ಶ್ರೀಕನ್ಯಕಾಪರಮೇಶ್ವರಿ ದೇವಿಯ ಮಹಿಮೆ ಸಾರುವ “ನಾಗಲೋಕ ನಾಗಕನ್ನಿಕೆ ಶ್ರೀ ವಾಸವಿ” ಕಿರುಚಿತ್ರ.

"Nagaloka Nagakannike Sri Vasavi" short film glorifying Goddess Srikanyakaparameshwari.

ಮಲ್ಲೇಶ್ವರಂ ಶ್ರೀವಾಸವಿದೇವಿಯ ಬ್ರಹ್ಮ ರಥೋತ್ಸವ ಸಂದರ್ಭದಲ್ಲಿ ನಿರಂತರವಾಗಿ ಪ್ರಸಾರವಾಗುತ್ತಿದೆ ಈ ಕಿರು ಚಲನಚಿತ್ರ.

ಶ್ರೀಕನ್ಯಕಾಪರಮೇಶ್ವರಿ ಮಾತೆಯ ಭಕ್ತರು ವಿಶ್ವದೆಲ್ಲೆಡೆ ಇದ್ದಾರೆ. ಬೆಂಗಳೂರಿನಲ್ಲೂ ಮಾತೆಯ ಅನೇಕ ದೇವಸ್ಥಾನಗಳಿದೆ. ಅದರಲ್ಲೂ ಮಲ್ಲೇಶ್ವರ 8 ನೇ ಕ್ರಾಸ್ ನಲ್ಲಿರುವ ಶ್ರೀಕನ್ಯಕಾಪರಮೇಶ್ವರಿ ದೇವಸ್ಥಾನ ಅಪಾರ ಭಕ್ತರನ್ನು ಹೊಂದಿರುವ ಪರಮಪವಿತ್ರ ದೇವಸ್ಥಾನ."Nagaloka Nagakannike Sri Vasavi" short film glorifying Goddess Srikanyakaparameshwari.

ಭಾರತದಾದ್ಯಂತ ಅನೇಕ ವಾಸವಿದೇವಿಯ ದೇವಸ್ಥಾನಗಳಿದೆ ಆದರೆ ವಾಸವಿ ದೇವಿಗೆ ಬ್ರಹ್ಮ ರಥೋತ್ಸವ ನಡೆಯುವುದು ಮಲ್ಲೇಶ್ವರಂ ವಾಸವಿ ದೇವಸ್ಥಾನದಲ್ಲಿ ಮಾತ್ರ. ಕಳೆದ ಇಪ್ಪತ್ತು ವರ್ಷಗಳಿಂದ ಅದ್ದೂರಿಯಾಗಿ ಬ್ರಹ್ಮ ರಥೋತ್ಸವ ಆಚರಿಸಿಕೊಂಡು ಬರಲಾಗುತ್ತಿದೆ. ಈ ಬಾರಿಯ ವಿಶೇಷವೆಂದರೆ “ನಾಗಕನ್ಯೆ ಶ್ರೀವಾಸವಿ” ಎಂಬ ಭವ್ಯ ನಾಗಲೋಕದ ಸೃಷ್ಟಿ. ದೇವಸ್ಥಾನದ ಮಹಾದ್ವಾರದಿಂದಲೇ ಹುತ್ತದೊಳಗೆ ಆಗಮಿಸಿ, ಸುಮಾರು 150 ಅಡಿಗಳ ಉದ್ದದ ಸುರಂಗದೊಳಗೆ ವಿವಿಧ ಸರ್ಪಗಳ ದರ್ಶನ. ಆನಂತರ ನಾಗಕನ್ನಿಕೆಯಾಗಿ ನಿಂತು ಭಕ್ತರನ್ನು ಅನುಗ್ರಹಿಸುವ ತಾಯಿ ವಾಸವಿಯ ದರ್ಶನ.‌ ಅಬ್ಬಾ ನಿಜಕ್ಕೂ ಅದ್ಭುತವಾಗಿ ಮೂಡಿಬಂದಿದೆ. ಕಲಾ ನಿರ್ದೇಶಕ ವಸಂತ ಎಂ ಕುಲಕರ್ಣಿ ಅವರ ಸಾರಥ್ಯದಲ್ಲಿ ನಿರ್ಮಾಣವಾಗಿದೆ."Nagaloka Nagakannike Sri Vasavi" short film glorifying Goddess Srikanyakaparameshwari.

