ಶಭ್ಬಾಷ್ ಎರಡನೇ ಹಂತದ ಚಿತ್ರೀಕರಣ ಮುಕ್ತಾಯ!

Shabbash second phase shooting completed!

ರುದ್ರಶಿವ ನಿರ್ದೇಶನದ `ಶಭ್ಬಾಷ್’ ಚಿತ್ರ ಮೊದಲ ಹಂತದ ಚಿತ್ರೀಕರಣ ಮುಗಿಸಿಕೊಂಡ ಸುದ್ದಿ ಇತ್ತೀಚೆಗಷ್ಟೇ ಹೊರಬಿದ್ದಿತ್ತು. ಅದಾಗಲೇ ಚಿತ್ರತಂಡ ಎರಡನೇ ಹಂತದ ಚಿತ್ರೀಕರಣ ಸಹ ಸಾಂಘವಾಗಿ ಮುಕ್ತಾಯಗೊಂಡ ಖುಷಿಯ ಸಂಗತಿಯನ್ನು ಹಂಚಿಕೊಂಡಿದೆ. ಚನ್ನಗಿರಿಯಲ್ಲಿ ಮೊದಲನೇ ಹಂತದ ಚಿತ್ರೀಕರಣ ಮುಗಿಸಿಕೊಂಡಿದ್ದ ಚಿತ್ರತಂಡ ಮಡಿಕೇರಿ ಸುತ್ತಮುತ್ತಲ ಚೆಂದದ ಪರಿಸರದಲ್ಲಿ ಎರಡನೇ ಹಂತದ ಚಿತ್ರೀಕರಣವನ್ನು ಸಮಾಪ್ತಿಗೊಳಿಸಿಕೊಂಡಿದೆ. ಈ ಹಂತದಲ್ಲಾದ ಅಮೋಘ ಅನುಭವಗಳನ್ನೂ ಹಂಚಿಕೊಂಡಿದೆ!Shabbash second phase shooting completed!

ನಿರ್ದೇಶಕ ರುದ್ರಶಿವ ಅತ್ಯಂತ ಅಚ್ಚುಕಟ್ಟಾಗಿ ಪ್ಲಾನು ಮಾಡಿಕೊಂಡು, ಅದಕ್ಕೆ ತಕ್ಕುದಾಗಿಯೇ ಮುಂದಡಿ ಇಡುತ್ತಿದ್ದಾರೆ. ಅದರ ಭಾಗವಾಗಿಯೇ ಮಡಿಕೇರಿಯ ಗೋಣಿಕೊಪ್ಪ, ಬಿರನಾಣಿ ಮುಂತಾದ ಪ್ರದೇಶಗಳಲ್ಲಿ ಚಿತ್ರೀಕರಣ ನಡೆಸಿದ್ದಾರೆ. ಈ ಭಾಗದ ಟಾಟ ಟೀ ಎಸ್ಟೇಟ್, ಬೆಟ್ಟಗುಡ್ಡ, ಜಲಪಾತ ಮುಂತಾದೆಡೆಗಳಲ್ಲಿ ಬಹುಮುಖ್ಯ ಭಾಗಗಳನ್ನು ಸೆರೆಹಿಡಿಯಲಾಗಿದೆ. ದುರ್ಗಮವಾದ ಪ್ರದೇಶಗಳಲ್ಲಿ ಒಂದಿಡೀ ಚಿತ್ರತಂಡ ಅತ್ಯಂತ ಉತ್ಸಾಹದಿಂದ ಈ ಚಿತ್ರೀಕರಣದಲ್ಲಿ ಭಾಗಿಯಾಗಿದೆ.Shabbash second phase shooting completed!

