಹೊಸಬರ ಸಿನಿಮಾ ಅಂತ ಎಲ್ಲೂ ಅನಿಸಲ್ಲ ಎನ್ನುವ ಪ್ರತಿಕ್ರಿಯೆ ಬರುತ್ತಿದೆ.champion kannada movie success meet

ಉತ್ತರ ಕರ್ನಾಟಕದಾದ್ಯಂತ ಚಿತ್ರ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಬೆಳಗಾವಿ, ಹುಬ್ಬಳ್ಳಿ, ಬೀದರ್, ಗುಲ್ಬರ್ಗ, ರಾಯಚೂರಿನಲ್ಲಿ ಎಲ್ಲಾ ಶೋ ಭರ್ತಿಯಾಗಿದೆ. ಜನರ ಈ ಪ್ರತಿಕ್ರಿಯೆ ಕಂಡು ನಾವು ಈವರೆಗೆ ಪಟ್ಟಂಥ ಶ್ರಮ ಸಾರ್ಥಕ ಎನಿಸಿದೆ, ಇದಕ್ಕೆಲ್ಲ ನಿರ್ಮಾಪಕರ ಸಹಕಾರ, ಬೆಂಬಲವೇ ಕಾರಣ ಎಂದರು. ಸೀನ್ ಹಾಗೂ ಹಾಡುಗಳಲ್ಲಿ ತಮ್ಮ ಲುಕ್‌ನ ವ್ಯತ್ಯಾಸದ ಕುರಿತು ವಿವರಿಸಿದ ಸಚಿನ್, ೨೦೧೯ರಲ್ಲೇ ಚಿತ್ರದ ಟಾಕೀ ಪೋರ್ಷನ್ ಮುಗಿಯಿತು. ೨ ವರ್ಷದ ನಂತರ ಹಾಡುಗಳನ್ನು ಚಿತ್ರೀಕರಿಸಿದೆವು. ಹಾಗಾಗಿ ಸ್ವಲ್ಪ ಚೇಂಜ್ ಆಗಿದೆ. ಮೊದಲು ೯೬ ಕೆಜಿ ಇದ್ದ ನಾನು ಸ್ಪೋರ್ಟ್ ಯುವಕನ ಪಾತ್ರಕ್ಕಾಗಿ ೭೨ ಕೆಜಿವರೆಗೆ ತೂಕ ಇಳಿಸಿಕೊಂಡಿದ್ದೆ.champion kannada movie success meet

ಸಾಂಗ್‌ನಲ್ಲಿ ಗ್ಲಾಮರ್ ಇರಬೇಕು ಅಂತ ಸ್ಟೈಲಿಷ್ ಆಗಿ ಕಾಣಿಸಿಕೊಂಡಿದ್ದೇನೆ ಎಂದು ಹೇಳಿದರು. ಮುಂದಿನ ದಿನಗಳಲ್ಲಿ ಆರ್ಮಿ ಸಬ್ಜೆಕ್ಟ್ ಮಾಡಬೇಕೆನ್ನುವುದು ನನ್ನಾಸೆ. ಸಂದೀಪ್ ಉನ್ನಿಕೃಷ್ಣನ್ ಅವರ ಬಯಾಗ್ರಫಿ ಮಾಡುವ ಆಸೆಯೂ ಇದೆ ಎನ್ನುವ ಸಚಿನ್ ಇದಕ್ಕೆಲ್ಲ ಕನ್ನಡ ಜನತೆಯ ಆಶೀರ್ವಾದ ಬೇಕು ಎಂದು ಕೇಳಿಕೊಂಡಿದ್ದಾರೆ. ಚಿತ್ರದ ಪ್ರೊಮೋಷನ್‌ಗೆ ನಾಯಕಿ ಅದಿತಿ ಅವರು ಗೈರಾದ ಬಗ್ಗೆ ಮಾತನಾಡುತ್ತ ಅವರಿಗೆ ನಾವು ಎಲ್ಲಾ ಪ್ರೆಸ್‌ಮೀಟ್ ಬಗ್ಗೆ ಹೇಳುತ್ತಲೇ ಬಂದಿದ್ದೇವೆ, ಆದರೂ ಅವರು ಯಾವುದಕ್ಕೂ ಬರುತ್ತಿಲ್ಲ ಎಂದರು.
ನಂತರ ಇದರ ಬಗ್ಗೆ ಮಾತನಾಡಿದ ನಿರ್ಮಾಪಕ ಶಿವಾನಂದ್ ಅವರು ಕೂಡ ಉತ್ತರ ಕರ್ನಾಟಕದವರು ಅಂತ ನಮ್ಮ ಚಿತ್ರಕ್ಕೆ ನಾಯಕಿಯಾಗಿ ಸೆಲೆಕ್ಟ್ ಮಾಡಿಕೊಂಡೆವು.
ಅವರು ಪ್ರಚಾರಕ್ಕೆ ಏಕೆ ಬರುತ್ತಿಲ್ಲವೋ ಗೊತ್ತಿಲ್ಲ, ಸಾಂಗ್, ಟೀಸರ್ ಬಿಡುಗಡೆ ಮಾಡುವಾಗಲೂ ನಾವು ಕರೆದಿದ್ದೆವು. ಆದರೆ ಅವರು ಬರಲಿಲ್ಲ, ಥ್ಯಾಂಕ್ಸ್ ಗಿವಿಂಗ್ ಸಮಯದಲ್ಲಾದರೂ ಅವರು ಇಲ್ಲಿರಬೇಕಿತ್ತು.champion kannada movie success meet

