ನೃತ್ಯ ನಿರ್ದೇಶಕ ಜಾನಿ ಮಾಸ್ಟರ್‌ ಈಗ ಹೀರೋ; “ಯಥಾ ರಾಜ ತಥಾ ಪ್ರಜಾ” ಚಿತ್ರಕ್ಕೆ ಮುಹೂರ್ತ…

Jani Master Turns Hero: Yatha Raja Tatha Praja

ಪೊಲಿಟಿಕಲ್‌ ಡ್ರಾಮಾದಲ್ಲಿರಲಿದೆ ಕಮರ್ಷಿಯಲ್‌ ಟಚ್…‌
ಮುಹೂರ್ತದಲ್ಲಿ ಭಾಗವಹಿಸಿದ ಸಲ್ಮಾನ್‌ ಖಾನ್‌ ಬಾಮೈದ ಆಯುಷ್‌ ಶರ್ಮಾ

ಸೌತ್‌ನ ಸ್ಟಾರ್‌ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್‌ ಹೀರೋಗಳಿಗೆ ಬಗೆಬಗೆ ಸ್ಟೆಪ್ಸ್‌ ಹಾಕಿಸಿ ಖ್ಯಾತಿ ಗಿಟ್ಟಿಸಿಕೊಂಡವರು. ಇದೀಗ ಇದೇ ಕೋರಿಯೋಗ್ರಾಫರ್‌ ತೆರೆಮೇಲೆ ಮಿಂಚಲು ಸಿದ್ಧರಾಗಿದ್ದಾರೆ. ಅಂದರೆ, “ಯಥಾ ರಾಜ ತಥಾ ಪ್ರಜಾ” ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಹೀರೋ ಆಗಿ ಪದಾರ್ಪಣೆ ಮಾಡುತ್ತಿದ್ದಾರೆ. ಇತ್ತೀಚೆಗಷ್ಟೇ ಈ ಚಿತ್ರದ ಮುಹೂರ್ತ ನೆರವೇರಿದ್ದು, ತೆಲುಗು ನಟ ಶರ್ವಾನಂದ ಮೊದಲ ದೃಶ್ಯಕ್ಕೆ ಕ್ಲಾಪ್‌ ಮಾಡಿದರೆ, ಸಲ್ಮಾನ್‌ ಖಾನ್‌ ಬಾಮೈದ ಆಯುಷ್‌ ಶರ್ಮಾ ಕ್ಯಾಮರಾಕ್ಕೆ ಚಾಲನೆ ನೀಡಿದ್ದಾರೆ. ನಿರ್ದೇಶಕ ಕರುಣಾ ಕುಮಾರ್‌ ಮೊದಲ ದೃಶ್ಯವನ್ನು ನಿರ್ದೇಶಿಸಿದ್ದಾರೆ.Jani Master Turns Hero: Yatha Raja Tatha Praja

ಇತ್ತೀಚೆಗಷ್ಟೇ ಕಿಚ್ಚ ಸುದೀಪ್‌ ನಟನೆಯ “ವಿಕ್ರಾಂತ್‌ ರೋಣ” ಚಿತ್ರದ ಯಕ್ಕಾ ಸಕ್ಕಾ ಹಾಡಿನ ಹುಕ್‌ ಸ್ಟೆಪ್‌ ಮೂಲಕವೇ ಎಲ್ಲರನ್ನು ಕುಣಿಸಿದ್ದ ಜಾನಿ ಮಾಸ್ಟರ್‌ ಇದೀಗ ನಾಯಕನಾಗಿ ಅದೃಷ್ಟ ಪರೀಕ್ಷೆಗಳಿದಿದ್ದಾರೆ. “ಯಥಾ ರಾಜ ತಥಾ ಪ್ರಜಾ” ಸಿನಿಮಾದಲ್ಲಿ ಜಾನಿ ಮಾಸ್ಟರ್‌ ಜತೆಗೆ “ಸಿನಿಮಾ ಬಂಡಿ” ಮೂಲಕ ಗುರುತಿಸಿಕೊಂಡ ವಿಕಾಸ್‌ ಸಹ ಮುಖ್ಯಭೂಮಿಕೆ ಯಲ್ಲಿರಲಿದ್ದಾರೆ. ಶ್ರಷ್ಟಿ ವರ್ಮಾ ನಾಯಕಿಯಾಗಿದ್ದಾರೆ. ಶ್ರೀನಿವಾಸ ವಿಟ್ಟಲ ಈ ನಿರ್ದೇಶಿಸಲಿರುವ ಈ ಚಿತ್ರವನ್ನು ಹರೇಶ್‌ ಪಟೇಲ್‌ ಜತೆ ಸೇರಿ ನಿರ್ದೇಶಕರೂ ಬಂಡವಾಳ ಹೂಡುತ್ತಿದ್ದಾರೆ. ಓಂ ಮೂವಿ ಕ್ರಿಯೇಶನ್ಸ್‌ ಮತ್ತು ಶ್ರೀ ಕೃಷ್ಣ ಮೂವಿ ಕ್ರಿಯೇಶನ್ಸ್‌ ಬ್ಯಾನರ್‌ನಲ್ಲಿ ಸಿನಿಮಾ ನಿರ್ಮಾಣವಾಗಲಿದೆ.Jani Master Turns Hero: Yatha Raja Tatha Praja