ಈ ಬಾರಿಯ ಬ್ರಹ್ಮರಥೋತ್ಸವದ ವಿಶೇಷವೆಂದರೆ “ನಾಗಲೋಕ ನಾಗಕನ್ನಿಕೆ ಶ್ರೀವಾಸವಿ” ಎಂಬ ಐದು ನಿಮಿಷಗಳ ಕಿರು ಚಲನಚಿತ್ರ ನಿರ್ಮಾಣ. ಲಕ್ಕಿ ಶಂಕರ್ ಈ ಕಿರುಚಿತ್ರ ನಿರ್ದೇಶನ ಮಾಡಿದ್ದಾರೆ. ಜೈ ಆನಂದ್ ಛಾಯಾಗ್ರಾಹಕರಾಗಿದ್ದಾರೆ. ನಿಮಿಕ ರತ್ನಾಕರ್ ವಾಸವಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸಿದ್ಲಿಂಗು ಶ್ರೀಧರ್, ಪ್ರಸನ್ನ ಗೌಡ ಅಭಿನಯಿಸಿದ್ದಾರೆ. ಜೇಮ್ಸ್ ಅವರ ಸಂಗೀತ ನಿರ್ದೇಶನ ಹಾಗೂ ಅರ್ಜುನ್ ಕಿಟ್ಟು ಸಂಕಲನ ಈ ಚಿತ್ರಕ್ಕಿದೆ. ಶಶಾಂಕ್ ಶೇಷಗಿರಿ ಹಾಡೊಂದನ್ನು ಹಾಡಿದ್ದಾರೆ. ಡಿಸೆಂಬರ್ 16 ರಿಂದ ಜನವರಿ 3ರ ತನಕ ನಡೆಯುವ ಬ್ರಹ್ಮೋತ್ಸವ ಸಂದರ್ಭದಲ್ಲಿ ಈ ಕಿರು ಚಲನಚಿತ್ರ ದೇವಸ್ಥಾನ ತೆರೆದಿರುವ ಸಮಯದಲ್ಲಿ ಪ್ರೊಜೆಕ್ಟರ್ ಮೂಲಕ ಪ್ರಸಾರವಾಗುತ್ತಲೇ ಇರುತ್ತದೆ."Nagaloka Nagakannike Sri Vasavi" short film glorifying Goddess Srikanyakaparameshwari.
ಮಲ್ಲೇಶ್ವರಂ ಆರ್ಯ ವೈಶ್ಯ ಸಂಘದಿಂದ ಅನೇಕ ಸಾಮಾಜಿಕ ಕಾರ್ಯಗಳನ್ನು ಹಮ್ಮಿಕೊಂಡಿರುತ್ತೇವೆ. ಅಡುಗೆ ಮಾಡಿಕೊಳ್ಳಲು ಆಶಕ್ತರಾಗಿರುವ ನೂರಕ್ಕೂ ಅಧಿಕ ಕುಟುಂಬಕ್ಕೆ ನಮ್ಮ ಸಂಘದಿಂದ ಬೆಳಗ್ಗೆ – ರಾತ್ರಿ ಆಹಾರ ವಿತರಿಸುವುದು. ಬಡವರಿಗೆ ಅತ್ಯಂತ ಕಡಿಮೆ ದರದಲ್ಲಿ ಡಯಾಲಿಸಸ್ ಮಾಡಿಸುವುದು ಮುಂತಾದ ಸಮಾಜಮುಖಿ ಕಾರ್ಯಗಳು ನಿರಂತರವಾಗಿ ನಡೆಯುತ್ತಿದೆ ಎಂದು ತಿಳಿಸಿದ ಕಾರ್ಯದರ್ಶಿ ಆರ್.ಪಿ.ರವಿಶಂಕರ್ ಅವರು ನಾವು ಪ್ರತಿ ಎರಡು ವರ್ಷಕೊಮ್ಮೆ ನಡೆಯುವ ಬ್ರಹ್ಮೋತ್ಸವದಲ್ಲೂ ಬೇರೆಬೇರೆ ರೀತಿಯ ಕನ್ಸೆಪ್ಟ್ ಮೂಲಕ ದೇವಸ್ಥಾನವನ್ನು ಅಲಂಕರಿಸುತ್ತೇವೆ. ಇದಕ್ಕೆ ಪ್ರಮುಖ ಕಾರಣ ಹದಿನೈದು ವರ್ಷ ಒಳಗಿನ ಮಕ್ಕಳು ದೇವಸ್ಥಾನ ಕ್ಕೆ ಬರುವಂತಾಗಬೇಕು. ಈ ಬಾರಿ ನಾಗಲೋಕದ ಸೆಟ್ ಹಾಕಿಸಿದ್ದೇವೆ. ಜನವರಿ 3 ರ ತನಕ‌‌ ನೋಡಲು ಲಭ್ಯವಿರುತ್ತದೆ. ಎಲ್ಲರೂ ಬನ್ನಿ ಎಂದರು."Nagaloka Nagakannike Sri Vasavi" short film glorifying Goddess Srikanyakaparameshwari.