ಅವರಿಗೆ ಕೊಡಬೇಕಾದ ಸಂಭಾವನೆ ಪೂರ್ತಿ ಕೊಟ್ಟಿದ್ದೇವೆ, ಯಾವುದೆ ಬಾಕಿ
ಉಳಿಸಿಕೊಂಡಿಲ್ಲ ಎಂದು ಬೇಸರದಿಂದಲೇ ಹೇಳಿಕೊಂಡರು. ನಂತರ ಚಿತ್ರದ ಯಶಸ್ಸಿನ ಕುರಿತು ಮಾತನಾಡುತ್ತ ಕಾಂತಾರ ಹಿಸ್ಟರಿ ಕ್ರಿಯೇಟ್ ಮಾಡುತ್ತಿದೆ. ಅಂಥಾ ಸಮಯದಲ್ಲಿ ನಾವು ಬಂದಿದ್ದರೂ ಜನ ನಮ್ಮ ಚಿತ್ರವನ್ನೂ ಇಷ್ಟಪಟ್ಟು ನೋಡುತ್ತಿದ್ದಾರೆ. ಗಂಗಾವತಿ, ಬೆಳಗಾವಿ, ಗೋಕಾಕ್, ನಿಪ್ಪಾಣಿಯಂಥ ಗಡಿ ಪ್ರದೇಶಗಳಲ್ಲಿ ಎರಡು ದಿನವೂ ಹೌಸ್ಫುಎಲ್ ಪ್ರದರ್ಶನ ಆಗಿದೆ. ಮೌತ್ ಪಬ್ಲಿಸಿಟಿಯಿಂದ ಹೆಚ್ಚು ಹೆಚ್ಚು ಜನ ಥಿಯೇಟರಿಗೆ ಬರುತ್ತಿದ್ದಾರೆ. ಈ ಸಿನಿಮಾನ ೧೦೦% ಗೆದ್ದೇ ಗೆಲ್ಲಿಸುತ್ತೇನೆ. ತುಂಬಾ ಕಷ್ಟಬಿದ್ದು ಈ ಚಿತ್ರವನ್ನು ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ನಾನು ಕರ್ನಾಟಕದ ಮನೆಮನೆಗೂ ಹೋಗಿ ನಮ್ಮ ಚಿತ್ರವನ್ನು ನೋಡಿ ಎಂದು ಕೇಳಿಕೊಳ್ಳುತ್ತೇನೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಛಾಯಾಗ್ರಾಹಕ ಸರವಣನ್ ನಟರಾಜನ್, ಜಯರಾಮ್. ಮತ್ತಿತರರು ಹಾಜರಿದ್ದರು,champion kannada movie success meet

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…