ಗಾಳಿಪಟ ಹಾರಿಸಿದ ಶಿವಣ್ಣ, ರಮೇಶ್, ಉಪೇಂದ್ರ ಏನಂದರು?

gaalipata 2 upendra shivanna ramesh aravind

14 ವರ್ಷಗಳ ಹಿಂದೆ ಯೋಗರಾಜ್ ಭಟ್ ‘ಗಾಳಿಪಟ’ ಚಿತ್ರ ಮಾಡಿದಾಗ, ಅವರ ಜೊತೆಗೆ ಇದ್ದಿದ್ದು ಚಿತ್ರತಂಡದವರು ಮತ್ತು ‘ಮುಂಗಾರು ಮಳೆ’ ಚಿತ್ರದ ಯಶಸ್ಸು. ಆದರೆ, ‘ಗಾಳಿಪಟ 2’ ಚಿತ್ರ ಬಿಡುಗಡೆ ಆಗುತ್ತಿರುವಾಗ, ಬರೀ ಚಿತ್ರತಂಡದವರು ಮಾತ್ರವಲ್ಲ, ‘ಗಾಳಿಪಟ’ ಚಿತ್ರದ ಯಶಸ್ಸು ಸಹ ಸೇರಿಕೊಂಡಿದೆ.gaalipata 2 upendra shivanna ramesh aravind

ಆ ಚಿತ್ರ ದೊಡ್ಡ ಹಿಟ್ ಆದ್ದರಿಂದ, ಈ ಚಿತ್ರದ ಮೇಲೆ ಕುತೂಹಲ ಮತ್ತು ನಿರೀಕ್ಷೆಗಳು ಹೆಚ್ಚಾಗಿವೆ. ಅದರಲ್ಲೂ ಇದು ಯೋಗರಾಜ್ ಭಟ್ ಮತ್ತು ಗಣೇಶ್ ಕಾಂಬಿನೇಷನ್ನ ಚಿತ್ರ. ಈ ಜೋಡಿ, ಈಗಾಗಲೇ ಗೆದ್ದಿರುವುದರಿಂದ ‘ಗಾಳಿಪಟ 2’ ಚಿತ್ರದ ಬಗ್ಗೆ ನಿರೀಕ್ಷೆಗಳು ನೂರ್ಮಡಿಯಾಗಿವೆ.gaalipata 2 upendra shivanna ramesh aravind

ಮೊನ್ನೆ ನಡೆದ ‘ಗಾಳಿಪಟ 2’ ಚಿತ್ರದ ಪ್ರೀ-ರಿಲೀಸ್ ಇವೆಂಟ್ನಲ್ಲಿ ಈ ಮಾತು ಪದೇಪದೇ ಕೇಳಿಬಂತು. ಅಂದು ಮುಖ್ಯ ಅತಿಥಿಗಳಾಗಿ ಬಂದಿದ್ದವರು ಶಿವರಾಜಕುಮಾರ್, ರಮೇಶ್ ಅರವಿಂದ್ ಮತ್ತು ಉಪೇಂದ್ರ. ಮೂವರ ಮಾತಿನಲ್ಲೂ ಗಣೇಶ್ ಮತ್ತು ಯೋಗರಾಜ್ ಭಟ್ ಅವರ ಕಾಂಬಿನೇಷನ್ನ ಕುರಿತ ನಿರೀಕ್ಷೆ ಇತ್ತು.gaalipata 2 upendra shivanna ramesh aravind

ಟ್ರೇಲರ್ ಬಿಡುಗಡೆ ಮಾಡಿ ಮಾತನಾಡಿದ ಶಿವರಾಜಕುಮಾರ್, ‘ಯೋಗರಾಜ್ ಭಟ್ ಹಾಗೂ ಗಣೇಶ್ ಕಾಂಬಿನೇಷನ್ ಮತ್ತೊಮ್ಮೆ ಮೋಡಿ ಮಾಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ‘ಈ ಚಿತ್ರದ ಸಂಭಾಷಣೆಯೊಂದರಂತೆ ನೋಡುಗರಿಗೆ ಉತ್ತಮ ಮನೋರಂಜನೆ ನೀಡುವ ಚಿತ್ರ ಇದಾಗಲಿದೆ.gaalipata 2 upendra shivanna ramesh aravind

ಯೋಗರಾಜ್ ಭಟ್ ಹಾಗೂ ಗಣೇಶ್ ಜೋಡಿಯ “ಗಾಳಿಪಟ” ಯಶಸ್ಸು ಕಂಡಿತ್ತು. ‘ಗಾಳಿಪಟ 2’ ಸಹ ಹಾಡುಗಳ ಹಾಗೂ ಟ್ರೇಲರ್ ಮೂಲಕ ಈಗಾಗಲೇ ಗೆದ್ದಿದೆ. ಚಿತ್ರ ಕೂಡ ಭರ್ಜರಿ ಗೆಲವು ಕಾಣಲಿದೆ ಎಂದು ರಮೇಶ್ ಅರವಿಂದ್ ಹಾರೈಸಿದರು. ‘ಯೋಗರಾಜ್ ಭಟ್ಟರು ನಿರ್ದೇಶಕರಾಗಿ, ಗೀತರಚನೆಕಾರರಾಗಿ ಹಾಗೂ ಸಂಭಾಷಣೆಕಾರರಾಗೂ ಜನಪ್ರಿಯ. ಅದಕ್ಕೆ ಈ ಚಿತ್ರದ ಟ್ರೇಲರ್ ಸಾಕ್ಷಿ. ಅವರ ಮತ್ತು ಗಣೇಶ್ ಜೊತೆಯಾಟದಲ್ಲಿ ಈ ಚಿತ್ರ ಹೇಗೆ ಮೂಡಿಬರಲಿದೆ ಎಂಬ ಕುತೂಹಲ ಇದೆ’ ಎಂದು ಉಪೇಂದ್ರ ಹೇಳಿದರು.gaalipata 2 upendra shivanna ramesh aravind

ಗಣೇಶ್ ಸಹ ಅವರ ಮತ್ತು ಯೋಗರಾಜ್ ಭಟ್ ಕಾಂಬಿನೇಷನ್ ಬಗ್ಗೆ ಮಾತನಾಡಿದರು. ‘ನನ್ನ ಹಾಗೂ ಭಟ್ಟರ ಕಾಂಬಿನೇಶನ್ ನಲ್ಲಿ ಕೆಲವು ಚಿತ್ರಗಳು ಬಂದಿದೆ. ಆದರೆ ನಾನು ಯಾವತ್ತು ಯಾವ ಚಿತ್ರದ ಕುರಿತು ಅವರಿಗೆ ಫೋನ್ ಮಾಡಿರಲಿಲ್ಲ. ಆದರೆ ಈ ಚಿತ್ರದ ಡಬ್ಬಿಂಗ್ ಆದ ಮೇಲೆ ಫೋನ್ ಮಾಡಿ ಅದ್ಭುತ ಚಿತ್ರ ಮಾಡಿದ್ದೀರಾ ಅಂತ ಹೇಳಿ ಅಭಿನಂದನೆಗಳನ್ನು ತಿಳಿಸಿದೆ. ನಿಜಕ್ಕೂ “ಗಾಳಿಪಟ 2” ತುಂಬಾ ಚೆನ್ನಾಗಿದೆ. ನೀವೆಲ್ಲಾ ನೋಡಿ ಹಾರೈಸಿ’ ಎಂದರು ಗಣೇಶ್.gaalipata 2 upendra shivanna ramesh aravind

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…