ಬ್ರಾಹ್ಮಿ ಮುಹೂರ್ತಕ್ಕೆ ಆರಂಭವಾಯಿತು “ದಿಲ್ ಖುಷ್”

ಸೂರ್ಯೋದಯಕ್ಕೂ ಪೂರ್ವದಲ್ಲಿ ಬರುವ ಸಮಯವನ್ನು ಬ್ರಾಹ್ಮಿ ಮುಹೂರ್ತ ಎನ್ನುತ್ತಾರೆ. ಆ ಸಮಯದಲ್ಲಿ ಮಾಡುವ ಎಲ್ಲಾ ಕೆಲಸಗಳು ಉತ್ತಮ ಫಲ ಕೊಡುತ್ತದೆ ಎಂಬ ನಂಬಿಕೆಯಿದೆ.‌WhatsApp Image 2022 06 10 at 2.53.06 PM

ಇದೇ ನಂಬಿಕೆಯೊಂದಿಗೆ ” ದಿಲ್ ಖುಷ್” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಮೋದಿ ಆಸ್ಪತ್ರೆ ಬಳಿಯ ಶ್ರೀ ವರಸಿದ್ದಿ ವಿನಾಯಕ‌ ವೆಂಕಟೇಶ್ವರ ಮಂದಿರದಲ್ಲಿ ನಡೆದಿದೆ.WhatsApp Image 2022 06 10 at 2.52.58 PM

ಜಯಪ್ರಭ ಕಲರ್ ಫ್ರೇಮ್ಸ್ ಲಾಂಛನದಲ್ಲಿ ಜಯಲಕ್ಷ್ಮಿ ‌ಪ್ರವೀಣ್ ಹಾಗೂ ಪ್ರಭಾ ಶೇಖರ್ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಪ್ರಭು ಜಯ ನಿರ್ದೇಶಿಸುತ್ತಿದ್ದಾರೆ.WhatsApp Image 2022 06 10 at 2.53.00 PM

ನಾನು ಸಿಂಪಲ್ ಸುನಿ ಅವರ ಬಳಿ ಕೆಲಸ ಮಾಡಿದ್ದೀನಿ. “ಬಜಾರ್” ಚಿತ್ರಕ್ಕೆ ಹಾಡೊಂದನ್ನು ಬರೆದಿದ್ದೇನೆ‌. “ದಿಲ್ ಖುಷ್” ನನ್ನ ಪ್ರಥಮ ನಿರ್ದೇಶನದ ಚಿತ್ರ. ಇದೊಂದು ರೊಮ್ಯಾಂಟಿಕ್ ಕಾಮಿಡಿ ಚಿತ್ರ. ನನ್ನ ಜೀವನದ ಕೆಲವು ಅನುಭವಗಳೊಂದಿಗೆ, ನಾನು‌ ಕಂಡ ಕೆಲವು ಘಟನೆಗಳನ್ನು ಆಧರಿಸಿ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದೇನೆ. ತೊಂಭತ್ತರಷ್ಟು ಭಾಗ ಮನೋರಂಜನೆ ಇದ್ದರೆ, ಹತ್ತು ಭಾಗದಷ್ಟು ಭಾವನಾತ್ಮಕ ಸನ್ನಿವೇಶಗಳಿರುತ್ತದೆ. ಈ ತಿಂಗಳ ಹದಿನೈದರಿಂದ ಚಿತ್ರೀಕರಣ ಆರಂಭವಾಗಲಿದೆ. ಬೆಂಗಳೂರು, ಶನಿವಾರ ಸಂತೆಯಲ್ಲಿ ಚಿತ್ರೀಕರಣ ನಡೆಯಲಿದೆ. ಕ್ಲೈಮ್ಯಾಕ್ಸ್ ನೋಡಿದ ಪ್ರೇಕ್ಷಕನ ಕಣ್ಣಂಚಿನಲ್ಲಿ ನೀರು ಬರುವುದು ಖಂಡಿತಾ ಎನ್ನುತ್ತಾರೆ ನಿರ್ದೇಶಕ ಪ್ರಭು ಜಯ.WhatsApp Image 2022 06 10 at 2.53.01 PM

