ಜೀವನದ ಸುತ್ತಾಟದ ಸುತ್ತ “ರಂಗಿನ ರಾಟೆ”

ರಾಜೀವ್ ರಾಥೋಡ್, ದುನಿಯಾ ರಶ್ಮಿ, ಭವ್ಯ ಅಭಿನಯಿಸಿರುವ ಈ ಚಿತ್ರದ ಪೋಸ್ಟರ್ ಬಿಡುಗಡೆ.

ಎಲ್ಲರ ಜೀವನ ರಾಟೆಯ ಹಾಗೆ ಸುತ್ತುತ್ತಿರುತ್ತದೆ. ಈ ವಿಷಯವನ್ನು ಕೇಂದ್ರವಾಗಿಟ್ಟಿಕೊಂಡು ” ರಂಗಿನ ರಾಟೆ” ಚಿತ್ರ ಸಿದ್ದವಾಗುತ್ತಿದೆ. ಸದ್ಯ ಚಿತ್ರೀಕರಣ ಕೂಡ ಮುಕ್ತಾಯವಾಗಿದೆ. ಈ ಕುರಿತು ಚಿತ್ರತಂಡ ಹೆಚ್ಚಿನ ಮಾಹಿತಿ ನೀಡಲು ಪತ್ರಿಕಾಗೋಷ್ಠಿ ಆಯೋಜಿಸಿತ್ತು. ಇದೇ ಸಂದರ್ಭದಲ್ಲಿ ಚಿತ್ರದ ಪೋಸ್ಟರ್ ಸಹ ಬಿಡುಗಡೆಯಾಯಿತು.WhatsApp Image 2022 06 21 at 11.20.44 AM 1

ನಾನು ಮುರಳಿ ಮೋಹನ್ ಅವರ ಬಳಿ ಕೆಲಸ ಮಾಡುತ್ತಿದ್ದೆ. ಇದು ನನ್ನ ಮೊದಲ ನಿರ್ದೇಶನದ ಚಿತ್ರ. ಎಲ್ಲರ ಜೀವನವೇ ಒಂದು ಸುತ್ತಾಟ. ರಾಟೆ ತಿರುಗಿದ ಹಾಗೆ. ಹಾಗಾಗಿ ನಾನು ಚಿತ್ರಕ್ಕೆ ಈ ಶೀರ್ಷಿಕೆಯಿಟ್ಟಿದ್ದೀನಿ. ಚಿತ್ರೀಕರಣ ಮುಕ್ತಾಯವಾಗಿದೆ. ಆಗರ ಮುಂತಾದ ಕಡೆ ಚಿತ್ರೀಕರಣ ಮಾಡಿದ್ದೇವೆ. ರಾಜೀವ್ ರಾಥೋಡ್, ದುನಿಯಾ ರಶ್ಮಿ, ಭವ್ಯ ಹಾಗೂ ಸಂತೋಷ್ ನಾಲ್ಕು ಜನರ ಸುತ್ತ ಕಥೆ ಸಾಗುತ್ತದೆ. ಸಂತೋಷ್ ಮಳವಳ್ಳಿ ಅವರ ಮೂಲಕ ನಿರ್ಮಾಪಕಿ ಕವಿತಾ ಅರುಣ್ ಕುಮಾರ್ ಅವರ ಪರಿಚಯವಾಯಿತು. ಅವರು ನಿರ್ಮಾಣಕ್ಕೆ ಮುಂದಾದರು. ಚಿತ್ರೀಕರಣ ಮುಗಿದಿದೆ. ಸದ್ಯದಲ್ಲೇ ಮಾತಿನ ಜೋಡಣೆ ಆರಂಭವಾಗಲಿದೆ ಎಂದು ನಿರ್ದೇಶಕ ಆರ್ಮುಗಂ ಮಾಹಿತಿ ನೀಡಿದರು.WhatsApp Image 2022 06 21 at 11.20.45 AM

