ಸೆನ್ಸಾರ್ ಗೆದ್ದ ‘ಲಿಪ್ ಸ್ಟಿಕ್ ಮರ್ಡರ್’ ಸದ್ಯದಲ್ಲೇ ತೆರೆಗೆ

'Lipstick Murder', which won the censors, will hit the screens soon

ಟ್ರೈಲರ್ ನಲ್ಲಿ ಹೊರಬಂತು ಲಿಪ್ ಸ್ಟಿಕ್ ಮರ್ಡರ್ ರಹಸ್ಯ

ಗುರುತು ಪರಿಚಯ ಇಲ್ಲದವರು ಕರೆದಲ್ಲಿಗೆ ಅವರ ಜೊತೆ ಹೋದರೆ ಯಾವರೀತಿ ದೌರ್ಜನ್ಯ, ಆಗಬಹುದು, ತಮ್ಮ ಜೀವಕ್ಕೂ ಕುತ್ತು ಬರಬಹುದು ಎಂಬುದನ್ನು ನಿರ್ದೇಶಕ ರಾಜೇಶ್ ಮೂರ್ತಿ ಅವರು ಲಿಪ್ ಸ್ಟಿಕ್ ಮರ್ಡರ್ ಎಂಬ ಚಿತ್ರದ ಮೂಲಕ ಹೇಳಹೊರಟಿದ್ದಾರೆ. ಆರ್ಯನ್ ರಾಜ್ ಈ ಚಿತ್ರದ ನಾಯಕ. ಮೂಲತಃ ಉತ್ತರ ಕರ್ನಾಟಕದವರಾದ ಆರ್ಯನ್ ರಾಜ್, ಶಂಕರ್ ನಾಗ್ ಅಪ್ಪಟ ಅಭಿಮಾನಿ.'Lipstick Murder', which won the censors, will hit the screens soon

ಈಗಾಗಲೇ ಒಂದೆರಡು ಧಾರಾವಾಹಿಗಳಲ್ಲಿ ನಟಿಸಿರುವ ಆರ್ಯನ್ ರಾಜ್ ಮಾಡೆಲಿಂಗ್ ಜಗತ್ತಿನಿಂದ ಅಭಿನಯಕ್ಕೆ ಕಾಲಿಟ್ಟವರು. ೨೦೧೫ರಿಂದ ಮಾಡೆಲಿಂಗ್ ಮಾಡಿಕೊಂಡಿದ್ದ ಆರ್ಯನ್, ಕೆಲ ಆಡ್ ಫಿಲಂಗಳಲ್ಲೂ ಅಭಿನಯಿಸಿದ್ದಾರೆ. ಆಗಲೇ ರಾಜೇಶ್ ಮೂರ್ತಿ ಇವರ ಪ್ರತಿಭೆಯನ್ನು ಗುರ್ತಿಸಿ ತಮ್ಮ ಚಿತ್ರದಲ್ಲಿ ಅವಕಾಶ ನೀಡಿದರು. ಆನಂತರ ವಿಷ್ಣು, ಶಿವ, ರಾಮನಾಗಿ ಮೈಥಲಾಜಿಕಲ್ ಸೀರಿಯಲ್ ಗಳಲ್ಲಿ ದೇವರ ಪಾತ್ರಗಳನ್ನೂ ಮಾಡಿದರು. ಇದೀಗ ಸೀರಿಯಲ್ ಕಿಲ್ಲರ್ ಹಿಂದೆಬಿದ್ದು, ಆಕೆ ಯಾರೆಂದು ಪತ್ತೆಹಚ್ಚುವ ಇನ್ ಸ್ಪೆಕ್ಟರ್ ಆಗಿ ತೆರೆಮೇಲೆ ಬರುತ್ತಿದ್ದಾರೆ.'Lipstick Murder', which won the censors, will hit the screens soon

