ಹರಿಕಥೆ ಅಲ್ಲ ಗಿರಿಕಥೆ – ಇದು ಯಾರ ಲೈಫ್ ಸ್ಟೋರಿ?

ಇದು ನೈಜ ವ್ಯಕ್ತಿಯೊಬ್ಬರ ಕಥೆ. ಹಾಗಂತ ಇದು ಸಂಪೂರ್ಣವಾಗಿ ನೈಜ ಘಟನೆಗಳನ್ನು ಆಧರಿಸಿದ ಚಿತ್ರವಲ್ಲ. ಒಂದಿಷ್ಟು ನೈಜ ಅಂಶಗಳಿಗೆ, ಸಾಕಷ್ಟು ಕಾಲ್ಪನಿಕ ಅಂಶಗಳನ್ನು ಸೇರಿಸಿ, ಮಾಡಿರುವ ಪ್ರಯತ್ನವೇ ಈ ವಾರ ಬಿಡುಗಡೆಯಾಗುತ್ತಿರುವ ಹರಿಕಥೆ ಅಲ್ಲ ಗಿರಿಕಥೆ.

ಕಳೆದ ವರ್ಷ ಬಿಡುಗಡೆಯಾದ ಹೀರೋ ಚಿತ್ರದಲ್ಲಿ ನಗಿಸುವ ಪ್ರಯತ್ನ ಮಾಡಿದ್ದರು ರಿಷಭ್. ನಂತರ ಗರುಡ ಗಮನ ರಿಷಭ ವಾಹನ ಗಂಭೀರ ಚಿತ್ರವಾಗಿತ್ತು. ಈಗ ಮತ್ತೊಮ್ಮೆ ಕಾಮಿಡಿ ಚಿತ್ರವೊಂದರ ಮೂಲಕ ವಾಪಸ್ಸಾಗುತ್ತಿದ್ದಾರೆ ರಿಷಭ್. ಅವರು ಹೇಳುವಂತೆ ಇದೊಂದು ಸಂಪೂರ್ಣ ಮನರಂಜನೆಯ ಪ್ಯಾಕೇಜ್ ಅಂತೆ.picಇದು ಚಿತ್ರ ನಿರ್ದೇಶನ ಮಾಡಬೇಕೆಂದು ಕನಸು ಹೊತ್ತಿರುವ ಮಿಡ್ಲ್ ಕ್ಲಾಸ್ ಯುವಕನೊಬ್ಬನ ಕಥೆಯಂತೆ. ಆತ ಚಿತ್ರವೊಂದರ ನಿರ್ದೇಶನ ಮಾಡುವುದಕ್ಕೆ ಹೊರಟಾಗ, ಏನೆಲ್ಲ ಆಗುತ್ತದೆ ಎಂಬುದನ್ನು ಕಾಮಿಡಿ ರೂಪದಲ್ಲಿ ಈ ಚಿತ್ರದಲ್ಲಿ ಹೇಳಲಾಗಿದೆ ಎನ್ನುತ್ತಾರೆ ರಿಷಭ್.
ಇದೊಂದು ಕಾಲ್ಪನಿಕ ಚಿತ್ರವಾದರೂ, ಹಿಂದೊಮ್ಮೆ ತಾವು ಒಮ್ಮೆ ಸ್ಟ್ರಗ್ಲಿಂಗ್ ನಿರ್ದೇಶಕನಾಗಿದ್ದ ಸಂದರ್ಭದಲ್ಲಿ ನೋಡಿದ ಕೆಲವು ಸಂಗತಿಗಳನ್ನು ಈ ಚಿತ್ರದಲ್ಲಿ ಅಲ್ಲಲ್ಲಿ ಬಳಸಿಕೊಂಡಿರುವುದಾಗಿ ಅವರು ಹೇಳುತ್ತಾರೆ. 2004ರ ಕೊನೆಯಲ್ಲಿ ನಾನು ಎ.ಎಂ.ಆರ್. ರಮೇಶ್ ಅವರ ಸೈನೈಡ್ ಚಿತ್ರದಲ್ಲಿ ಕೆಲಸಕ್ಕೆ ಸೇರಿಕೊಂಡೆ. ನಂತರ ಗಂಡ-ಹೆಂಡತಿ ಚಿತ್ರದಲ್ಲಿ ನನಗೆ ಕ್ಲಾಪ್ ಬಾಯ್ ಕೆಲಸ ಸಿಕ್ಕಿತು. ಆ ನಂತರ ಒಂದಿಷ್ಟು ಚಿತ್ರಗಳಿಗೆ ಕೆಲಸ ಮಾಡಿದರೂ, ನಿರ್ದೇಶಕನಾಗುವುದಕ್ಕೆ ಅವಕಾಶ ಸಿಗಲಿಲ್ಲ. ಒಳ್ಳೆಯ ಕಾರ್ ಇಟ್ಟುಕೊಂಡವರು, ಮೈತುಂಬಾ ಒಡವೆ ಹಾಕಿದವರೆಲ್ಲ ನಮಗೆ ನಿರ್ಮಾಪಕರಾಗಿ ಕಾಣುತ್ತಿದ್ದರು. ಅವರನ್ನು ಚಿತ್ರ ನಿರ್ಮಿಸುವುದಕ್ಕೆ ಕ್ಯಾಚ್ ಹಾಕುವ ಪ್ರಯತ್ನ ಮಾಡುತ್ತಿದ್ದೆವು. ಆದರೆ, ಯಾವುದೂ ಸೆಟ್ ಆಗುತ್ತಿರಲಿಲ್ಲ. ಹೀಗೆ ಸ್ಟ್ರಗ್ಲಿಂಗ್ ಸಮಯದಲ್ಲಿ ಆದ ಒಂದಿಷ್ಟು ಅಂಶಗಳನ್ನು ಇಲ್ಲಿ ಬಳಸಿಕೊಳ್ಳಲಾಗಿದೆ ಎನ್ನುತ್ತಾರೆ ರಿಷಭ್.88895030

