ನೀನಾಸಂ ಸತೀಶ್ ಅಭಿನಯದ “ಅಶೋಕ ಬ್ಲೇಡ್​” ಚಿತ್ರಕ್ಕೆ ಚಾಲನೆ.

ನೀನಾಸಂ ಸತೀಶ್ ನಾಯಕರಾಗಿ ನಟಿಸುತ್ತಿರುವ ” ಅಶೋಕ ಬ್ಲೇಡ್” ಚಿತ್ರದ ಮುಹೂರ್ತ ಸಮಾರಂಭ ಧರ್ಮಗಿರಿ ಶ್ರೀಮಂಜುನಾಥಸ್ವಾಮಿ ದೇವಸ್ಥಾನದಲ್ಲಿ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ಪಿ.ಶೇಷಾದ್ರಿ ಆರಂಭಫಲಕ ತೋರಿದರು. ಟ.ಎನ್.ಸೀತಾರಾಂ ಕ್ಯಾಮೆರಾ ಚಾಲನೆ ಮಾಡಿದರು. ಚಿತ್ರರಂಗದ ಅನೇಕ ಗಣ್ಯರು ಈ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು.WhatsApp Image 2022 05 16 at 10.43.52 AM

ನಾನು ಹಲವಾರು ವರ್ಷಗಳಿಂದ ಕಿರುತೆರೆ ಮತ್ತು ಹಿರಿತೆರೆಯಲ್ಲಿ ತೊಡಗಿಸಿಕೊಂಡಿದ್ದೇನೆ. ಪಿ. ಶೇಷಾದ್ರಿ, ಟಿ.ಎನ್​. ಸೀತಾರಾಂ ಅವರ ಸಿನಿಮಾ ಮತ್ತು ಧಾರಾವಾಹಿಗಳಲ್ಲಿ ಸಂಚಿಕೆ ನಿರ್ದೇಶಕ ಮತ್ತು ನಿರ್ದೇಶಕರಾಗಿ ಕೆಲಸ ಮಾಡಿದ್ದೇನೆ. ಈ ಸಂದರ್ಭದಲ್ಲಿ ವರ್ಧನ್​ ಮತ್ತು ದೀಪಕ್​ ನಾಯ್ಡು ಅವರ ಪರಿಚಯವಾಯಿತು. ಮೂರು ಜನ ಸೇರಿ 10 ವರ್ಷಗಳ ಹಿಂದೆ ಒಂದು ಪ್ರೊಡಕ್ಷನ್​ ಹೌಸ್​ ಪ್ರಾರಂಭಿಸಿ, ಹಲವು ಧಾರಾವಾಹಿಗಳನ್ನು ನಿರ್ಮಾಣ ಮಾಡಿದ್ದೇವೆ.WhatsApp Image 2022 05 16 at 10.43.53 AM

ಒಂದು ಚಿತ್ರ ನಿರ್ಮಾಣ ಮಾಡುವ ಯೋಚನೆ ಇತ್ತು. ಟಿ.ಕೆ. ದಯಾನಂದ್​ ಅವರ ಹತ್ತಿರ ಒಂದೊಳ್ಳೆಯ ಕಥೆ ಇದೆ ಎಂದು ಗೊತ್ತಾಯಿತು. ಕಥೆ ಕೇಳಿದಾಗ ಬಹಳ ಇಷ್ಟವಾಯಿತು. ಇದೇ ನಮ್ಮ ಸಂಸ್ಥೆಯ ಮೊದಲ ಚಿತ್ರವಾಗಬೇಕು ಎಂದು ತೀರ್ಮಾನಿಸಿ ಚಿತ್ರ ಮಾಡುತ್ತಿದ್ದೇವೆ. ಸತೀಶ್​ ನೀನಾಸಂ ಸಹ ಕೈ ಜೋಡಿಸಿದ್ದಾರೆ. ವರ್ತಕರು ಮತ್ತು ಕಾರ್ಮಿಕರ ನಡುವೆ ನಡೆಯುವ ಯುದ್ಧದ ಕುರಿತು ಈ ಚಿತ್ರಲ್ಲಿ ಹೇಳುವ ಪ್ರಯತ್ನ ಮಾಡುತ್ತಿದ್ದೇವೆ ಎಂದು ನಿರ್ದೇಶಕ ವಿನೋದ್ ದೋಂಡಾಳೆ ಮಾಹಿತಿ ನೀಡಿದರು.WhatsApp Image 2022 05 16 at 10.43.53 AM 1

ದಿನ ಬೆಳಗಾದರೆ ಹಲವು ನಿರ್ದೇಶಕರು ಬಂದು ಕಥೆ ಹೇಳುತ್ತಾರೆ. ಆದರೆ, ಈ ಕಥೆ ಹುಡುಕಿದ್ದು ನಾನೇ. ಸ್ನೇಹಿತರ ಮೂಲಕ ದಯಾನಂದ್​ ಅವರ ಬಳಿ ಒಳ್ಳೆಯ ಕಥೆ ಇದೆ ಎಂದು ಕೇಳಿದೆ. ತರಿಸಿ ಓದಿದೆ. ತಕ್ಷಣ ಈ ಚಿತ್ರವನ್ನು ಮಾಡಬೇಕು ಎಂದನಿಸಿತು. ಇದೊಂದು ದೊಡ್ಡ ಕ್ಯಾನ್ವಾಸ್​ನ ಚಿತ್ರ. ಒಂದು ಐತಿಹಾಸಿಕ ಯುದ್ಧವಿದೆ. 10 ನಿಮಿಷಗಳ ಕಾಲ ಸಾವಿರ ಜನ ಭಾಗವಹಿಸುವ ಯುದ್ಧ. ಅದನ್ನು ವಿನೋದ್​ ಸಮರ್ಥವಾಗಿ ತೆರೆಯ ಮೇಲೆ ತರುತ್ತಾರೆ ಎಂಬ ನಂಬಿಕೆ ಇದೆ. ಈ ಯುದ್ಧದಲ್ಲಿ ಒಬ್ಬ ಸೂಪರ್​ ಸ್ಟಾರ್​ ಕಾಣಿಸಿಕೊಳ್ಳಲಿದ್ದಾರೆ. ಉತ್ತರಖಾಂಡ, ಮುಂಬೈ ಮುಂತಾದ ಕಡೆ ಚಿತ್ರೀಕರಣ ನಡೆಯಲಿದೆ. ನಾಳೆಯಿಂದ ಚಿತ್ರೀಕರಣ ಶುರುವಾಗಲಿದ್ದು, ನಾನು ಜುಲೈನಲ್ಲಿ ಚಿತ್ರತಂಡ ಸೇರಿಕೊಳ್ಳಲಿದ್ದೇನೆ ಎನ್ನುತ್ತಾರೆ ನೀನಾಸಂ ಸತೀಶ್.WhatsApp Image 2022 05 16 at 10.43.53 AM 2

