ದಿಗ್ವಿಜಯ ಟ್ರೈಲರ್ ಆಡಿಯೋ ಬಿಡುಗಡೆ

Digvijaya trailer audio release

ರೈತರು ಎದುರಿಸುತ್ತಿರುವ ಸಂಕಷ್ಟಗಳು ಹಾಗೂ ಅದಕ್ಕೆ ಪರಿಹಾರ ಹುಡುಕುವ ಪ್ರಯತ್ನವನ್ನು ನಿರ್ದೇಶಕ ದುರ್ಗಾ ಪಿ.ಎಸ್. ಅವರು ತಮ್ಮ ನಿರ್ದೇಶನದ ದಿಗ್ವಿಜಯ ಚಿತ್ರದ ಮೂಲಕ ಮಾಡಿದ್ದಾರೆ. ಇತ್ತೀಚೆಗೆ ಈ ಚಿತ್ರದ ಟ್ರೈಲರ್ ಹಾಗೂ ಆಡಿಯೋ ಬಿಡುಗಡೆ ಸಮಾರಂಭ ಎಸ್ ಆರ್ ವಿ ಥಿಯೇಟರಿನಲ್ಲಿ ನೆರವೇರಿತು. ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕ ದುರ್ಗಾ ಪಿ.ಎಸ್. ಕಳೆದ 18 ವರ್ಷಗಳಿಂದ ಇಂಡಸ್ಟ್ರಿಯಲ್ಲಿದ್ದೇನೆ. 65ಕ್ಕೂ ಹೆಚ್ಚು ಚಿತ್ರಗಳಿಗೆ ಸಂಕಲನ‌ಮಾಡಿದ್ದು, ಸೀಯು, ಕರ್ತ ನಂತರ ಇದು ನನ್ನ ನಿರ್ದೇಶನದ 5 ನೇ ಚಿತ್ರ.Digvijaya trailer audio release

ಇತ್ತೀಚೆಗೆ ರೈತರು ಆತ್ಮಹತ್ಯೆ ಮಾಡಿಕೊಂಡ ಸಂದರ್ಭದಲ್ಲಿ ಪರಿಹಾರದ ಹಣಕ್ಕಾಗಿ ಸೂಸೈಡ್ ಮಾಡಿಕೊಳ್ತಿದ್ದಾರೆ ಅನ್ನೋ ರಾಜಕಾರಣಿಗಳ ಹೇಳಿಕೆ ಕೇಳಿ ನನ್ನ ಮನಸಿಗೆ ತುಂಬಾ ನೋವಾಯಿತು. ರೈತರು ಸೂಸೈಡ್ ಮಾಡಿಕೊಳ್ಳಲು ವ್ಯವಸ್ಥೆಯಲ್ಲಿನ ಲೋಪವೇ ಕಾರಣ. ಅದನ್ನು ಯಾವರೀತಿ ಪರಿಹರಿಸಬಹುದು ಎಂದು ಯೋಚಿಸಿ ಈ ಕಾನ್ಸೆಪ್ಟ್ ಮಾಡಿದ್ದೇನೆ. ರೈತರು ಸಾಲ ಮಾಡಿಕೊಳ್ಳದ ಹಾಗಿರಲು ಏನು ಅನುಕೂಲ ಮಾಡಿಕೊಡಬಹುದು ಎಂದೂ ಹೇಳಿದ್ದೇನೆ. ಮಾಧ್ಯಮ ಮನಸ್ಸು ಮಾಡಿದರೆ ಎಂಥ ಸಮಸ್ಯೆಯೇ ಆದರೂ ಬಗೆಹರಿಸಬಹುದು ಎನ್ನುವುದು ಚಿತ್ರದಲ್ಲಿದೆ. ಶ್ರೀಕಾಂತ್ ನನ್ನ ಸ್ನೇಹಿತ, ಇಬ್ಬರೂ ಸೇರಿ ಸಿನಿಮಾ ನಿರ್ದೇಶನ‌ ಮಾಡಿದ್ದೇವೆ. ಈ ಸಿನಿಮಾ ಆಗಲು ರಫೀಕ್ ಕಾರಣ. ಅವರೇ ಜಯಪ್ರಭು ಅವರನ್ನು ಪರಿಚಯಿಸಿದ್ದು, 30 ಜನ ನಿಜವಾದ ರೈತರು ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ. ನೈಜತೆಗೆ ಒತ್ತುಕೊಟ್ಟು ಸಿನಿಮಾ ಮಾಡಿದ್ದೇವೆ. ನಾಯಕ‌ ಹಳ್ಳಿಯಿಂದ ಸಿಟಿಗೆ ಬಂದು ಪತ್ರಿಕೆಯಲ್ಲಿ ವರ್ಕ್ ಮಾಡುತ್ತಿರುತ್ತಾನೆ ಎಂದು ವಿವರಿಸಿದರು.
ಮತ್ತೊಬ್ಬ ನಿರ್ದೇಶಕ ಹಾಗೂ ನಟ ಶ್ರೀಕಾಂತ್ ಹೊನ್ನವಳ್ಳಿ ಮಾತನಾಡಿ ನಾನೂ ಒಬ್ಬ ರೈತನಾಗೇ ಚಿತ್ರದಲ್ಲಿ ಅಭಿನಯಿಸಿದ್ದೇನೆ. ನನ್ನ ತಂದೆಯವರು ರೈತನಾಗಿ ಅಪ್ಪನ ಪಾತ್ರ ಮಾಡಿದ್ದಾರೆ ಎಂದರು.Digvijaya trailer audio release