ನಾಟಕ, ಧಾರಾವಾಹಿ, ಕಿರುಚಿತ್ರ ಹಾಗೂ ಹಿರಿತೆರೆಯ ಕೆಲವು ಚಿತ್ರಗಳಲ್ಲಿ‌ ಅಭಿನಯಿಸಿದ್ದೇನೆ. ನಾಯಕನಾಗಿ ಇದು ಮೊದಲ ಚಿತ್ರ. ನಿರ್ದೇಶಕರು ಆಯ್ಕೆ ಮಾಡಿಕೊಂಡಿರುವ ಕಥೆ ಚೆನ್ನಾಗಿದೆ. ಕಥೆಯ ಬಗ್ಗೆ ಹೆಚ್ಚು ಹೇಳುವ ಹಾಗಿಲ್ಲ. ಸದಾ ಲವಲವಿಕೆಯಿಂದಿರುವ ಹುಡುಗನ ಪಾತ್ರ ನನ್ನದು ಎಂದರು ನಾಯಕ ರಂಜಿತ್.

ಧಾರಾವಾಹಿಯಲ್ಲಿ ‌ನಟಿಸಿದ್ದ ನನಗೆ ಇದು ಮೊದಲ ಚಿತ್ರ. ಈಗಿನ ಕಾಲದ ಹುಡುಗಿಯರು ಹೇಗಿರುತ್ತಾರೊ, ಅದೇ ರೀತಿಯಿರುವ ಹುಡುಗಿಯ ಪಾತ್ರ ನನ್ನದು. ನಿರ್ದೇಶಕರು ಹೇಳಿದ ಕಥೆ ಕೇಳೀ ಖುಷಿಯಾಯಿತು‌ ಎನ್ನುತ್ತಾರೆ ನಾಯಕಿ ಸ್ಪಂದನ ಸೋಮಣ್ಣ.WhatsApp Image 2022 06 10 at 2.53.04 PM 1

ನಿರ್ದೇಶಕರು ಹೇಳಿದರು, ಇದೊಂದು ರೊಮ್ಯಾಂಟಿಕ್ ಕಾಮಿಡಿ ಅಂತ. ರೊಮ್ಯಾಂಟಿಕ್ ಗೆ ನಾಯಕ, ನಾಯಕಿ ಇದ್ದಾರೆ. ಕಾಮಿಡಿ ಮಾಡಲು ನಾನು, ರಂಗಾಯಣ ರಘು ಹಾಗೂ ರಘು ರಮಣಕೊಪ್ಪ ಇದ್ದೇವೆ ಎಂದರು ನಟ ಧರ್ಮಣ್ಣ. “ಯಜಮಾನ”, ” ಅವನ್ನೇ ಶ್ರೀಮನ್ನಾರಾಯಣ” ಚಿತ್ರಗಳಲ್ಲಿ ನನ್ನ ಪಾತ್ರವನ್ನು ಜನ ಮೆಚ್ಚಿಕೊಂಡಿದ್ದರು . ಈ ಚಿತ್ರದಲ್ಲೂ ಒಳ್ಳೆಯ ಪಾತ್ರವಿದೆ ಎಂದರು ನಟ ಸೂರ್ಯಪ್ರವೀಣ್. ನನ್ನ ಪಾತ್ರ ಕೂಡ ಚೆನ್ನಾಗಿದೆ ಎಂದರು ನಟ ರಘು ರಮಣಕೊಪ್ಪ.

ಸಂಗೀತ ನಿರ್ದೇಶಕ ಪ್ರಸಾದ್ ಶೆಟ್ಟಿ, ಛಾಯಾಗ್ರಾಹಕ ನಿವಾಸ್ ನಾರಾಯಣ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು. ಪಿ.ಆರ್.ಓ ಸುಧೀಂದ್ರ ವೆಂಕಟೇಶ್ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿದರು.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…