ಇನ್ವೆಸ್ಟಿಗೇಶನ್ ಕ್ರೈಮ್ ಥ್ರಿಲ್ಲರ್ ಕಥಾಹಂದರ ಹೊಂದಿದ ಲಿಪ್ ಸ್ಟಿಕ್ ಮರ್ಡರ್ ಚಿತ್ರವೀಗ ಬಿಡುಗಡೆಗೆ ಸಿದ್ದವಾಗಿದ್ದು, ಇತ್ತೀಚೆಗಷ್ಟೇ ಈ ಚಿತ್ರದ ಟ್ರೈಲರ್ ಕೂಡ ಹೊರಬಂದಿದ್ದು, ಈ ಮೂಲಕ ಕಥೆಯ ಒಂದಷ್ಟು ಅಂಶಗಳನ್ನು ಬಿಟ್ಟುಕೊಡುವ ಮೂಲಕ ಕುತೂಹಲವನ್ನು ಹುಟ್ಟುಹಾಕಿದೆ. ಅಲ್ಲದೆ ಸೆನ್ಸಾರ್ ಮಂಡಳಿಯಿಂದಲೂ ಯಾವುದೇ ಕಟ್ ಇಲ್ಲದೆ ಯು/ಎ ಸರ್ಟಿಫಿಕೇಟ್ ಪಡೆದುಕೊಂಡಿದೆ. ಸಿನಿವ್ಯಾಲಿ ಕ್ರಿಯೇಶನ್ಸ್ ಮೂಲಕ ಬಿ.ಎಸ್. ಮಂಜುನಾಥ್ ಹಾಗೂ ರಾಜೇಶ್ ಮೂರ್ತಿ ಸೇರಿ ನಿರ್ಮಿಸಿರುವ ಈ ಚಿತ್ರದಲ್ಲಿ ಆನ್ ಲೈನ್ ಡೇಟಿಂಗ್ ಆಪ್ ಮೂಲಕ ಯುವತಿಯರು, ಯುವಕರನ್ನು ಯಾವರೀತಿ ತಮ್ಮ ಬಲೆಗೆ ಬೀಳಿಸಿಕೊಂಡು ಮೋಸ ಮಾಡುತ್ತಾರೆ ಎಂಬುದನ್ನು ಈ ಚಿತ್ರದ ಮೂಲಕ ಹೇಳಲಾಗಿದೆ.'Lipstick Murder', which won the censors, will hit the screens soon

ಡೇಟಿಂಗ್ ಆಪ್ ಮೂಲಕ ಸಂಪರ್ಕವಾಗುವ ಮಹಿಳೆಯರು ಕರೆದಲ್ಲಿಗೆ ಹೋಗುವ ಯುವಕರು ಯಾವರೀತಿ ಕೊಲೆಯಾಗುತ್ತಾರೆ, ಹೆಣ್ಣೊಬ್ಬಳು ಯಾಕೆ ಇಂಥ ಯುವಕರನ್ನು ಟಾರ್ಗೆಟ್ ಮಾಡುತ್ತಾಳೆ ಎನ್ನುವುದಕ್ಕೆ ಕಾರಣವನ್ನೂ ಚಿತ್ರದಲ್ಲಿ ಹೇಳಿದ್ದಾರೆ. ಸರಣಿ ಕೊಲೆಗಳ ಹಿಂದಿರುವ ರಹಸ್ಯವನ್ನು ಇನ್ವೆಸ್ಟಿಗೇಶನ್ ಆಫೀಸರ್ ಪತ್ತೆಹಚ್ಚಿ ಆ ಕೊಲೆಗಾರ್ತಿ ಯಾರು, ಕೊಲೆಯಾದವರಿಗೂ ಆಕೆಗೂ ಏನಾದರೂ ಸಂಬಂಧವಿತ್ತೇ, ಆಕೆಯೇನು ಕಿಲ್ಲರಾ, ಒಬ್ಬ ಸೈಕೋನಾ?, ಇಂಥ ಹಲವಾರು ಸಂದೇಹಗಳಿಗೆ ಉತ್ತರ ಇನ್ಸ್ ಪೆಕ್ಟರ್ ತನಿಖೆಯಿಂದ ಸಿಗುತ್ತದೆ.'Lipstick Murder', which won the censors, will hit the screens soon

ಹೈದರಾಬಾದ್ ಮೂಲದ ಅಲೈಕಾ ಚಿತ್ರದ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಉಳಿತೆ ರಾಜೇಶ್ ಮಿಶ್ರಾ ಈ ಚಿತ್ರದಲ್ಲಿದ್ದಾರೆ. ನಿತೀಶ್ ಕುಮಾರ್ ಅವರ ಸಂಗೀತ ಸಂಯೋಜನೆ, ಆರ್.ವಿನೋದ್ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ. ಸದ್ಯದಲ್ಲೇ ಚಿತ್ರವನ್ನು ತೆರೆಗೆ ತರುವ ಯೋಜನೆ ನಿರ್ಮಾಪಕರಿಗಿದೆ.'Lipstick Murder', which won the censors, will hit the screens soon 'Lipstick Murder', which won the censors, will hit the screens soon

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…