ಮನಸೂರೆಗೊಳ್ಳುತ್ತಿದೆ “ಮೇಡ್ ಇನ್ ಬೆಂಗಳೂರು” ಹಾಡು

made in bangalore kannada movie

ನಾನಾ ಊರುಗಳಿಂದ ನಾನಾ ಭಾಷೆಗಳನ್ನಾಡುವ ಜನ ಹಲವು ಕಾಲಗಳಿಂದ ಬೆಂಗಳೂರಿನಲ್ಲಿದ್ದಾರೆ. ಅಂತಹ ಬೆಂಗಳೂರಿನ ಕುರಿತಾಗಿ ಬರುತ್ತಿರುವ ಚಿತ್ರ “ಮೇಡ್ ಇನ್ ಬೆಂಗಳೂರು”.

ಈ ಚಿತ್ರದ ” ಬನ್ನಿರೆ ಬೆಂಗಳೂರಿಗೆ” ಎಂಬ ಹಾಡನ್ನು ಖ್ಯಾತ ನಿರ್ದೇಶಕ ಭಗವಾನ್ ಬಿಡುಗಡೆ ಮಾಡಿದರು. ಚಿತ್ರದ ಪೋಸ್ಟರ್ ಹೆಸರಾಂತ ಪಿ ಆರ್ ಓ ಸುಧೀಂದ್ರ ವೆಂಕಟೇಶ್ ಅವರಿಂದ ಅನಾವರಣವಾಯಿತು.made in bangalore kannada movie

ಈ ಹಾಡನ್ನು ಹನ್ನೊಂದು ಭಾಷೆಗಳನ್ನು ಬಳಸಿ ರಚಿಸಲಾಗಿದೆ. ಜನಪ್ರಿಯ ಗಾಯಕರಾದ ಶ್ರೀಹರ್ಷ ಎಂ.ಆರ್, ಕಂಬದ ರಂಗಯ್ಯ, ರೋಹಿತ್ ಭಟ್, ಮದ್ವೇಶ್ ಭಾರದ್ವಾಜ್, ಮೇಘ ಕುಲಕರ್ಣಿ, ಪೂಜಾ ರಾವ್, ನಾರಾಯಣ ಶರ್ಮ, ಅದಮ್ಯ ರಮಾನಂದ್, ನಿಹಾಲ್ ವಿಜೇತ್, ಆದರ್ಶ ಶೆಣೈ, ಪ್ರವೀಣ್ ಶಣ್ಮುಗ, ಅಥರ್ವ ರಾವ್, ಅಪ್ಪಣ್ಣ, ಅಶ್ವಿನ್ ಪ್ರಭಾತ್, ರಾಕೇಶ್ ಪೂಜಾರಿ ಮುಂತಾದವರು ಈ ಹಾಡನ್ನು ಸುಶ್ರಾವ್ಯವಾಗಿ ಹಾಡಿದ್ದಾರೆ ಎಂದು ಸಂಗೀತ ನಿರ್ದೇಶಕ ಅಶ್ವಿನ್ ಪಿ ಕುಮಾರ್ ಹಾಡಿನ ಬಗ್ಗೆ ವಿವರಣೆ ನೀಡಿದರು…ಅಶ್ವಿನ್ ಪಿ ಕುಮಾರ್ ಸಹ ಈ ಗೀತೆಗೆ ಧ್ವನಿಯಾಗಿದ್ದಾರೆ.made in bangalore kannada movie