ಇನ್ನು, ಅವರು ಈ ಚಿತ್ರದಲ್ಲಿ ಹಿರಿಯ ನಟ ಹೊನ್ನವಳ್ಳಿ ಕೃಷ್ಣ ಅವರ ಮಗನ ಪಾತ್ರ ಮಾಡಿದ್ದಾರೆ. ಇಲ್ಲಿ ಕೃಷ್ಣ ಅವರು ತಮ್ಮ ನಿಜಜೀವನದ ಪಾತ್ರದಲ್ಲೇ ಕಾಣಿಸಿಕೊಂಡಿದ್ದಾರೆ. ಕೃಷ್ಣ ಅವರು ತಮ್ಮ ನಿಜಜೀವನದಲ್ಲಿ ನಿರ್ದೇಶಕನಾಗುವುದಕ್ಕೆ ಎಷ್ಟು ಕಷ್ಟಪಟ್ಟರು ಎಂಬುದು ಎಲ್ಲರಿಗೂ ಗೊತ್ತೇ ಇದೆ. ಸಾವಿರ ಚಿತ್ರಗಳಲ್ಲಿ ನಟಿಸಿದರೂ, ಅವರಿಗೆ ಕೊನೆಗೂ ನಿರ್ದೇಶಕರಾಗುವುದಕ್ಕೆ ಸಾಧ್ಯವಾಗಲೇ ಇಲ್ಲ. ಅವರ ಮಗನಾಗಿ ರಿಷಭ್ ಇಲ್ಲಿ ನಟಿಸಿದ್ದಾರೆ.jpg

ರಿಷಭ್ಗೆ ನಾಯಕಿಯರಾಗಿ ರಚನಾ ಇಂದರ್ ಮತ್ತು ತಪಸ್ವಿನಿ ಪೊಣ್ಣಚ್ಚ ಇದ್ದಾರೆ. ಪ್ರಮೋದ್ ಶೆಟ್ಟಿ ಇನ್ನೊಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇಡೀ ಚಿತ್ರ ಮೈಸೂರಿನ ಭಾಗದಲ್ಲೇ ಚಿತ್ರೀಕರಣಗೊಂಡಿದೆ. ಸಂದೇಶ್ ಪ್ರೊಡಕ್ಷನ್ಸ್ನಡಿ ಸಂದೇಶ್ ಎನ್ ನಿರ್ಮಿಸಿರುವ ಈ ಚಿತ್ರವನ್ನು ಕರಣ್ ಅನಂತ್ ಮತ್ತು ಅನಿರುದ್ಧ್ ಮಹೇಶ್ ಜೊತೆಯಾಗಿ ನಿರ್ರ್ದೇಶಿಸಿದ್ದಾರೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…