ಈ ಸಿನಿಮಾ ಬಗ್ಗೆ ಮಾಹಿತಿ ನೀಡುವ ನಿರ್ದೇಶಕ/ ನಿರ್ಮಾಪಕ ಶ್ರೀನಿವಾಸ್‌ ವಿಟ್ಟಲ, “ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಬರೆದು ಹರೇಶ್‌ ಪಟೇಲ್‌ ಅವರೊಟ್ಟಿಗೆ ಸೇರಿ ಸಿನಿಮಾ ನಿರ್ಮಾಣ ಮಾಡುತ್ತಿದ್ದೇನೆ. ಈ ಕಥೆಗೆ ಜಾನಿ ಮಾಸ್ಟರ್‌ ಸೂಟ್‌ ಆಗ್ತಾರೆ. ಆ ಕಾರಣಕ್ಕೆ ಅವರಿಗೂ ೨೦ ನಿಮಿಷದಲ್ಲಿ ಸಿನಿಮಾದ ಕಥೆ ಹೇಳಿದೆ. ಕಥೆ ಕೇಳಿ ಅವರಿಂದಲೂ ಓಕೆ ಎಂಬ ಉತ್ತರ ಸಿಕ್ಕಿತು. ಈ ಹಿಂದೆ ಟಿವಿಯಲ್ಲಿ ಕೇವಲ ೧೦ ನಿಮಿಷ ಮಾತ್ರ ರಾಜಕೀಯ ಸುದ್ದಿಗಳು ಪ್ರಸಾರವಾಗುತ್ತಿದ್ದವು. ಇದೀಗ ಅದು ೨೪/೭ ಆಗಿದೆ. ಹಾಗಾಗಿ ನಮ್ಮ ಈ ಸಿನಿಮಾ ಸಹ ರಾಜಕೀಯ ಹಿನ್ನೆಲೆಯಲ್ಲಿ ಮೂಡಿಬರಲಿರುವ ಕಮರ್ಷಿಯಲ್‌ ಸಿನಿಮಾ. ಸಮಾಜಕ್ಕೆ ಮಹತ್ವದ ಸಂದೇಶವೂ ಇದರಲ್ಲಿದೆ” ಎಂದರು.Jani Master Turns Hero: Yatha Raja Tatha Praja

ತೆಲುಗು,ತಮಿಳು ಮತ್ತು ಕನ್ನಡ ಭಾಷೆಗಳಲ್ಲಿ ಮೂಡಿಬರಲಿರುವ “ಯಥಾ ರಾಜ ತಥಾ ಪ್ರಜಾ” ಸಿನಿಮಾ ಸೆಪ್ಟೆಂಬರ್‌ ೧೫ರಿಂದ ಚಿತ್ರದ ಶೂಟಿಂಗ್‌ ಶುರುವಾಗಲಿದ್ದು, ಮೂರು ಶೇಡ್ಯೂಲ್‌ನಲ್ಲಿ ಸಿನಿಮಾ ಮುಗಿಸುವ ಯೋಜನೆ ನಿರ್ದೇಶಕರದ್ದು. ಚಿತ್ರದಲ್ಲಿ ನಾಲ್ಕು ಹಾಡುಗಳಿರಲಿದ್ದು, ರಾಧನ ಈ ಚಿತ್ರಕ್ಕೆ ಸಂಗೀತ ಸಂಯೋಜಿಸುತ್ತಿದ್ದಾರೆ.Jani Master Turns Hero: Yatha Raja Tatha Praja