ಮೊದಲ ಬಾರಿಗೆ ಇನ್​ಸ್ಪೆಕ್ಟರ್​ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಬಹಳ ಒಳ್ಳೆಯ ಪಾತ್ರ ಇದು. ಚಿತ್ರವು ಎರಡು ಕಾಲಘಟ್ಟದಲ್ಲಿ ನಡೆಯಲಿದೆ. ಅವಕಾಶ ಕೊಟ್ಟಿದ್ದಕ್ಕೆ ಧನ್ಯವಾದಗಳು ಎಂದರು ಕಾವ್ಯ ಶೆಟ್ಟಿ.Sathish Ninasam Ashoka Blade

ದಯಾನಂದ್ ಅವರು ಈ ಕಥೆ ಹೇಳಿದ ತಕ್ಷಣ ನಮಗೆ ಹಾಗೂ ನಿರ್ದೇಶಕ ವಿನೋದ್ ಅವರಿಗೆ ಹಿಡಿಸಿತು. ಇದೇ ಕಥೆಯನ್ನು ಸಿನಿಮಾ ಮಾಡಲು ತೀರ್ಮಾನಿಸಿದ್ದೆವು. ಇದೊಂದು ಬಿಗ್ ಬಜೆಟ್ ಸಿನಿಮಾ ಆಗಲಿದೆ ಅಂದರು ನಿರ್ಮಾಪಕ ನರಹರಿ.

Sathish Ninasam to headline Ashoka Blade

ನನಗೆ ಈ ಕಥೆ ಬಹಳ ವಿಶೇಷ. ಮೈಸೂರು ಸೀಮೆಯಲ್ಲಿ 70ರ ದಶಕದಲ್ಲಿ ನಡೆದ ಒಂದು ಘಟನೆ ಬಗ್ಗೆ ಕೇಳಿದ್ದೆ. ಅದು ಎಲ್ಲೂ ದಾಖಲಾಗಿಲ್ಲ. ಎಲ್ಲೂ ಅದರ ಬಗ್ಗೆ ಉಲ್ಲೇಖವಿಲ್ಲ. ಕೊನೆಗೆ ಆ ಕಥೆಯ ವಿವರಗಳನ್ನು ಹುಡುಕಿಕೊಂಡು ಹೋದಾಗ ಹಲವು ಮಹತ್ವದ ವಿಷಯಗಳು ಗೊತ್ತಾಯಿತು. ಇದು ಕನ್ನಡ ನೆಲದ ವೀರರ ಕಥೆ. ಯುದ್ಧ ಎಂದರೆ ಯುದ್ಧಭೂಮಿ ಅಥವಾ ಸಾಮ್ರಾಜ್ಯ ವಿಸ್ತರಣೆಯ ಕಥೆಯಲ್ಲ. ಎರಡು ಸಮುದಾಯಗಳ ಕುರಿತ ಕಥೆ ಇದೆ. ವ್ಯಾಪಾರಿಗಳು ಮತ್ತು ಕಾರ್ಮಿಕರ ನಡುವಿನ ಕಥೆ ಇದೆ. ಇದರಲ್ಲಿ ಭಾಗವಹಿಸಿದ ಕೆಲವರನ್ನು ಹುಡುಕಿ ಮಾತಾಡಿಸಿದೆ. ಒಂದಿಷ್ಟು ಮಾಹಿತಿ ಸಿಕ್ಕಿತು. ಅದನ್ನು ಬೆಳೆಸಿ ಚಿತ್ರಕಥೆ ಮಾಡಿದ್ದೇನೆ. ಈ ಕಥೆ ಎಲ್ಲರಿಗೂ ಇಷ್ಟವಾಗಿದೆ ಎಂದು‌ ಚಿತ್ರದ ಕಥೆಯ ಬಗ್ಗೆ ಟಿ.ಕೆ.ದಯಾನಂದ್ ಮಾತನಾಡಿದರು. ಸಂಗೀತ ನಿರ್ದೇಶಕ ಪೂರ್ಣಚಂದ್ರ ತೇಜಸ್ವಿ, ಛಾಯಾಗ್ರಾಹಕ ಲವಿತ್ ಹಾಗೂ ನಟ ಬಿ.ಸುರೇಶ್ ಸಹ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು. ವೃದ್ಧಿ ಕ್ರಿಯೇಷನ್ಸ್ ಹಾಗೂ ಸತೀಶ್ ಪಿಕ್ಚರ್ ಹೌಸ್ ಜಂಟಿಯಾಗಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…