ಪುನೀತ್ ರಾಜ್ ಕುಮಾರ್ ಸ್ಮರಣಾರ್ಥ ಮೇನಲ್ಲಿ ಡಾ.ರಾಜ್ ಕ್ರಿಕೆಟ್ ಪಂದ್ಯಾವಳಿ.

ಕರ್ನಾಟಕ ಚಲನಚಿತ್ರ ನೃತ್ಯ ನಿರ್ದೇಶಕರ ಮತ್ತು ನೃತ್ಯ ಕಲಾವಿದರ ಸಂಘದ ವತಿಯಿಂದ ಐದನೇ ವರ್ಷದ ಡಾ.ರಾಜ್ ಕ್ರಿಕೆಟ್ ಕಪ್ ಟೂರ್ನಿ ಮೇ ತಿಂಗಳ 13,14 ಹಾಗೂ 15ರಂದು ನಡೆಯಲಿದೆ ಎಂದು ನೃತ್ಯ ನಿರ್ದೇಶಕರ ಸಂಘದ ಅಧ್ಯಕ್ಷರಾದ ರಾಜೇಶ್ ಬ್ರಹ್ಮಾವರ್ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕ್ರಿಕೆಟ್ ಪಂದ್ಯವಳಿಯಲ್ಲಿ ನಿರ್ಮಾಪಕರು, ನಿರ್ದೇಶಕರು, ಕಲಾವಿದರು, ತಂತ್ರಜ್ಞರು, ಪ್ರದರ್ಶಕರು, ಶಾಸಕರು, ಪತ್ರಕರ್ತರು, ಕಾರ್ಮಿಕರು ಹಾಗೂ ಚಿತ್ರೋದ್ಯಮದಲ್ಲಿ ಕೆಲಸ ಮಾಡುವ ಎಲ್ಲಾ ವರ್ಗದವರು ಭಾಗವಹಿಸುತ್ತಿದ್ದಾರೆ, ಜೊತೆಗೆ ಒಬ್ಬ ಕಾಮನ್ ಮ್ಯಾನ್ ಕೂಡ ಇರುತ್ತಾರೆ ಎಂದೂ ಹೇಳಿದರು.Puneethrajkumarprkofficial d1641503 6686 4eab b111 6b59cf99aec2 853b13c1 898e 40e4 b242 60fa1563e5db cmprsd 40

ಬಿಜಿಎಸ್ ಗ್ರೌಂಡ್ ನಲ್ಲಿ ನಡೆಯಲಿರುವ ಮೂರು ದಿನಗಳ ಕಾಲ ನಡೆಯಲಿರುವ ಡಾ.ರಾಜ್ ಕ್ರಿಕೆಟ್ ಕಪ್ ನ ಸೆಮಿ ಫೈನಲ್ ಹಾಗೂ ಫೈನಲ್ ಪಂದ್ಯಾವಳಿ ದುಬೈನ ಶಾರ್ಜಾದಲ್ಲಿ ಜೂನ್ ಮೊದಲವಾರ ನಡೆಯಲಿದೆ.

ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾದ ಜೈರಾಜ್ ಮಾತನಾಡಿ ಇಡೀ ಚಿತ್ರೋದ್ಯಮ ಒಟ್ಟಾಗಿ ಸೇರಿ ಮಾಡುವ ಕಾರ್ಯಕ್ರಮವಿದು. ಇದಕ್ಕೆ ಚೇಂಬರ್ ಬೆಂಬಲ ಇದೆ ಎಂದರು.EWWcb2CU4AIVYfD

ಮಾಜಿ ಅಧ್ಯಕ್ಷ ಸಾ. ರಾ.ಗೋವಿಂದು ಮಾತನಾಡಿ, ಬಹಳ ವರ್ಷಗಳ ನಂತರ ರಾಜ್ ಕಪ್ ನಡೆಯುತ್ತಿದೆ. ಇಂಡಸ್ಟ್ರಿಯಲ್ಲಿ ಸೌಹಾರ್ದಯುತ ವಾತಾವರಣ ಕ್ರಿಯೇಟ್ ಮಾಡುವ ಕೆಲಸವೂ ಈ ಮೂಲಕ ನಡೆಯುತ್ತಿದೆ. ಇಂಡಸ್ಟ್ರಿ ವತಿಯಿಂದ ನಾವು ಅವರಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತಿದ್ದೇವೆ. ಈಗ ರಾಜ್ ಜೊತೆ ಪುನೀತ್ ಹೆಸರೂ ಸಹ ಸೇರ್ಪಡೆಯಾಗಿದೆ ಎಂದರು.WhatsApp Image 2022 05 01 at 10.40.42 PM

ನಿರ್ಮಾಪಕರ ಸಂಘದ ಅಧ್ಯಕ್ಷ ಪ್ರವೀಣ್ ಕುಮಾರ್ ಮಾತನಾಡಿ ವರ್ಷದಿಂದ ಇದರಬಗ್ಗೆ ಚರ್ಚೆ ನಡೆಯುತ್ತಿದೆ. ಅಪ್ಪು ಅವರು ತಂಡದ ನೇತೃತ್ವ ವಹಿಸಿಕೊಳ್ಳಬೇಕಿತ್ತು. ಆದರೆ ಅವರ ಸ್ಮರಣಾರ್ಥ ನಡೆಸಬೇಕಾಗಿದೆ. 2011ರಲ್ಲಿ ನಿರ್ಮಾಪಕರ ಸಂಘ ಕಪ್ ಗೆದ್ದಿತ್ತು ಎಂದು ಹೇಳಿದರು. ನಿರ್ಮಾಪಕ ಕೆ.ಮಂಜು, ಎನ್.ಎಂ.ಸುರೇಶ್, ನಾಗಣ್ಣ, ಗಣೇಶ್, ಫೈವ್ ಸ್ಟಾರ್ ಗಣೇಶ್ ಹಾಗೂ ಇತರರು ಪತ್ರಿಕಾ ಗೋಷ್ಟಿಯಲ್ಲಿ ಹಾಜರಿದ್ದು ಮಾನಾಡಿದರು.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…