ನಾನು ರಾಘವೇಂದ್ರಸ್ವಾಮಿಗಳ ಪರಮಭಕ್ತ. ರಾಯರ ಭಕ್ತರಿಂದಲೇ ಈ ಹಾಡನ್ನು ಬಿಡುಗಡೆ ಮಾಡಿಸುವ ಆಸೆಯಿತ್ತು. ಹಾಗಾಗಿ “ಮಂತ್ರಾಲಯ ಮಹಾತ್ಮೆ” ಯಂತಹ ಅದ್ಭುತ ಚಿತ್ರದ ನಿರ್ಮಾಪಕರು ಹಾಗೂ ಖ್ಯಾತ ನಿರ್ದೇಶಕರೂ ಆಗಿರುವ ಭಗವಾನ್ ಅವರಿಂದ ಹಾಡು ಬಿಡುಗಡೆ ಮಾಡಿಸಿದ್ದೇವೆ. ನಲವತ್ತೆಂಟು ವರ್ಷಗಳ ಹಿಂದೆ ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಯನ್ನು ರಾಯರ ಭಕ್ತರಾದ ಸುಧೀಂದ್ರ ಅವರು ಆರಂಭಿಸಿದ್ದರು. ಈಗ ಆ ಸಂಸ್ಥೆಯನ್ನು ಮುನ್ನಡೆಸುತ್ತಿರುವ ಖ್ಯಾತ ಪಿ.ಆರ್.ಓ ಸುಧೀಂದ್ರ ವೆಂಕಟೇಶ್ ಅವರಿಂದ ಪೋಸ್ಟರ್ ಬಿಡುಗಡೆ ಮಾಡಿಸಿದ್ದು ಖುಷಿಯಾಗಿದೆ. ಚಿತ್ರ‌ ತೆರೆಗೆ ಬರಲು ಸಿದ್ದವಾಗಿದೆ. ಸೆಪ್ಟೆಂಬರ್ ನಲ್ಲಿ ಬಿಡುಗಡೆಯಾಗಲಿದೆ ಎಂದರು ನಿರ್ಮಾಪಕ ಬಾಲಕೃಷ್ಣ.made in bangalore kannada movie

ಮಧ್ಯಮವರ್ಗದ ಹುಡುಗನೊಬ್ಬ ಐಟಿ ಕಂಪನಿ ಕೆಲಸ ಬಿಟ್ಟು, ಹೊಸ ಕಂಪನಿ ಆರಂಭಿಸುತ್ತಾನೆ. ಅದಕ್ಕಾಗಿ ಹೂಡಿಕೆದಾರರನ್ನು ಹುಡುಕುತ್ತಾನೆ. ಸಿಗದಿದ್ದಾಗ ಗ್ಯಾಂಗ್ ಸ್ಟರ್ ಬಳಿ ಹಣ ಪಡೆಯುತ್ತಾನೆ. ಮುಂದೇನಾಗುತ್ತದೆ ಎಂಬುದೆ ಚಿತ್ರದ ಕಥೆ ಎಂದು ನಿರ್ದೇಶಕ ಪ್ರದೀಪ್ ಶಾಸ್ತ್ರಿ ವಿವರಣೆ ನೀಡಿದರು.

ಚಿತ್ರದ ನಾಯಕ ಮಧುಸೂದನ್ ಗೋವಿಂದ್, ನಟರಾದ ಪುನೀತ್ ಮಾಂಜ ಹಾಗೂ ವಂಶಿಧರ್ ಸಹ ಈ ಚಿತ್ರದ ಕುರಿತು ಮಾತನಾಡಿದರು. ನಾವು ಚಿತ್ರ ನಿರ್ಮಾಣ ಮಾಡಬೇಕಾದರೆ ಇಷ್ಟು ಸುಲಭವಿರಲಿಲ್ಲ. ಈಗ ತಂತ್ರಜ್ಞಾನ ತುಂಬಾ ಮುಂದುವರೆದಿದೆ. ಹೊಸಬರ ತಂಡದಿಂದ ಹೊಸಚಿತ್ರವೊಂದು ನಿರ್ಮಾಣವಾಗಿದೆ. ರಾಯರ ಭಕ್ತರು ನಿರ್ಮಾಣ ಮಾಡಿದ್ದಾರೆ. ಇಡೀ ತಂಡಕ್ಕೆ ರಾಯರ ಕೃಪೆಯಿರಲಿ ಎಂದು ಹಿರಿಯ ನಿರ್ದೇಶಕ ಭಗವಾನ್ ಹಾರೈಸಿದರು.made in bangalore kannada movie

ಹಿರಿಯ ನಟರಾದ ಅನಂತನಾಗ್, ಸಾಯಿಕುಮಾರ್, ಪ್ರಕಾಶ್ ಬೆಳವಾಡಿ ಮುಂತಾದ ಕಲಾವಿದರು “ಮೇಡ್ ಇನ್ ಬೆಂಗಳೂರು” ಚಿತ್ರದಲ್ಲಿ ನಟಿಸಿದ್ದಾರೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…