“ಗುರುದೇವ ಹೊಯ್ಸಳ” ನ ಗೆಲುವು .

hoysala kannada movie

ಯಶಸ್ಸಿಗೆ ಕಾರಣರಾದ ಸಮಸ್ತರಿಗೂ ಧನ್ಯವಾದ ತಿಳಿಸಿದ ಕೆ ಆರ್ ಜಿ ಸ್ಟುಡಿಯೋಸ್ .

ಕಳೆದ ವಾರ ಬಿಡುಗಡೆಯಾದ ನಮ್ಮ ಸಂಸ್ಥೆ ನಿರ್ಮಿಸಿರುವ ‘ಗುರುದೇವ್ ಹೊಯ್ಸಳ’ ಚಿತ್ರಕ್ಕೆ ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಅಪಾರ ಮೆಚ್ಚುಗೆ ಸಿಕ್ಕಿದ್ದು, ಚಿತ್ರ ಎರಡನೆಯ ವಾರಕ್ಕೆ ಕಾಲಿಟ್ಟಿದೆ. ರಾಜ್ಯದಲ್ಲಿ ಚುನಾವಣೆಗಳ ಕಾವು ಮತ್ತು ಐಪಿಎಲ್ ಜ್ವರದ ನಡುವೆಯೂ ಚಿತ್ರಕ್ಕೆ ಪ್ರೇಕ್ಷಕರು ದೊಡ್ಡ ಸಂಖ್ಯೆಯಲ್ಲಿ ಬಂದು ನೋಡಿ ಗೆಲ್ಲಿಸಿದ್ದಾರೆ. ಈ ಪ್ರಶಂಸೆಯಿಂದ ನಮ್ಮ ತಂಡಕ್ಕೆ ಸಾರ್ಥಕ್ಯದ ಭಾವ ಮೂಡಿದೆ.

ನಮ್ಮ ಕೆ ಆರ್ ಜಿ ಸ್ಟುಡಿಯೋಸ್ ನ ಮೊದಲ ಚಿತ್ರ ‘ರತ್ನನ್ ಪ್ರಪಂಚ’, ಅಮೇಜಾನ್ ಪ್ರೈಮ್ ನಲ್ಲಿ ಬಿಡುಗಡೆಯಾಗಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿತ್ತು. ಇತ್ತೀಚಿನ ದಿನಗಳಲ್ಲಿ ಕನ್ನಡದಲ್ಲಿ ಅತ್ಯಂತ ಹೆಚ್ಚು ವೀಕ್ಷಣೆಯಾದ ಚಿತ್ರ ಎಂಬ ಹೆಗ್ಗಳಿಕೆಗೂ ಪಾತ್ರವಾಗಿತ್ತು.
ಈಗ ನಮ್ಮ ಸಂಸ್ಥೆಯ ಎರಡನೆಯ ಚಿತ್ರಕ್ಕೂ ಜನಮನ್ನಣೆ ಸಿಕ್ಕಿರುವುದು ನಮ್ಮೆಲ್ಲರ ಜವಾಬ್ದಾರಿಯನ್ನು ಹೆಚ್ಚಿಸಿದೆ. ಮರ್ಯಾದೆ ಹತ್ಯೆ ಎಂಬ ಗಹನವಾದ ಸಮಸ್ಯೆಯ ಕುರಿತ ಈ ಚಿತ್ರಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ನಮಗೆ ಈ ತರಹದ ಇನ್ನಷ್ಟು ಸೂಕ್ಷ್ಮ ಸಂವೇದನೆಯ ಚಿತ್ರಗಳನ್ನು ನಿರ್ಮಿಸುವುದಕ್ಕೆ ಪ್ರೇರೇಪಿಸಿದೆ.Gurudev Hoysala Twitter Review: Dhananjaya's Action Crime Thriller Sets  Great Expectations! - Filmibeat

