ನವರಸಗಳನ್ನಾಧರಿಸಿ “9 ಸುಳ್ಳು ಕಥೆಗಳು”

ombattu sullu kathegalu kannada movie

ಶೃಂಗಾರ, ಹಾಸ್ಯ, ಕರುಣ ಸೇರಿದಂತೆ ಹೀಗೆ ನವರಸಗಳಿದೆ ಇಂತಹ ನವರಸಗಳನ್ನು ಆಧರಿಸಿ “9 ಸುಳ್ಳು ಕಥೆಗಳು” ಎಂಬ ಚಿತ್ರ ನಿರ್ದೇಶನ ಮಾಡಿದ್ದಾರೆ ಮಂಜುನಾಥ್ ಮುನಿಯಪ್ಪ.ombattu sullu kathegalu kannada movie

ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನಡೆಯಿತು. ಟ್ರೇಲರ್ ಗೆ‌ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಧ್ವನಿ ನೀಡಿರುವುದು ಚಿತ್ರದ ವಿಶೇಷ. ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾದ ಸದಾಶಿವ ಶೆಣೈ, ಪತ್ರಕರ್ತ, ನಿರ್ಮಾಪಕ ಹಾಗೂ ನಿರ್ದೇಶಕ ಇಂದ್ರಜಿತ್ ಲಂಕೇಶ್ ಮುಖ್ಯ ಅತಿಥಿಗಳಾಗಿ ಆಗಮಿಸಿ ಟ್ರೇಲರ್ ಹಾಗೂ ಹಾಡುಗಳನ್ನು ಬಿಡುಗಡೆ ಮಾಡಿದರು.ombattu sullu kathegalu kannada movie

ಮೂಲತಃ ರಂಗಭೂಮಿಯಲ್ಲಿ ಸಾಕಷ್ಟು ವರ್ಷಗಳಿಂದ ಅನುಭವವಿರುವ ಮಂಜುನಾಥ್ ಮುನಿಯಪ್ಪ ನಿರ್ದೇಶಿಸಿ, ನಿರ್ಮಿಸಿರುವ ಮೊದಲ ಚಿತ್ರವಿದು.
ಈ ಚಿತ್ರದ ಕುರಿತು ಚಿತ್ರತಂಡದ ಸದಸ್ಯರು ಮಾಹಿತಿ ನೀಡಿದರು.ombattu sullu kathegalu kannada movie

ಇದೊಂದು ನೈಜ ಘಟನೆ ಆಧಾರಿತ ಚಿತ್ರ. ಕೆಲವು ಪುಸ್ತಕಗಳ ಹಾಗೂ ಸಣ್ಣಕಥೆಗಳನ್ನು ಓದಿದ್ದೀನಿ‌. ನವರಸಗಳನ್ನು ಆಧರಿಸಿ ಈ ಚಿತ್ರದ ಕಥೆ ಮಾಡಿದೆ‌‌. ನಂತರ ನಿರ್ಮಾಪಕರಿಗೆ ಹುಡುಕಾಡಿದೆ. ಯಾರು ಸಿಗಲಿಲ್ಲ. ನನ್ನ ಸ್ನೇಹಿತ ಸೂರ್ಯನಾರಾಯಣ್ ಮೊದಲು ದೊಡ್ಡ ಮೊತ್ತದ ಹಣ ನೀಡಿ ಈ ಚಿತ್ರಕ್ಕೆ ಚಾಲನೆ ನೀಡಿದರು. ನಂತರ ಸಾಕಷ್ಟು ಗೆಳೆಯರು ನನ್ನ ಜೊತೆಯಾದರು. ಪ್ರಮೋದ್ ಶೆಟ್ಟಿ, ವಿನಾಯಕ ಜೋಶಿ, ಕರಿ ಸುಬ್ಬು, ಸುಕೃತ ವಾಗ್ಲೆ, ಲಕ್ಷ್ಮೀ ಚಂದ್ರಶೇಖರ್ ಸೇರಿದಂತೆ ನೂರಕ್ಕೂ ಅಧಿಕ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ‌. ಖ್ಯಾತ ನಟ ಶಿವರಾಜಕುಮಾರ್ ಅವರು ಟ್ರೇಲರ್ ಗೆ ಧ್ವನಿ ನೀಡಿದ್ದಾರೆ. ಪ್ರವೀಣ್ – ಪ್ರದೀಪ್ ಸಂಗೀತ ನಿರ್ದೇಶನದಲ್ಲಿ ಆರು ಹಾಡುಗಳು ಅದ್ಭುತವಾಗಿ ಮೂಡಿಬಂದಿದೆ ಎಂದು ನಿರ್ದೇಶಕ ಮಂಜುನಾಥ್ ಮುನಿಯಪ್ಪ ಚಿತ್ರದ ಬಗ್ಗೆ ವಿವರಣೆ ನೀಡಿದರು.ombattu sullu kathegalu kannada movie

