ಶ್ರೀ ಬಾಲಾಜಿ ಫೋಟೋ ಸ್ಟುಡಿಯೋ ಹಾಡುಗಳು ಬಿಡುಗಡೆ: ಜನವರಿಗೆ ಸಿನಿಮಾ ರಿಲೀಸ್

Shree Balaji Photo Studio Songs Release: Movie release in January

ಕನ್ನಡದಲ್ಲಿ ಈಗಾಗಲೇ ತರಹವೇವಾರಿ ಶೀರ್ಷಿಕೆ ಇರುವ ಚಿತ್ರಗಳು ಬಂದಿವೆ. ಆ ಸಾಲಿಗೆ ಈಗ ಶ್ರೀ ಬಾಲಾಜಿ ಫೋಟೋ ಸ್ಟುಡಿಯೋ ಸಿನಿಮಾ ಕೂಡ ಸೇರಿದೆ. ಈಗಾಗಲೇ ಸಿನಿಮಾ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ. ಬಿಡುಗಡೆಗೂ ಮುನ್ನ ಚಿತ್ರದ ಹಾಡುಗಳು ಅದ್ಧೂರಿಯಾಗಿ ರಿಲೀಸ್ ಆಗಿವೆ.Shree Balaji Photo Studio Songs Release: Movie release in January

ಆಡಿಯೋ ರಿಲೀಸ್ ವೇಳೆ ಅತಿಥಿಯಾಗಿ ಚಿನ್ನಾರಿ ಮುತ್ತ ವಿಜಯ್ ರಾಘವೇಂದ್ರ ರವರು ಹಾಗೂ ಕರ್ನಾಟಕ ಚಲನಚಿತ್ರ ಅಕಾಡೆಮಿ ನೂತನ ಅಧ್ಯಕ್ಷರು ಹಾಗೂ ಕನ್ನಡ ಚಲನಚಿತ್ರದ ಹಿರಿಯ ಛಾಯಾಗ್ರಾಹಕ ಅಶೋಕ್ ಕಶ್ಯಪ್ ಆಗಮಿಸಿ ಹಾಡು ರಿಲೀಸ್ ಮಾಡಿ ತಂಡಕ್ಕೆ ಶುಭ ಕೋರಿದರು.Shree Balaji Photo Studio Songs Release: Movie release in January

ಹಿರಿಯ ಛಾಯಾಗ್ರಾಹ ಅಶೋಕ್ ಕಶ್ಯಪ್ ಮಾತನಾಡಿ, ” ಮಲೆನಾಡಿನ ಸೌಂದರ್ಯಕ್ಕೆ ತಾನು ಬೆರಗಾಗಿ, ಅಲ್ಲೇ ಹಲವು ವರ್ಷಗಳ ಕಾಲ ಅಲ್ಲೇ ಇದ್ದು ಅಲ್ಲಿಯ ಭಾಷೆ – ಸಂಸ್ಕೃತಿಯ ಬಗ್ಗೆ ಮಾರು ಹೋಗಿದ್ದೆ, ಈಗ ಈ ಸಿನೆಮಾ ಮತ್ತೆ ತನ್ನನ್ನು ಅಲ್ಲಿಗೆ ಕರೆದುಕೊಂಡು ಹೋಗಿದೆ, ಒಬ್ಬ ಫೋಟೋಗ್ರಾಫರ್ ಜೀವನದ ಬಗ್ಗೆ ಇದುವರೆಗೆ ಬರದ ಕಥೆ ಇಲ್ಲಿದೆ. ಒಂದೊಂದು ಫ್ರೇಮ್ ಕೂಡ ಅದ್ಭುತವಾಗಿ ಮೂಡಿ ಬಂದಿದೆ, ಚಿತ್ರಕ್ಕೆ ಗೆಲುವು ಸಿಗಲಿ ಎಂದು ಶುಭ ಹಾರೈಸಿದರು.Shree Balaji Photo Studio Songs Release: Movie release in January

ವಿಜಯ ರಾಘವೇಂದ್ರ ಮಾತನಾಡಿ, “ಊರು ಕಥೆಯ ಬೇರು, ಒಂದು ಊರಿನಲ್ಲಿ ಹಲವು ತರಹದ ಕಥೆ ಇರೋದು ಸಹಜ. ಅದು ಹೃದಯದಿಂದ ಹುಟ್ಟೋ ಕಥೆಯಾಗಿ ಹೊರಬರುತ್ತೆ, ಅಂತಹ ಕಥೆಗಳು ಸೋತಿರೋ ಉದಾರಹಣೆ ತುಂಬಾ ಕಡಿಮೆ, ಇಂತಹ ಸಿನಿಮಾವನ್ನು ಜನರು ಇಷ್ಟ ಪಡುತ್ತಾರೆ, ಈಗಿನ ಸಿನೆಮಾ ನೋಡೋ ಮಂದಿ ಇದನ್ನೇ ಎದುರು ನೋಡುತ್ತಿದ್ದಾರೆ, ಈ ತಂಡದ ಜೊತೆ ನಾನು ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ, ನಾನೊಬ್ಬ ಕಲಾವಿದನಾಗಿ ಈ ಸಿನೆಮಾ ನೋಡಿ ಅಂತ ಹೇಳಲ್ಲ ಒಬ್ಬ ಪ್ರೇಕ್ಷಕನಾಗಿ ಈ ಸಿನಿಮಾ ನಾನು ನೋಡ್ತೀನಿ ನೀವು ನೋಡಿ ” ಎಂದರು.Shree Balaji Photo Studio Songs Release: Movie release in January

