ಪ್ರಾರಂಭವಾಯ್ತು ಪ್ಯಾನ್ ಇಂಡಿಯಾ ಸಿನಿಮಾ ‘ಜಂಟಲ್ ಮ್ಯಾನ್ 2’

Pan India movie 'Gentleman 2' launched

ಚೆನ್ನೈನಲ್ಲಿ ನಡೆದ ಅದ್ದೂರಿ ಮುಹೂರ್ತ ಸಮಾರಂಭದಲ್ಲಿ ಎಂ.ಎಂ. ಕೀರವಾಣಿ ಅವರಿಗೆ ಆತ್ಮೀಯ ಸನ್ಮಾನPan India movie 'Gentleman 2' launched

ತಮಿಳಿನಲ್ಲಿ ‘ಜಂಟಲ್ ಮ್ಯಾನ್’, ‘ಕಾದಲನ್’, ‘ಕಾದಲ್ ದೇಶಂ’ ಸೇರಿದಂತೆ ದೊಡ್ಡ ಬಜೆಟ್‌ ನ ಮತ್ತು ಯಶಸ್ವಿ ಚಿತ್ರಗಳನ್ನು ನಿರ್ಮಿಸಿದ್ದ ಹಿರಿಯ ನಿರ್ಮಾಪಕ ಕೆ.ಟಿ. ಕುಂಜುಮೋನ್ ನಿರ್ಮಿಸುತ್ತಿರುವ ‘ಜಂಟಲ್ ಮ್ಯಾನ್ 2’ ಚಿತ್ರವು ಶನಿವಾರ, ಚೆನ್ನೈನಲ್ಲಿ ಅದ್ದೂರಿಯಾಗಿ ಪ್ರಾರಂಭವಾಗಿದೆ.Pan India movie 'Gentleman 2' launched

ಚೆನ್ನೈನ ರಾಜ ಮುತ್ತಯ್ಯ ಸಭಾಂಗಣದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ನಿರ್ದೇಶಕ ಗೋಕುಲ್ ಕೃಷ್ಣ ಅವರಿಗೆ ನಿರ್ಮಾಪಕ ಕುಂಜುಮೋನ್, ಚಿತ್ರದ ಸ್ಕ್ರಿಪ್ಟ್ ಹಸ್ತಾಂತರಿಸುವ ಮೂಲಕ ಈ ಪ್ಯಾನ್ ಇಂಡಿಯಾ ಚಿತ್ರಕ್ಕೆ ಚಾಲನೆ ಸಿಕ್ಕಿದೆ.
RRR ಚಿತ್ರದ ‘ನಾಟ್ಟು ನಾಟ್ಟು’ ಗೀತೆಗೆ ಆಸ್ಕರ್ ಪ್ರಶಸ್ತಿ ಪಡೆದ ಪದ್ಮಶ್ರೀ ಎಂ.ಎಂ. ಕೀರವಾಣಿ ಅವರು ಈ ಚಿತ್ರಕ್ಕೆ ಸಂಗೀತ ಸಂಯೋಜಿಸುತ್ತಿದ್ದು, ಅವರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು. ಈ ಸಮಾರಂಭದಲ್ಲಿ ಚಿತ್ರಸಾಹಿತಿ ವೈರಮುತ್ತು ಸೇರಿದಂತೆ ಹಲವು ಗಣ್ಯರು ಹಾಜರಿದ್ದರು.Pan India movie 'Gentleman 2' launched

ಈ ಸಂದರ್ಭದಲ್ಲಿ ಮಾತನಾಡಿದ ನಿರ್ಮಾಪಕ ಕೆ.ಟಿ. ಕುಂಜುಮೋನ್, ‘ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಜೆಂಟಲ್ ಮ್ಯಾನ್ ಗಳಾಗಿರಬೇಕು ಎಂಬುದು ಈ ಚಿತ್ರದ ಆಶಯ. ನಾನು ಇದುವರೆಗೂ ಹಲವು ಚಿತ್ರಗಳನ್ನು ನಿರ್ಮಾಣ ಮಾಡಿದ್ದೇನೆ. 200ಕ್ಕೂ ಹೆಚ್ಚು ಚಿತ್ರಗಳನ್ನು ವಿತರಿಸಿದ್ದೇನೆ. ನನಗೆ ಪ್ರೇಕ್ಷಕರ ನಾಡಿಮಿಡಿತ ಗೊತ್ತಿದೆ. ಅದಕ್ಕೆ ತಕ್ಕ ಹಾಗೆ ಸಿನಿಮಾ ಮಾಡುತ್ತಿದ್ದೇವೆ. ನನಗೆ ಪ್ರೇಕ್ಷಕರು ಗುರುಸಮಾನರು. ಅವರು ಚಿತ್ರ ನೋಡಿ ಆಶೀರ್ವಾದ ಮಾಡಿದರಷ್ಟೇ ನಾವು ಗೆಲ್ಲುವುದಕ್ಕೆ ಸಾಧ್ಯ. ಹಾಗಾಗಿ, ಅವರಿಗೆ ಇಷ್ಟವಾಗುವಂತಹ ಚಿತ್ರ ಮಾಡುವುದು ನನ್ನ ಮೊದಲ ಆದ್ಯತೆ’ ಎಂದರು.Pan India movie 'Gentleman 2' launched