“ಯವರಾಜ” ಚಿತ್ರದಿಂದ ನನ್ನ ಸಿನಿ ಜರ್ನಿ ಆರಂಭವಾಗಿದೆ. ಕನ್ನಡದ ಸಾಕಷ್ಟು ಚಿತ್ರಗಳಲ್ಲಿ ಅಭಿನಯಿಸಿದ್ದೇನೆ. ನಾಯಕನಾಗಿ ಇದು ಮೂರನೇ ಚಿತ್ರ. ಅವಕಾಶ ನೀಡಿದ ನಿರ್ಮಾಪಕರಿಗೆ ಧನ್ಯವಾದ. ನಿರ್ದೇಶಕರು ಕಥೆ ಹೇಳಿದ ಕೂಡಲೆ ಸಿನಿಮಾದಲ್ಲಿ ನಟಿಸಲು ನಿರ್ಧರಿಸಿದೆ. ಅನಿರೀಕ್ಷಿತ ಘಟನೆಯಲ್ಲಿ ನಾನು ಸಿಕ್ಕಿಹಾಕಿಕೊಳ್ಳುತ್ತೇನೆ. ಅದರಿಂದ ಹೇಗೆ ಪಾರಾಗುತ್ತೇನೆ? ಎಂಬುದನ್ನು ಸಿನಿಮಾದಲ್ಲಿ ನೋಡಬೇಕು ಎಂದರು ರಾಜೀವ್ ರಾಥೋಡ್.

ನನಗೆ ಸಿನಿಮಾ ಮಾಡಲು ಇಷ್ಟವಿರಲಿಲ್ಲ. ಸಂತೋಷ್ ಅವರು ನಿರ್ದೇಶಕರ ಪರಿಚಯ‌ ಮಾಡಿಸಿದರು. ಕಥೆ ಕೇಳಿ ನಿರ್ಮಾಣಕ್ಕೆ ಮುಂದಾದೆ. ಮೊದಲ ಪ್ರಯತ್ನ.‌ ನಿಮ್ಮೆಲ್ಲರ ಬೆಂಬಲವಿರಲಿ ಎಂದರು ನಿರ್ಮಾಪಕಿ ಕವಿತಾ ಅರುಣ್ ಕುಮಾರ್.WhatsApp Image 2022 06 21 at 11.20.44 AM

ಇದು ನನ್ನ ಮೊದಲ ಚಿತ್ರ. ಮೊದಲ ಪತ್ರಿಕಾಗೋಷ್ಠಿ. ಸಿನಿಮಾದಲ್ಲಿ ನಟಿಸುವ ಆಸೆಯಿತ್ತು. ಈಡೇರಿದೆ. ಕಥೆಯೇ ಈ ಚಿತ್ರದ ನಾಯಕ, ನಾಯಕಿ. ರಾಜೀವ್ ರಾಥೋಡ್, ದುನಿಯಾ ರಶ್ಮಿ ಹಾಗೂ ನಾನು ಮುಖ್ಯಪಾತ್ರದಲ್ಲಿ ನಟಿಸಿದ್ದೇವೆ. ನಮ್ಮ ಚೊಚ್ಚಲ ಪ್ರಯತ್ನಕ್ಕೆ ನಿಮ್ಮ‌ ಹಾರೈಕೆಯಿರಲಿ ಎಂದರು ನಟಿ ಭವ್ಯ.

ಹಾಡು ಬರೆದು ನಟನೆ ಮಾಡರುವ ಸಂತೋಷ್ ಮಳವಳ್ಳಿ, ಸಂಗೀತ ನಿರ್ದೇಶಕ ಚಂದ್ರು ಒಬ್ಬಯ್ಯ, ಛಾಯಾಗ್ರಾಹಕ ರವಿ ಸುವರ್ಣ ಹಾಗೂ ಸಂಕಲನಕಾರ ದಾಮೋದರ ನಾಯ್ಡು “ರಂಗಿನ ರಾಟೆ” ಯ ಬಗ್ಗೆ ಮಾತನಾಡಿದರು.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…