ನಿರ್ಮಾಪಕ ವೆಂಕಟೇಶ್ವರ ರಾವ್, ಬಳ್ಳಾರಿ ಮೊದಲ ಸಲ ಸೃಜನ ಪ್ರೊಡಕ್ಷನ್ ಅಡಿ ಸಿನಿಮಾ ನಿರ್ಮಿಸಿದ್ದಾರೆ. ಅವರು, “ಹಲವಾರು ಜನ ಸಿನಿಮಾ ಮಾಡಲು ಹೊರಟಾಗ ಬೇಡ ಎಂದು ತಲೆಕೆಡಿಸಲು ಪ್ರಯತ್ನ ಪಟ್ಟರು., ಆದರೆ ಈ ಸಿನೆಮಾ ಎಲ್ಲರ ಮನಸ್ಸನ್ನು ಗೆಲ್ಲೋದರಲ್ಲಿ ಯಾವುದೇ ಸಂಶಯ ಇಲ್ಲ,ಈ ಸಿನಿಮಾ ಮಾಡಿದಕ್ಕೆ ನನಗೆ ತೃಪ್ತಿ ಇದೆ ಎಂದು ತಿಳಿಸಿದರು,
ಈ ವೇಳೆ ಚಿತ್ರತಂಡ ಚಿತ್ರೀಕರಣದ ಅನುಭವ ಹಂಚಿಕೊಂಡಿತು.Shree Balaji Photo Studio Songs Release: Movie release in January


ನಿರ್ದೇಶಕ ರಾಜೇಶ್ ಧ್ರುವ ಮಾತನಾಡಿ, “23 ದಿನ ಮಳೆಯಲ್ಲೇ ಈ ಸಿನೆಮಾ ಚಿತ್ರೀಕರಣ ಮಾಡಲಾಗಿದ್ದು, ಕೇವಲ 5 ತಿಂಗಳಲ್ಲಿ ತೆರೆಗೆ ತರಲು ಸಜ್ಜು ಮಾಡಿದ್ದೇವೆ, ಯಾವುದೇ ಸಿನಿಮಾ ಇಟ್ಟುಕೊಂಡು ಹಳೆಯದಾದಷ್ಟು ಅದರ ಸಾರ ಹೊರಟು ಹೋಗುತ್ತೆ, ನನ್ನ ಊರಿನಲ್ಲಿ ಅನುಭವಕ್ಕೆ ಬಂದ ಹಲವು ಅನುಭವನ್ನು, ಭಾಷೆಯನ್ನು ಈ ಸಿನೆಮಾದಲ್ಲಿ ಬಳಸಿಕೊಂಡು ಎಲ್ಲ ಕಲಾವಿದರಿಗೆ 30 ದಿನಗಳ ಕಾಲ ಅಲ್ಲಿಯ ಭಾಷೆಯ ಅರಿವು ಮಾಡಿಸಿ ಪಾತ್ರಕ್ಕೆ ತಕ್ಕಂಗೆ ತಯಾರು ಮಾಡಲಾಗಿದ್ದು, ಎಲ್ಲ ಕಲಾವಿದರು ಹೊಸಬರೇ. ಆದರೆ ಎಲ್ಲಿಯೂ ಕೂಡ ನೋಡುಗರಿಗೆ ಅದರ ಅರಿವೇ ಆಗದಂತೆ ನೈಜವಾಗಿ ಅಭಿನಯ ಮಾಡಿಸಲಾಗಿದೆ ” ಎಂದರು.Shree Balaji Photo Studio Songs Release: Movie release in January

ಸಿನಿಮಾ ಕಲಾವಿದರು ಹಾಗೂ ತಂತ್ರಜ್ಞರು ಈ ವೇಳೆ ಅನುಭವನ್ನು ಹಂಚಿಕೊಂಡರು,
ಈ ಸಿನೆಮಾ ಜನವರಿಯಲ್ಲಿ ಬಿಡುಗಡೆಯಾಗಲಿದೆ.