ಈ ಚಿತ್ರದ ಮೂಲಕ ನಾಯಕರಾಗಿ ಎಂಟ್ರಿಕೊಡುತ್ತಿರುವ ಜಾನಿ ಮಾಸ್ಟರ್‌ ಸಹ ಚಿತ್ರದ ಬಗ್ಗೆ ಮಾತನಾಡಿದ್ದಾರೆ. “ಮೆಗಾಸ್ಟಾರ್‌ ಚಿರಂಜೀವಿ ಅವರ ಬರ್ತ್‌ಡೇ ದಿನದಂದೇ ನಮ್ಮ ಸಿನಿಮಾ ಮುಹೂರ್ತ ಕಂಡಿರುವುದು ಖುಷಿ ವಿಚಾರ. ಶ್ರೀನಿವಾಸ್‌ ಅವರು ಕಥೆ ಹೇಳಿದ ರೀತಿಯೇ ಚೆನ್ನಾಗಿತ್ತು. ಅದೇ ರೀತಿ ವಿಕಾಸ್‌ ನಟಿಸಿರುವ “ಸಿನಿಮಾ ಬಂಡಿ” ಸಿನಿಮಾ ನೋಡಿದ್ದೇನೆ. ಇದೀಗ ಅವರೊಂದಿಗೆ ನಟಿಸುತ್ತಿದ್ದೇನೆ. ನಾಗೇಶ್‌ ಅವರೇ ಈ ಚಿತ್ರಕ್ಕೆ “ಯಥಾ ರಾಜ ತಥಾ ಪ್ರಜಾ” ಎಂಬ ಶೀರ್ಷಿಕೆ ನೀಡಿದ್ದಾರೆ. ಒಟ್ಟು ಮೂರು ಭಾಷೆಗಳಲ್ಲಿ ಈ ಸಿನಿಮಾ ಸಿದ್ಧವಾಗಲಿದೆ” ಎಂದಿದ್ದಾರೆ.Jani Master Turns Hero: Yatha Raja Tatha Praja

“ಜಾನಿ ಮಾಸ್ಟರ್‌ ಅವರೊಂದಿಗೆ ಕೆಲಸ ಮಾಡುತ್ತಿರುವುದಕ್ಕೆ ಸಂತಸವಿದೆ. ಇದೊಂದು ಪೊಲಿಟಿಕಲ್‌ ಡ್ರಾಮಾ ಆಧರಿತ ಕಥೆ. ಕಮರ್ಷಿಯಲ್‌ ಅಂಶಗಳೂ ಸಿನಿಮಾದಲ್ಲಿರಲಿವೆ” ಎಂದರು ವಿಕಾಸ್.‌ ನಟಿ ಶ್ರಷ್ಟಿ ವರ್ಮಾ ಸಹ ಚಿತ್ರದ ಭಾಗವಾಗುತ್ತಿರುವುದಕ್ಕೆ ಖುಷಿಯಲ್ಲಿದ್ದಾರೆ. ಈ ಚಿತ್ರಕ್ಕೆ ಗಣೇಶ್‌ ಮಾಸ್ಟರ್‌ ನೃತ್ಯ ನಿರ್ದೇಶನ ಮಾಡಲಿದ್ದು, ರಾಧನ ಸಂಗೀತ ಸಂಯೋಜಿಸಲಿದ್ದಾರೆ. ಸುನೋಜ್‌ ವೆಲಯುಧನ್‌ ಈ ಚಿತ್ರದ ಛಾಯಾಗ್ರಹಣದ ಜವಾಬ್ದಾರಿ ಹೊತ್ತಿದ್ದಾರೆ. ಬಾಬಾ ಕಲಾ ನಿರ್ದೇಶನ ಚಿತ್ರಕ್ಕಿರಲಿದೆ.Jani Master Turns Hero: Yatha Raja Tatha Praja

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…