11ರ ಹರೆಯದ ಬಾಲಕನ ಕಥೆ ‘ಮಿಥ್ಯ’
ಇದು ಪರಂವಃ ಸ್ಟುಡಿಯೋಸ್​ ನಿರ್ಮಾಣದ ಹೊಸ ಚಿತ್ರ

Rakshit Shetty: Sumanth Bhatt came forward to tell a 'lie' to child actor Atish Shetty

ಚಿತ್ರರಂಗ ಎಂದರೆ ಎಲ್ಲ ರೀತಿಯ ಸಿನಿಮಾಗಳನ್ನೂ ಮಾಡಬೇಕು. ಹೊಸ ಶೈಲಿಯ ಕಥೆಗಳನ್ನು, ಹೊಸ ಆಲೋಚನೆಗಳನ್ನು ಬರಮಾಡಿಕೊಳ್ಳಬೇಕು. ಹೊಸ ಯೋಚನೆಗಳಿರುವ ಕಥೆಗಾರರನ್ನು ಚಿತ್ರರಂಗದಲ್ಲಿ ತೊಡಗಿಸಿಕೊಳ್ಳುವಂತೆ ಮಾಡಬೇಕು. ಈ ನಿಟ್ಟಿನಲ್ಲಿ ಪರಂವಃ ಸ್ಟುಡಿಯೋಸ್​ ಹೆಜ್ಜೆ ಇಟ್ಟಿದ್ದು, ‘ಮಿಥ್ಯ’ ಅಂಥದ್ದೊಂದು ವಿನೂತನ ಪ್ರಯತ್ನವಾಗಲಿದೆ.Rakshit Shetty: Sumanth Bhatt came forward to tell a 'lie' to child actor Atish Shetty

‘ಮಿಥ್ಯ’, ರಕ್ಷಿತ್​ ಶೆಟ್ಟಿ ನಿರ್ಮಾಣದ ಹೊಸ ಚಿತ್ರ. ಈ ಚಿತ್ರದ ಮೂಲಕ ಸುಮಂತ್​ ಭಟ್​ ಸ್ವತಂತ್ರ ನಿರ್ದೇಶಕರಾಗಿ ಕಾಲಿಡುತ್ತಿದ್ದಾರೆ. ತಮ್ಮ ಮೊದಲ ಪ್ರಯತ್ನದಲ್ಲೇ 11 ವರ್ಷದ ಬಾಲಕನ ಕಥೆಯನ್ನು ಹೇಳುವುದಕ್ಕೆ ಹೊರಟಿದ್ದಾರೆ. ಅವನ ನೋವು ಮತ್ತು ವಿಮೋಚನೆಯ ಕಥೆಯನ್ನು ಹೇಳವ ಪ್ರಯತ್ನ ಮಾಡುತ್ತಿದ್ದಾರೆ.
ತಂದೆ-ತಾಯಿಯ ನಿಧನದ ನಂತರ, ಅವರ ನೆನಪುಗಳಿಂದ ಹೊರಬರಲಾರದ ಪುಟ್ಟ ಬಾಲಕನೊಬ್ಬ ಹೊಸ ಪ್ರಪಂಚವನ್ನು ಹುಡುಕಿಕೊಂಡು ಹೊರಡುತ್ತಾನೆ. ಹಳೆಯ ಸಂಬಂಧಗಳಲ್ಲಿ ಹೊಸತನ ಕಾಣುವ ಹಾಗೂ ಹೊಸ ಸ್ನೇಹಿತರಲ್ಲಿ ಹಳೆಯ ಗೆಳೆತನ ಹುಡುಕುವ ಪಯಣವೇ ಈ ‘ಮಿಥ್ಯ’.Rakshit Shetty: Sumanth Bhatt came forward to tell a 'lie' to child actor Atish Shetty

ಮೂಲತಃ ಸಾಫ್ಟ್​ವೇರ್​ ಇಂಜಿನಿಯರ್​ ಆಗಿದ್ದ ಸುಮಂತ್​ ಭಟ್​ಗೆ ಸಿನಿಮಾ ಎನ್ನುವುದು ಪ್ಯಾಶನ್​. ಇದಕ್ಕೂ ಮುನ್ನ ಪರಂವಃ ಸ್ಟುಡಿಯೋಸ್​ ನಿರ್ಮಾಣದ ‘ಏಕಂ’ ಎಂಬ ವೆಬ್​ಸೀರೀಸ್​ನ ಏಳು ಕಂತುಗಳಲ್ಲಿ, ನಾಲ್ಕು ಕಂತುಗಳನ್ನು ಬರೆದು ನಿರ್ದೇಶಿಸಿದವರು ಅವರು. ಜತೆಗೆ ಪರಂವಃ ಕಥಾತಂಡದ ಸಕ್ರಿಯರಾಗಿ ಗುರುತಿಸಿಕೊಂಡವರು. ಈಗ ಅವರು ಸ್ವತಂತ್ರ ನಿರ್ದೇಶಕರಾಗಿ ‘ಮಿಥ್ಯ’ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಈ ಹಿಂದೆ ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಾಸರಗೋಡು’ ಮತ್ತು ‘ವಿಕ್ರಾಂತ್​ ರೋಣ’ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಬಾಲನಟ ಆತಿಶ್​ ಶೆಟ್ಟಿ, ಇಲ್ಲಿ ಮಿಥುನ್​ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾನೆ. ಅವನೊಂದಿಗೆ ಪ್ರಕಾಶ್​ ತುಮ್ಮಿನಾಡು, ರೂಪಾ ವರ್ಕಾಡಿ ಮುಂತಾದವರು ನಟಿಸುತ್ತಿದ್ದಾರೆ.Rakshit Shetty: Sumanth Bhatt came forward to tell a 'lie' to child actor Atish Shetty

‘ಮಿಥ್ಯ’ ಚಿತ್ರಕ್ಕೆ ಉದಿತ್​ ಖುರಾನ ಅವರ ಛಾಯಾಗ್ರಹಣವಿದ್ದು, ಮಿಥುನ್​ ಮುಕುಂದನ್​ ಅವರ ಸಂಗೀತವಿದೆ. ಭುವನೇಶ್​ ಮಣಿವಣ್ಣನ್​ ಸಂಕಲನಕಾರರಾಗಿ, ಶ್ರೇಯಾಂಕ್​ ನಂಜಪ್ಪ ಸೌಂಡ್​ ಡಿಸೈನರ್​ ಆಗಿ ಕಾರ್ಯನಿರ್ವಹಿಸಲಿರುವ ಈ ಚಿತ್ರದ ಚಿತ್ರೀಕರಣ ಸದ್ಯದಲ್ಲೇ ಪ್ರಾರಂಭವಾಗಲಿದೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…