ವಿಶೇಷವಾಗಿ, ಎರಡು ಹಾಡುಗಳನ್ನು ಈ ಸಂದರ್ಭದಲ್ಲಿ ಚಿತ್ರೀಕರಿಸಿಕೊಳ್ಳಲಾಗಿದೆ. ಇಲ್ಲಿ ವಾಸವಾಗಿರುವ ಜೇನುಕುರುಬರ ಹಾಡಿಗಳಿಗೆ ಭೇಟಿ ನೀಡಿದ್ದ ಚಿತ್ರತಂಡ, ಆ ಬುಡಕಟ್ಟು ಜನಾಂಗದ ಹಾಡೊಂದನ್ನು ಚಿತ್ರೀಕರಿಸಿಕೊಂಡಿದೆ. ಅದಕ್ಕೆ ಸಾಹಿತ್ಯ, ಸಂಗೀತವೆಲ್ಲ ಆ ಬುಡಕಟ್ಟು ಜನರದ್ದೇ ಎಂಬುದು ಅಸಲೀ ವಿಶೇಷ. ಒಟ್ಟಾರೆ ಶಭ್ಬಾಷ್ ಚಿತ್ರದ ಪ್ರಧಾನ ಆಕರ್ಷಣೆಗಳಲ್ಲಿ ಜೇನುಕುರುಬರ ಆ ಹಾಡೂ ಕೂಡಾ ಪ್ರಧಾನವಾಗಿ ಸೇರಿಕೊಂಡಿದೆ.
ಅಂದಹಾಗೆ, ಆರು ದಿನಗಳ ಕಾಲ ಮಡಿಕೇರಿ ಭಾಗದಲ್ಲಿಯೇ ಚಿತ್ರತಂಡ ಬೀಡುಬಿಟ್ಟಿತ್ತು. ಡ್ಯಾನ್ಸರ್ ಗಳು ಸೇರಿದಂತೆ ಇಡೀ ಚಿತ್ರತಂಡವೇ ಎರಡನೇ ಹಂತರ ಚಿತ್ರೀಕರಣದಲ್ಲಿ ಭಾಗಿಯಾಗಿತ್ತು. ಅದರಲ್ಲಿಯೂ ಒಂದು ದಿನ ಸಂಜೆ ಆರು ಗಂಟೆಯಿಂದ ಮಾರನೇ ದಿನ ಮುಂಜಾನೆ ಆರು ಗಂಟೆಯವರೆಗೂ ಅವ್ಯಾಹತವಾಗಿ ಚಿತ್ರೀಕರಣ ನಡೆಸಲಾಗಿದೆ. ಮಡಿಕೇರಿ ಅಂದಮೇಲೆ ಅಲ್ಲಿನ ಮಂಜು, ಚಳಿಯ ತೀವ್ರತೆ ಎಂಥಾದ್ದೆಂಬುದು ಎಲ್ಲರಿಗೂ ತಿಳಿದಿರುತ್ತೆ. ಅದರ ನಡುವೆಯೂ ಅಹೋರಾತ್ರಿ ಚಿತ್ರೀಕರಣ ನಡೆಸಿದ ರೋಮಾಂಚಕ ಕ್ಷಣಗಳಿಗೆ ಚಿತ್ರತಂಡ ಸಾಕ್ಷಿಯಾಗಿದೆ.Shabbash second phase shooting completed!

ಓಂ ಸಾಯಿ ಪ್ರಕಾಶ್ ಸೇರಿದಂತೆ ಘಟಾನುಘಟಿ ನಿರ್ದೇಶಕರ ಗರಡಿಯಲ್ಲಿ ಪಳಗಿಕೊಂಡಿರುವ ರುದ್ರಶಿವ ನಿರ್ದೇಶನದ ಮೊದಲ ಚಿತ್ರವಿದು. ಪವೀಂದ್ರ ಮುತ್ತಪ್ಪ ಈ ಚಿತ್ರವನ್ನು ಏಸ್ 22 (ACE 22) ಬ್ಯಾನರಿನಡಿಯಲ್ಲಿ ನಿರ್ಮಾಣ ಮಾಡಿದ್ದಾರೆ. ಈಗಾಗಲೇ `ಕ’ ಮತ್ತು `ಮಳೆಬಿಲ್ಲು’ ಸಿನಿಮಾಗಳಲ್ಲಿ ನಟಿಸಿರುವ ಶರತ್ ನಾಯಕನಾಗಿ ನಟಿಸಿದ್ದರೆ, ನಿಸರ್ಗ ನಾಯಕಿಯಾಗಿ ಸಾಥ್ ಕೊಟ್ಟಿದ್ದಾರೆ. ಇದೀಗ ಎರಡನೇ ಹಂತದ ಚಿತ್ರೀಕರಣವನ್ನು ಯಶಸ್ವಿಯಾಗಿ ಮುಗಿಸಿಕೊಂಡಿರುವ ಚಿತ್ರತಂಡ, ಮೂರನೇ ಹಂತದ ಚಿತ್ರೀಕರಣದತ್ತ ಸಾಗುತ್ತಿದೆShabbash second phase shooting completed!

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…