ಚಿತ್ರದಲ್ಲಿ ಆರು ಹಾಡುಗಳಿದೆ. ಸಂತ ಶಿಶುನಾಳ ಶರೀಫರ ಗೀತೆಯೊಂದನ್ನು ಬಳಸಿಕೊಂಡಿದ್ದೇವೆ. ವಿಕ್ರಮ್ ವಸಿಷ್ಠ, ಸತೀಶ್ ಬೆಲ್ಲೂರು ಹಾಗೂ ಕಿರಣ್ ವಿಪ್ರ ಹಾಡುಗಳನ್ನು ಬರೆದಿದ್ದಾರೆ. ವಿಜಯ್ ಪ್ರಕಾಶ್, ರಾಜೇಶ್ ಕೃಷ್ಣನ್, ವಾರಿಜಾಶ್ರೀ, ಶಶಿಧರ್ ಕೋಟೆ, ಚಿಂತನ್ ವಿಕಾಸ್ ಸೇರಿದಂತೆ ಪ್ರಸಿದ್ದ ಗಾಯಕರು ಈ ಹಾಡುಗಳನ್ನು ಹಾಡಿದ್ದಾರೆ‌. ನಟ ಹಾಗೂ ನಿರ್ದೇಶಕ ರಿಷಭ್ ಶೆಟ್ಟಿ ಇದೇ ಮೊದಲ ಬಾರಿಗೆ ನಮ್ಮ ಚಿತ್ರದ ಕನ್ನಡದ ಹಾಡೊಂದನ್ನು ಹಾಡಿದ್ದಾರೆ ಎಂದು ಸಂಗೀತ ನಿರ್ದೇಶಕರಾದ ಪ್ರವೀಣ್ & ಪ್ರದೀಪ್ ಸಂಗೀತದ ಬಗ್ಗೆ ಮಾಹಿತಿ ನೀಡಿದರು.ombattu sullu kathegalu kannada movie

ನಾನು ಸಾಹಿತ್ಯ ಪ್ರೇಮಿಯಾಗಿ ಕಾಣಿಸಿಕೊಂಡಿದ್ದೀನಿ ಎಂದರು ನಟ ವಿನಾಯಕ ಜೋಶಿ.‌ ನಿರ್ದೇಶಕರು ನನ್ನ ಬಹುಕಾಲದ ಗೆಳೆಯ. ಉತ್ತಮ ಪಾತ್ರಕೊಟ್ಟಿದ್ದಾರೆ ಎಂದು ಪ್ರಮೋದ್ ಶೆಟ್ಟಿ ಹೇಳಿದರು. ಕರಿಸುಬ್ಬು ಮತ್ತು ಕೃಷ್ಣ ಹೆಬ್ಬಾಳೆ ತಮ್ಮ ಪಾತ್ರದ ಬಗ್ಗೆ ಹೇಳಿಕೊಂಡರು. ಈ ಚಿತ್ರಕ್ಕಾಗಿ ಮೈಲಿಗಟ್ಟಲೆ ಓಡಿದ ಅನುಭವವನ್ನು ಹಿರಿಯ ನಟಿ ಲಕ್ಷ್ಮೀ ಚಂದ್ರಶೇಖರ್ ಹಂಚಿಕೊಂಡರು. ಪರಮೇಶ್ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಶ್ರೀಕಾಂತ್ ಅವರ ಸಂಕಲನವಿದೆ.ombattu sullu kathegalu kannada movie

ಪ್ರಮೋದ್ ಶೆಟ್ಟಿ, ವಿನಾಯಕ ಜೋಶಿ, ಕೃಷ್ಣ ಹೆಬ್ಬಾಳೆ, ಸಕೃತ ವಾಗ್ಲೆ, ಕರಿಸುಬ್ಬು, ನಂದಗೋಪಾಲ್, ಲಕ್ಷ್ಮೀ ಚಂದ್ರಶೇಖರ್, ಶ್ರೀನಿವಾಸಪ್ರಭು, ಸುನೇತ್ರ ಪಂಡಿತ್, ಸುಪ್ರಿತಾ ಶೆಟ್ಟಿ, ಸುಂದರ್ ವೀಣಾ, ವೀಳ್ಯಾ ರಾಘವೇಂದ್ರ ಸೇರಿದಂತೆ ನೂರಕ್ಕೂ ಅಧಿಕ ಕಲಾವಿದರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…