ಶಭ್ಬಾಷ್‍ ಮೊದಲ ಹಂತದ ಚಿತ್ರೀಕರಣ ಮುಕ್ತಾಯ!

Shabbash Kannada Movie

ಸಂಕ್ರಾಂತಿಯ ಶುಭ ಸಂದರ್ಭದಲ್ಲಿ ಮುಹೂರ್ತ ಕಂಡಿದ್ದ `ಶಭ್ಬಾಷ್’ ಚಿತ್ರ ಅತ್ಯಂತ ವೇಗವಾಗಿ ಮೊದಲ ಹಂತದ ಚಿತ್ರೀಕರಣ ಮುಗಿಸಿಕೊಂಡಿದೆ. ಈಗಾಗಲೇ ಸಾಕಷ್ಟು ವರ್ಷಗಳ ಕಾಲ ಚಿತ್ರರಂಗದಲ್ಲಿ ಕಾರ್ಯನಿರ್ವಹಿಸಿರುವ ರುದ್ರಶಿವ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಚಿತ್ರ ಸಾಂಗವಾಗಿ ಮೊದಲ ಹಂತದ ಚಿತ್ರೀಕರಣ ಮುಗಿಸಿಕೊಂಡು, ಅದರ ಬಗೆಗಿನ ಒಂದಷ್ಟು ಕುತೂಹಲಕರ ವಿವರಗಳನ್ನು ಹಂಚಿಕೊಂಡಿದೆ.Shabbash Kannada Movie

ರುದ್ರಶಿವ ಯೋಜನೆಯಂತೆ ಬೆಂಗಳೂರಿನ ಸುತ್ತಮುತ್ತಲ ಪ್ರದೇಶಗಳಲ್ಲಿ ಏಳು ದಿನಗಳ ಚಿತ್ರೀಕರಣ ಮುಗಿಸಿಕೊಂಡು, ಚನ್ನಗಿರಿಯ ಶಾಂತಿಸಾಗರದ ಪ್ರದೇಶದಲ್ಲಿ ಚಿತ್ರೀಕರಣ ನಡೆಸಿದ್ದಾರೆ. ಅಲ್ಲಿನ ಪೌರಾಣಿಕ, ಐತಿಹಾಸಿಕ ಸ್ಥಳಗಳಲ್ಲಿ ಸಾಂಗವಾಗಿ ಚಿತ್ರೀಕರಣ ನೆರವೇರಿದೆ. ಅಂದಹಾಗೆ, ಚನ್ನಗಿರಿಯ ಶಾಂತಿಸಾಗರ ಸೂಳೆಕೆರೆ ಅಂತಲೂ ಕರೆಸಿಕೊಳ್ಳುತ್ತದೆ. ಏಷ್ಯಾ ಖಂಡದಲ್ಲಿಯೇ ಎರಡನೇ ಅತೀ ದೊಡ್ಡ ಕೆರೆ ಎಂಬ ಹೆಗ್ಗಳಿಕೆಯೂ ಶಾಂತಿಸಾಗರಕ್ಕಿದೆ. ಈ ಕೆರೆಗೂ ಹನ್ನೆರಡನೇ ಶತಮಾನಕ್ಕೂ ಎಂದಿಗೂ ಸಡಿಲವಾಗದಂಥಾ ಕೊಂಡಿಗಳಿದ್ದಾವೆ. ಸ್ವರ್ಗಾವತಿ ಪಟ್ಟಣದ ದೊರೆ ವಿಕ್ರಮರಾಜನ ಸುಪುತ್ರಿ ಶಾಂತವ್ವ ತನಗಾದ ಅವಮಾನಕ್ಕೆ ಪ್ರತಿಭಟನೆಯ ಸ್ವರೂಪದಲ್ಲಿ ಈ ಬೃಹತ್ ಕೆರೆಯನ್ನು ಸೃಷ್ಟಿಸಿದಳೆಂಬ ಪ್ರತೀತಿ ಇದೆ.Shabbash Kannada Movie