ಈ ಚಿತ್ರ ಮಾಡುವುದಕ್ಕೆ ಎಂ.ಎಂ. ಕೀರವಾಣಿ ಅವರು ಮುಖ್ಯ ಕಾರಣ ಎಂದ ಕುಂಜುಮೋನ್, ‘ಈ ಚಿತ್ರಕ್ಕೆ ಸಂಗೀತ ಸಂಯೋಜಿಸಬೇಕು ಎಂದು ನಾನು ಅವರ ಬಳಿ ಕೇಳಿಕೊಂಡಾಗ, ಹೈದರಾಬಾದ್ ಗೆ ಬರುವುದಕ್ಕೆ ಹೇಳಿದರು. ನಾನು ಹೈದರಾಬಾದ್ ಗೆ ಹೋಗಿ ಅವರನ್ನು ಭೇಟಿ ಮಾಡಿದೆ. ಅವರು ಚಿತ್ರದ ತಾರಾಗಣದ ಬಗ್ಗೆಯಾಗಲೀ, ತಂತ್ರಜ್ಞರ ಬಗ್ಗೆಯಾಗಲೀ ಒಂದೇ ಒಂದು ಮಾತನ್ನೂ ಕೇಳಲಿಲ್ಲ. ಅಡ್ವಾನ್ಸ್ ಸಹ ಪಡೆಯಲಿಲ್ಲ. ಈ ಚಿತ್ರವನ್ನು ನಿಮಗಾಗಿ ಮಾಡುತ್ತಿದ್ದೇನೆ ಎಂದರು. ಅದೇ ರೀತಿ ಹಿರಿಯ ಚಿತ್ರಸಾಹಿತಿ ವೈರಮುತ್ತು ಸಹ ಅಡ್ವಾನ್ಸ್ ಪಡೆಯಲಿಲ್ಲ. ತಮಗೆ ಅವಶ್ಯಕತೆ ಇದ್ದಾಗ ಕೇಳುವುದಾಗಿ ಹೇಳಿದರು. ಅಷ್ಟೇ ಅಲ್ಲ, ಕೊಚ್ಚಿಯಲ್ಲಿ ನಡೆದ ಸಂಗೀತ ಸಂಯೋಜನೆಗೂ ಅವರು ತಮ್ಮ ದುಡ್ಡಿನಲ್ಲೇ ಬರುವುದಾಗಿ ಹೇಳಿದರು. ಅವರ ಗುಣ ನೋಡಿ ಹೃದಯ ತುಂಬಿಬಂತು’ ಎಂದು ಹೇಳಿದರು.Pan India movie 'Gentleman 2' launched

‘ಜಂಟಲ್ ಮ್ಯಾನ್ 2’ ಚಿತ್ರದಲ್ಲಿ ನಾಯಕನಾಗಿ ಚೇತನ್ ಚೀನು ಅಭಿನಯಿಸುತ್ತಿದ್ದು, ಅವರಿಗೆ ನಾಯಕಿಯರಾಗಿ ನಯನತಾರಾ ಚಕ್ರವರ್ತಿ ಹಾಗೂ ಪ್ರಿಯಾ ಲಾಲ್ ಅಭಿನಯಿಸುತ್ತಿದ್ದಾರೆ. ಮಿಕ್ಕಂತೆ ಕನ್ನಡ ನಟಿ ಸುಧಾರಾಣಿ, ಸಿತಾರಾ, ಸುಮನ್, ಸತ್ಯಪ್ರಿಯಾ ಸೇರಿದಂತೆ ಬೇರೆಬೇರೆ ಭಾಷೆಗಳ ಪ್ರತಿಭಾವಂತ ಕಲಾವಿದರು ಈ ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರಕ್ಕೆ ಅಜಯನ್ ವಿನ್ಸೆಂಟ್ ಅವರ ಛಾಯಾಗ್ರಹಣ, ತೋಟ ತಾರಿಣಿ ಅವರ ಕಲಾ ನಿರ್ದೇಶನವಿದೆ.Pan India movie 'Gentleman 2' launched Pan India movie 'Gentleman 2' launched

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…