ಈ ಎರಡೂ ಚಿತ್ರಗಳ ಯಶಸ್ಸಿನಿಂದ ಸದ್ಯದಲ್ಲೇ ನಮ್ಮ ಸಂಸ್ಥೆಯ ಮೂರನೆಯ ಪ್ರಯತ್ನವಾದ ಉತ್ತರಕಾಂಡ ಚಿತ್ರವನ್ನು ಸದ್ಯದಲ್ಲೇ ಶುರು ಮಾಡಲಿದ್ದೇವೆ. ಉತ್ತರ ಕರ್ನಾಟಕದ ಗ್ರಾಮೀಣ ಭಾಗದಲ್ಲಿ ನಡೆಯುವ ಈ ಕಥೆಯಲ್ಲೂ ಧನಂಜಯ ನಟಿಸುತ್ತಿದ್ದಾರೆ. ಇದಲ್ಲದೆ ಇನ್ನಷ್ಟು ಚಿತ್ರಗಳನ್ನು ನಮ್ಮ ಸಂಸ್ಥೆಯಡಿ ನಿರ್ಮಿಸುತ್ತಿದ್ದು, ಸದ್ಯದಲ್ಲೇ ಈ ಬಗ್ಗೆ ಘೋಷಣೆಯಾಗಲಿದೆ.

ನಮ್ಮ ಈ ಗೆಲುವಿನಲ್ಲಿ ಸಿನಿಮಾ ಪ್ರೇಮಿಗಳು ಮತ್ತು ಮಾಧ್ಯಮದವರ ಪಾತ್ರ ಮಹತ್ವದ್ದಾಗಿದ್ದು, ನಮ್ಮ ಮುಂದಿನ ಕನಸುಗಳಿಗೆ ಅವರೇ ಸ್ಫೂರ್ತಿ ಎಂದರೆ ತಪ್ಪಿಲ್ಲ. ಜತೆಗೆ ವಿಮರ್ಶಕರು, ಸೋಷಿಯಲ್ ಮೀಡಿಯಾದ ಇನ್ಫ್ಲೂಯೆನ್ಸ್ ಪ್ರೋತ್ಸಾಹ ಮತ್ತು ಸಿನಿಮಾ ಪ್ರೀತಿ ಮರೆಯುವುದಕ್ಕೆ ಸಾಧ್ಯವೇ ಇಲ್ಲ. ನಮಗೆ ಸಲಹೆ, ಸೂಚನೆ ಮತ್ತು ಅಪರಿಮಿತ ಪ್ರೀತಿ ತೋರಿಸುತ್ತಾ ಬಂದಿರುವ ಸಹೋದರರಾದ ವಿಜಯ್ ಕಿರಗಂದೂರು ಮತ್ತು ನನ್ನ ಎಲ್ಲ ಹಿತೈಷಿಗಳಿಗೂ ನಾನು ಚಿರಋಣಿ. ಇಂದು ಕೆ ಆರ್ ಜಿ ಸ್ಟುಡಿಯೋಸ್ ಮತ್ತು ಕೆ ಆರ್ ಜಿ ಕನೆಕ್ಟ್ಸ್ ಈ ಹಂತಕ್ಕೆ ಬೆಳೆಯುತ್ತಿರುವುದಕ್ಕೆ ನಮ್ಮ ತಂಡದ ಪ್ರೀತಿ ಮತ್ತು ಪರಿಶ್ರಮ ಸಹ ಕಾರಣ. ಮುಂದಿನ ದಿನಗಳಲ್ಲಿ ನಿಮ್ಮನ್ನು ಇನ್ನಷ್ಟು ಮನರಂಜಿಸುವುದಕ್ಕೆ ಉತ್ಸುಕರಾಗಿದ್ದೇವೆ ಎಂದು ಕೆ ಆರ್ ಜಿ ಸ್ಟುಡಿಯೋಸ್ ನ ಕಾರ್ತಿಕ್ ಗೌಡ ಹಾಗೂ ಯೋಗಿ ಜಿ ರಾಜ್ ತಿಳಿಸಿದ್ದಾರೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…