ಕಿರುತೆರೆ ಟು ಬೆಳ್ಳಿತೆರೆ…

ಇತ್ತೀಚಿನ ದಿನಗಳಲ್ಲಿ ಕನ್ನಡ ಚಿತ್ರರಂಗ ಪ್ರಯೋಗತ್ಮಕ ಚಿತ್ರದ ಕಡೆ ಮುಖ ಮಾಡಿದೆ, ಅದರಲ್ಲಿ ಹಳ್ಳಿ ಸೊಗಡಿನ ಚಿತ್ರಗಳ ಸಂಖ್ಯೆ ಜಾಸ್ತಿ, ಆ ಸಾಲಿಗ “ಶ್ರೀ ಬಾಲಾಜಿ ಫೋಟೋ ಸ್ಟುಡಿಯೋ” ಚಿತ್ರ ಕೂಡ ಸೇರಿದೆ. ಇಡೀ ಚಿತ್ರ ಶಿರಸಿ, ಯಲ್ಲಾಪುರ, ಹೊನ್ನಾವರ ಸುತ್ತ ಮುತ್ತ ಚಿತ್ರೀಕರಣ ವಾಗಿದೆ. ಅಲ್ಲಿಯ ಸ್ಥಳೀಯ ಪ್ರತಿಭೆಗಳು ಕಾಣಿಸಿಕೊಂಡಿವೆ.Shree Balaji Photo Studio Songs Release: Movie release in January

ಈ ಚಿತ್ರದ ವಿಶೇಷತೆ ಅಂದರೆ, ಬಳಸಿರುವ ಉತ್ತರ ಕನ್ನಡ ಭಾಷೆ. ಕಥೆ ಬಗ್ಗೆ ಹೇಳುವುದಾದರೆ, ಒಬ್ಬ ಫೋಟೋಗ್ರಾಫರ್ ಹಾಗೂ ಫೋಟೋ ಸ್ಟುಡಿಯೋ ನಡುವಿನ ಭಾವನಾತ್ಮಕ ಸಂಬಂಧ ಚಿತ್ರದ ಹೈಲೈಟ್. ಜೊತೆಗೊಂದು ನವಿರಾದ ಲವ್ ಸ್ಟೋರಿ.

ನಿರ್ದೇಶಕರಾಗಿ ಹಾಗೂ ಮುಖ್ಯ ಪಾತ್ರದಲ್ಲಿ ಕಿರುತೆರೆಯ 6 ವರ್ಷಗಳ ಕಾಲ ಸಂಚಲನ ಮೂಡಿಸಿದ್ದ ನಟ ರಾಜೇಶ್ ಧ್ರುವ ಇಲ್ಲಿದ್ದಾರೆ. ಉಳಿದಂತೆ ರವಿ ಸಾಲಿಯಾನ್, ರಾಧಿಕಾ ಅಚ್ಯುತ್ ರಾವ್, ಸಂಪತ್ ಜೆ ರಾಮ್, ಕಾಮಿಡಿ ಕಿಲಾಡಿಗಳು 4 ಖ್ಯಾತಿಯ ಶುಭಲಕ್ಷ್ಮಿ, ಕನ್ಯಾಕುಮಾರಿ ಧಾರವಾಹಿ ಖ್ಯಾತಿಯ ನಕುಲ್ ಶರ್ಮ, ರಕ್ಷಿತ್, ಬಿಗ್ ಬಾಸ್ 4 ಖ್ಯಾತಿಯ ರವಿ ಮೂರೂರು ಹಾಗೂ ವಿಶೇಷ ಪಾತ್ರದಲ್ಲಿ ಕಿರುತೆರೆ ನಟ ಶಿಶಿರ್ ಹಾಗೂ ಹಲವಾರು ಹೊಸ ಕಲಾವಿದರು ಕಾಣಿಸಿಕೊಂಡಿದ್ದಾರೆ.Shree Balaji Photo Studio Songs Release: Movie release in January

ಕಥೆ – ಚಿತ್ರಕಥೆಗೆ ಅಭಿಷೇಕ್ ಶಿರಸಿ ಪಲ ಹಾಗೂ ಪೃಥ್ವಿಕಾಂತ ಪೆನ್ನು ಹಿಡಿದಿದ್ದಾರೆ. ಅಜಿತ್ ಬೊಪ್ಪನಳ್ಳಿ ಸಂಭಾಷಣೆ ಬರೆದಿದ್ದಾರೆ. ಮನೋಜ್ ಸಿನಿ ಸ್ಟುಡಿಯೋ ಛಾಯಾಗ್ರಹಣವಿದೆ. ಗಣಪತಿ ಭಟ್ ಸಂಕಲನ ಮಾಡಿದ್ದಾರೆ. ಚಿತ್ರದಲ್ಲಿ 2 ಹಾಡುಗಳಿಗೆ ಶ್ರೀರಾಮ್ ಗಂಧರ್ವ ಸಂಗೀತ ನೀಡಿದ್ದಾರೆ‌ ಕಾಂತಾರ ಖ್ಯಾತಿಯ ಪ್ರಮೋದ್ ಮರವಂತೆ ಸಾಹಿತ್ಯ ಇದೆ, ಸ್ವಸ್ತಿಕ್ ಕಾರೆಕಾಡ್ ಹಿನ್ನೆಲೆ ಸಂಗೀತ ಚಿತ್ರಕ್ಕಿದೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…