ಚಿತ್ರದ ನಾಯಕ ಕಂ ನಿರ್ಮಾಪಕ ಜಯಪ್ರಭು ಮಾತನಾಡಿ ಈ ಹಿಂದೆ ಸ್ಕೇರಿ ಫಾರೆಸ್ಟ್ ಎಂಬ ಚಿತ್ರ ಮಾಡಿದ್ದೆ. ನಾನೂ ಸಹ ರೈತಕುಟುಂಬದಿಂದಲೇ ಬಂದವನು. ಕಂಟೆಂಟ್ ಜೊತೆ ಕಮರ್ಷಿಯಲ್ ಎಲಿಮೆಂಟ್ ಇರುವ ಚಿತ್ರ. ಸಿನಿಮಾ ಮೂಲಕ ಜನರಿಗೆ ಏನಾದರೂ ಹೇಳಬೇಕೆಂದು ಈ ಸಿನಿಮಾ ಮಾಡಿದ್ದೇವೆ. ಚಿತ್ರದಲ್ಲಿ ನಾನೊಬ್ಬ ಪತ್ರಕರ್ತ, ಆತ ಐಡಿಯಾ ಮಾಡಿ 48 ಗಂಟೆಗಳಲ್ಲಿ ಹೇಗೆ ರೈತರ ಸಾಲ‌ ಮನ್ನಾ ಮಾಡಿಸಿದ ಎಂದು ಚಿತ್ರದಲ್ಲಿ ತೋರಿಸಿದ್ದೇವೆ ಎಂದರು.Digvijaya trailer audio release

ಈ ಚಿತ್ರವನ್ನು ಜೆ.ಪಿ. ಎಂಟರ್ ಟೈನ್ ಮೆಂಟ್ ಅಡಿ ಜಯಪ್ರಭು ಆರ್. ಲಿಂಗಾಯತ್, ಅರುಣ್ ಸುಕದರ್ ಹಾಗೂ ಹರೀಶ್ ಆರ್.ಸಿ. ನಿರ್ಮಿಸಿದ್ದಾರೆ. ದುರ್ಗಾ ಪಿ. ಎಸ್. ಹಾಗೂ ಹೊನ್ನವಳ್ಳಿ ಶ್ರೀಕಾಂತ್ ಸೇರಿ ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು, ಸಂಕಲನದ ಜೊತೆ ನಿರ್ದೇಶನ ಮಾಡಿದ್ದಾರೆ.Digvijaya trailer audio release

ಜಯಪ್ರಭು, ಸ್ನೇಹ, ಸುಚೇಂದ್ರ ಪ್ರಸಾದ್, ದುಬೈ ರಫೀಕ್, ಪಟ್ರೆ ನಾಗರಾಜ್, ಕಿಲ್ಲರ್ ವೆಂಕಟೇಶ್, ಶಿವಕುಮಾರ್ ಆರಾಧ್ಯ, ರಾಹುಲ್, ಆಕಾಶ್ ಎಂ ಪಿ, ಉಳಿದ ಪಾತ್ರಗಳಲ್ಲಿದ್ದಾರೆ. ಚಿತ್ರದ 5 ಹಾಡುಗಳಿಗೆ ಹರ್ಷ ಸಂಗೀತ ನೀಡಿದ್ದು, ವೀನಸ್ ಮೂರ್ತಿ ಅವರ ಛಾಯಾಗ್ರಹಣವಿದೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…