ನಾವು ಕಮರ್ಷಿಯಲ್ ಸಿನಿಮಾ ಮಾಡುವ ರೀತಿಯ ಬೇರೆ. ಇದೇ ಬೇರೆ. ತಾಯಿಯ ಕುರಿತಾದ ಐದು ನಿಮಿಷಗಳ ಈ ಕಿರು ಚಲನಚಿತ್ರ ವೀಕ್ಷಿಸಿದವರು ಮನಸಾರೆ ಹರಸಿ ಹೋಗುತ್ತಿದ್ದಾರೆ. ನನಗೆ ಇದಕ್ಕಿಂತ ಇನೇನು ಬೇಕು. ಇದು ನನ್ನ ಪುಣ್ಯ. ಅವಕಾಶ ನೀಡಿದ ಎಲ್ಲರಿಗೂ ಧನ್ಯವಾದ ಎಂದರು ನಿರ್ದೇಶಕ ಲಕ್ಕಿ ಶಂಕರ್.

ವಾಸವಿ ಮಾತೆಯ ಪಾತ್ರದಲ್ಲಿ ಅಭಿನಯಿಸಿರುವುದು ನನ್ನ ಬಹುಜನ್ಮಗಳ ಪುಣ್ಯ. ಈ ಕಿರು ಚಲನಚಿತ್ರ ನೋಡಿದ‌ ಪ್ರತಿಯೊಬ್ಬರೂ ನನ್ನನ್ನು ಗುರುತಿಸುತ್ತಿರುವುದು ಖುಷಿಯಾಗಿದೆ ಎನ್ನುತ್ತಾರೆ ನಿಮಿಕ ರತ್ನಾಕರ್. ನಟ ಪ್ರಸನ್ನ ಗೌಡ ಸಹ ತಮ್ಮ ಅನುಭವ ಹಂಚಿಕೊಂಡರು."Nagaloka Nagakannike Sri Vasavi" short film glorifying Goddess Srikanyakaparameshwari.

ಈ ಅದ್ಭುತ ನಾಗಲೋಕ ಸೃಷ್ಟಿಸಲು ಒಂದು ತಿಂಗಳಿಗೂ ಹೆಚ್ಚು ಸಮಯ ಬೇಕಾಯಿತು‌. ಐವತ್ತಕ್ಕೂ ಅಧಿಕ ಕಲಾವಿದರು ಇದಕ್ಕಾಗಿ ಕೆಲಸ ಮಾಡಿದ್ದಾರೆ ಎಂದರು ಕಲಾ ನಿರ್ದೇಶಕ ವಸಂತ ಎಂ ಕುಲಕರ್ಣಿ. ಛಾಯಾಗ್ರಾಹಕ ಜೈಆನಂದ್ ಸಹ ಕಿರು ಚಲನಚಿತ್ರದ ಬಗ್ಗೆ ಮಾತನಾಡಿದರು. ಮಲ್ಲೇಶ್ವರಂ ಆರ್ಯವೈಶ್ಯ ಸಂಘದ ಅಧ್ಯಕ್ಷರಾದ ಗೋವಿಂದರಾಜು ಅವರು ಸೇರಿದಂತೆ ಅನೇಕ ಪದಾಧಿಕಾರಿಗಳು ಪತ್ರಿಕಾಗೋಷ್ಠಿಯಲ್ಲಿದ್ದರು.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…