ಅಜ್ಜಿ ನೆನಪಿನಲ್ಲಿ ಆರಂಭವಾಯಿತು “ಗುಲಾಬ್ ಪ್ರೊಡಕ್ಷನ್ಸ್”

ಸುಂದರ ಸಮಾರಂಭದಲ್ಲಿ ವಿವಿಧ ಕ್ಷೇತ್ರದ ಗಣ್ಯರು ಭಾಗಿ.WhatsApp Image 2022 05 30 at 12.22.38 PM 2

ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಹೆಣ್ಣಿಗೆ ಮಹತ್ವದ ಸ್ಥಾನ. ಹುಟ್ಟಿದ ಮನೆ ಹಾಗೂ ಸೇರಿದ ಮನೆ ಎರಡು ಮನೆಗಳಿಗೂ ಕೀರ್ತಿ ತರುವವಳು ಹೆಣ್ಣು. ಶ್ರೀಮತಿ ಗುಲಾಬ್ ಪದ್ಮನಾಭಸಾ ಖೋಡೆ ಅವರು ಸಹ ಆದರ್ಶ ಮಹಿಳೆ‌. ತುಂಬು ಜೀವನ ನಡೆಸಿ, ಗಂಡ, ಮಕ್ಕಳು, ಮೊಮ್ಮಕ್ಕಳು ಹೀಗೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದರು. ಕೆಲವು ವರ್ಷಗಳ ಹಿಂದೆ ನಿಧನರಾದರು. ಇವರ ಮೊಮ್ಮಗ ಕೆ.ಆರ್.ಕೃಷ್ಣ(ನಿಖಿಲ್) ಅಜ್ಜಿಯ ನೆನಪಿನಲ್ಲಿ ಗುಲಾಬ್ ಪ್ರೊಡಕ್ಷನ್ಸ್ ‌ ಎಂಬ ನಿರ್ಮಾಣ ಸಂಸ್ಥೆ ‌ಆರಂಭಿಸಿದ್ದಾರೆ. ಇದರ ಮೊದಲ ಪ್ರಯತ್ನವಾಗಿ “streets of ಬೆಂಗಳೂರು” ಎಂಬ ಕಿರುಚಿತ್ರ ನಿರ್ಮಾಣ ಮಾಡಿದ್ದಾರೆ. ಮುಂದೆ ಅದ್ದೂರಿ ಚಿತ್ರ ನಿರ್ಮಾಣ ಮಾಡುವ ಆಶಯ ಕೂಡ ಕೃಷ್ಣ ಅವರಿಗಿದೆ.WhatsApp Image 2022 05 30 at 12.22.38 PM

ಇತ್ತೀಚೆಗೆ “ಗುಲಾಬ್ ಪ್ರೊಡಕ್ಷನ್ಸ್” ಸಂಸ್ಥೆ ಅನಾವರಣ ಅದ್ದೂರಿಯಾಗಿ ನಡೆಯಿತು. ಕೃಷ್ಣ ಅವರ ತಾತಾ ಪದ್ಮನಾಭ ಸಾ ಖೋಡೆ ಅವರು ನೂತನ ಸಂಸ್ಥೆಯನ್ನು ಉದ್ಘಾಟಿಸಿದರು. ಕರ್ನಾಟಕ ರಾಜ್ಯದ ಪ್ರಸಿದ್ಧ ರಾಜಕಾರಣಿಗಳಾದ ಎಸ್.ಎಂ.ಕೃಷ್ಣ, ಕೆ.ಹೆಚ್ ಮುನಿಯಪ್ಪ, ಯೂತ್ ಕಾಂಗ್ರೆಸ್ ಮುಖಂಡರಾದ ಬಿ.ವಿ.ಶ್ರೀನಿವಾಸ್, ಲಹರಿ ವೇಲು ನಿರ್ದೇಶಕರಾದ ರಾಜೇಂದ್ರ ಸಿಂಗ್ ಬಾಬು, ಟಿ.ಎಸ್.ನಾಗಾಭರಣ, ನಾಗತಿಹಳ್ಳಿ ಚಂದ್ರಶೇಖರ್, ಕಲಾವಿದರಾದ ದೊಡ್ಡಣ್ಣ, ಜೈಜಗದೀಶ್, ವಿಜಯಲಕ್ಷ್ಮಿ ಸಿಂಗ್, ಪ್ರಮಿಳಾ ಜೋಷಾಯಿ, ಕುಮಾರ್ ಗೋವಿಂದು, ಟೆನ್ನಿಸ್ ಕೃಷ್ಣ ಸೇರಿದಂತೆ ಅನೇಕ ಕಲಾವಿದರು ಆಗಮಿಸಿ ನೂತನ ನಿರ್ಮಾಣ ಸಂಸ್ಥೆಗೆ ಶುಭಕೋರಿದರು.WhatsApp Image 2022 05 30 at 12.22.37 PM 1

ಇದೇ ಸಂದರ್ಭದಲ್ಲಿ “ಅನಂತಾಮೃತ” ಎಂಬ ಭಕ್ತಿಗೀತೆಗಳ ಧ್ವನಿಸಾಂದ್ರಿಕೆ ಸಹ ಬಿಡುಗಡೆಯಾಯಿತು. ಕೃಷ್ಣ ಅವರ ನಿರ್ಮಾಣದಲ್ಲಿ ಪ್ರೀತಮ್ ಶಿವಕುಮಾರ್ ನಿರ್ದೇಶಿಸಿರುವ 27 ನಿಮಿಷಗಳ “Streets of ಬೆಂಗಳೂರು” ಕಿರುಚಿತ್ರದ ಪ್ರದರ್ಶನ ಸಹ ನಡೆಯಿತು. ಕಿರುಚಿತ್ರ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.WhatsApp Image 2022 05 30 at 12.22.38 PM 1

ಈ ಕಿರುಚಿತ್ರದ ಮೂಲಕ ಪ್ರಜ್ವಲ್ ಗೌಡ ಎಂಬ ಯವನಟನನ್ನು “ಗುಲಾಬ್ ಪ್ರೊಡಕ್ಷನ್ಸ್” ಮೂಲಕ ಚಿತ್ರರಂಗಕ್ಕೆ ಪರಿಚಯಿಸಲಾಗುತ್ತಿದೆ‌.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…