ಇಲ್ಲಿಯೇ ಸರ್ ಎಂ ವಿಶ್ವೇಶ್ವರಯ್ಯ ಕಟ್ಟಿಸಿರುವ ಸೇತುವೆಯೊಂದು ಪ್ರಧಾನ ಆಕರ್ಷಣೆ. ಎರಡು ಬೆಟ್ಟಗಳನ್ನು ಸೇರಿಸಿ ಈ ಸೇತುವೆಯನ್ನು ಕಟ್ಟಿಸಲಾಗಿದೆ. ಈವತ್ತಿಗೂ ಅಚ್ಚರಿಯಾಗಿ ಕಾಣಿಸುವ ಈ ಸೇತುವೆಯ ಮೇಲೆ ಶಭ್ಬಾಷ್ ಚಿತ್ರೀಕರಣ ನಡೆಸಲಾಗಿದೆ. ಅಷ್ಟಕ್ಕೂ ಅತ್ಯಂತ ಎತ್ತರದ ಪ್ರದೇಶದಲ್ಲಿರುವ ಆ ಸೇತುವೆ ಮೇಲೆ ಚಿತ್ರೀಕರಣ ನಡೆಸುವುದೊಂದು ಸಾಹಸ. ಕೆಲವೇ ಕೆಲ ಕಲಾವಿದರು, ತಂತ್ರಜ್ಞರು ಮಾತ್ರವೇ ಅಲ್ಲಿಗೆ ತಲುಪಲು ಸಾಧ್ಯವಾಗಿತ್ತು. ಇದು ನಿರ್ದೇಶಕ ರುದ್ರಶಿವ ಸೇರಿದಂತೆ ಒಂದಿಡೀ ಚಿತ್ರತಂಡದ ಪಾಲಿಗೆ ಅಮೋಘ ಅನುಭವವನ್ನು ತುಂಬಿದೆ. ಛಾಯಾಗ್ರಾಹಕರು, ಕಲಾವಿದರು, ತಾಂತ್ರಿಕ ವರ್ಗ ದಣಿವು ಮರೆತು ಈ ಚಿತ್ರೀಕರಣದಲ್ಲಿ ಪಾಲ್ಗೊಂಡು ಸಂಭ್ರಮಿಸಿದ್ದಾರೆ.Shabbash Kannada Movie

ಇದಲ್ಲದೇ ಈ ಭಾಗದಲ್ಲಿರುವ ಪ್ರಸಿದ್ಧ ದೇವಾಲಯ, ಹಳ್ಳಿಗಳಲ್ಲಿ ನಾಯಕ ನಾಯಕಿಯ ಪೋಷನ್ನಿನ ಚಿತ್ರೀಕರಣ ನಡೆಸಲಾಗಿದೆ. ಇಂಥಾದ್ದೊಂದು ಸುಂದರ ವಾತಾವರಣದಲ್ಲಿ ಅಚ್ಚುಕಟ್ಟಾಗಿ ಮೊದಲನೇ ಹಂತದ ಚಿತ್ರೀಕರಣವನ್ನು ಮುಗಿಸಿಕೊಳ್ಳಲಾಗಿದೆ. ಶಭ್ಬಾಷ್ ಆಕ್ಷನ್ ಡ್ರಾಮಾ ಜಾನರಿನ ಸಿನಿಮಾ. ಓಂ ಸಾಯಿ ಪ್ರಕಾಶ್ ಸೇರಿದಂತೆ ಘಟಾನುಘಟಿ ನಿರ್ದೇಶಕರ ಗರಡಿಯಲ್ಲಿ ಪಳಗಿಕೊಂಡಿರುವ ರುದ್ರಶಿವ ನಿರ್ದೇಶನದ ಮೊದಲ ಚಿತ್ರವಿದು. ಪವೀಂದ್ರ ಮುತ್ತಪ್ಪ ಈ ಚಿತ್ರವನ್ನು ಏಸ್ 22 (ACE 22) ಬ್ಯಾನರಿನಡಿಯಲ್ಲಿ ನಿರ್ಮಾಣ ಮಾಡಿದ್ದಾರೆ.Shabbash Kannada Movie

ಈಗಾಗಲೇ `ಕ’ ಮತ್ತು ಮಳೆಬಿಲ್ಲು ಸಿನಿಮಾಗಳಲ್ಲಿ ನಟಿಸಿರುವ ಶರತ್ ನಾಯಕನಾಗಿ ನಟಿಸಿದ್ದರೆ, ನಿಸರ್ಗ ನಾಯಕಿಯಾಗಿ ಸಾಥ್ ಕೊಟ್ಟಿದ್ದಾರೆ. ಇದೀಗ ಮೊದಲ ಹಂತದ ಚಿತ್ರೀಕರಣ ಮುಗಿಸಿಕೊಂಡು, ಅದಾಗಲೇ ಎರಡನೇ ಹಂತದ ಚಿತ್ರೀಕರಣಕ್ಕೆ ಚಿತ್ರತಂಡ ಸಜ್ಜಾಗುತ್ತಿದೆ. ಆ ಬಗೆಗಿನ ಒಂದಷ್ಟು ವಿವರಗಳು ಇಷ್ಟರಲ್ಲಿಯೇ ಜಾಹೀರಾಗಲಿವೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…