“ಉಪಾಧ್ಯಕ್ಷ”ರಿಂದ ” ಸೈರನ್” ಟೀಸರ್ ಬಿಡುಗಡೆ.

Siren Official Teaser | Praveer Shetty

ಸ್ಯಾಂಡಲ್ ವುಡ್ ಗೆ ಪ್ರವೀರ್ ಶೆಟ್ಟಿ ಎಂಬ ನೂತನ ಪ್ರತಿಭೆಯ ಆಗಮನ.

ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಪ್ರವೀಣ್ ಶೆಟ್ಟಿ ಅವರ ಪುತ್ರ ಪ್ರವೀರ್ ಶೆಟ್ಟಿ “ಸೈರನ್” ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಪ್ರವೇಶ ಮಾಡಿದ್ದಾರೆ. ಇತ್ತೀಚೆಗೆ ಈ ಚಿತ್ರದ ಟೀಸರ್ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನಡೆಯಿತು. “ಉಪಾಧ್ಯಕ್ಷ” ಚಿಕ್ಕಣ್ಣ ಈ ಚಿತ್ರದ ಟೀಸರ್ ಬಿಡುಗಡೆ ಮಾಡಿದರು. ನಿರ್ಮಾಪಕ ಉಮಾಪತಿ ಗೌಡ, ಲಹರಿ ವೇಲು, ಟವಿ 9 ಹಿರಿಯ ಸಂಪಾದಕರಾದ ರಂಗನಾಥ್ ಭಾರದ್ವಾಜ್, ಶಿವಾನಂದ ಶೆಟ್ಟಿ, ಶರತ್ ಚಂದ್ರ ಸಾನಿಲ್ ಸೇರಿದಂತೆ ಅನೇಕ ಗಣ್ಯರು ಈ ಸಮಾರಂಭಕ್ಕೆ ಆಗಮಿಸಿ ಉಪಸ್ಥಿತರಿದ್ದರು.siren kannada movie

ಕ ರ ವೇ ರಾಜ್ಯಾಧ್ಯಕ್ಷರಾದ ಪ್ರವೀಣ್ ಶೆಟ್ಟಿ ಟೀಸರ್ ಬಿಡುಗಡೆ ಸಮಾರಂಭಕ್ಕೆ ಆಗಮಿಸಿದ್ದ ಗಣ್ಯರನ್ನು ಆತ್ಮೀಯವಾಗಿ ಸ್ವಾಗತಿಸಿದರು.

ನಮ್ಮ ಚಿತ್ರವನ್ನು ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರಿಗೆ ಅರ್ಪಿಸುತ್ತೇವೆ. ಈ ಚಿತ್ರದ ನಿರ್ದೇಶಕ ರಾಜ ವೆಂಕಯ್ಯ ಅವರು ನನ್ನನ್ನು ಭೇಟಿಯಾಗಿ ಕಥೆ ಹೇಳಿದರು. ತುಂಬಾ ಇಷ್ಟವಾಯಿತು. ಬಿಜು ಶಿವಾನಂದ್ ಅವರು ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ನಮ್ಮ ಚಿತ್ರಕ್ಕೆ ನಿಮ್ಮ ಪ್ರೋತ್ಸಾಹವಿರಲಿ ಎಂದರು ನಾಯಕ ಪ್ರವೀರ್ ಶೆಟ್ಟಿ.siren kannada movie

ನಾನು ಕಳೆದ ಇಪ್ಪತ್ತು ವರ್ಷಗಳಿಂದ ಚಿತ್ರರಂಗದಲ್ಲಿದ್ದೀನಿ. ಛಾಯಾಗ್ರಹಕನಾಗಿ, ಸಂಕಲನಕಾರನಾಗೂ ಕಾರ್ಯ ನಿರ್ವಹಿಸಿದ್ದೇನೆ. ಈಗ ಕನ್ನಡದಲ್ಲಿ “ಸೈರನ್” ಚಿತ್ರವನ್ನು ನಿರ್ದೇಶಿಸಿದ್ದೇನೆ. ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಚಿತ್ರ. ನಾಯಕ ಪ್ರವೀರ್ ಶೆಟ್ಟಿ ತುಂಬಾ ಚೆನ್ನಾಗಿ ಅಭಿನಯಿಸುತ್ತಿದ್ದಾರೆ. ಆಡಿಯೋ ರಿಲೀಸ್ ಸಮಯದಲ್ಲಿ ಚಿತ್ರದ ಬಗ್ಗೆ ಹೆಚ್ಚು ಮಾತನಾಡುತ್ತೇನೆ ಎಂದರು ನಿರ್ದೇಶಕ ರಾಜ ವೆಂಕಯ್ಯ.

ನಾಯಕಿ ಲಾಸ್ಯ ಹಾಗೂ ಪ್ರಮುಖ ಪಾತ್ರಧಾರಿ ಸುಕನ್ಯ ತಮ್ಮ ಪಾತ್ರದ ಬಗ್ಗೆ, ನಾಗೇಶ್ ಆಚಾರ್ಯ ಛಾಯಾಗ್ರಹಣದ ಕುರಿತು ಮಾತನಾಡಿದರು.

ರೋಡಿನಲ್ಲಿ “ಸೈರನ್” ಸದ್ದಿಗೆ ಎಲ್ಲರೂ ದಾರಿ ಬಿಡುತ್ತಾರೆ. ಸ್ಯಾಂಡಲ್ ವುಡ್ ನಲ್ಲೂ ಈ “ಸೈರನ್” ಸಹ ಭಾರಿ ಸದ್ದು ಮಾಡಲಿ. ಭರ್ಜರಿ ಯಶಸ್ಸು ಕಾಣಲಿ. ಟೀಸರ್ ನಲ್ಲೇ ಪ್ರವೀರ್ ಶೆಟ್ಟಿ ಒಳ್ಳೆಯ ಭರವಸೆ ಮೂಡಿಸಿದ್ದಾರೆ. ಅವರಿಗೂ ಒಳ್ಳೆಯದಾಗಲಿ ಎಂದು ನಟ ಚಿಕ್ಕಣ್ಣ ಹಾರೈಸಿದರು.siren kannada movie

ಪ್ರವೀಣ್ ಶೆಟ್ಟಿ ಅವರ ಸ್ನೇಹಿತರ ಬಳಗ ದೊಡ್ಡದು. ಮುಂದೆ ಈ ಸಿನಿಮಾದ ಕಾರ್ಯಕ್ರಮಗಳನ್ನು ಅರಮನೆ ಆವರಣದಲ್ಲಿ ಮಾಡುವಂತೆ ವಿನಂತಿಸುತ್ತೇನೆ. ಟೀಸರ್ ತುಂಬಾ ಚೆನ್ನಾಗಿದೆ. ಚಿತ್ರ ಕೂಡ ಚೆನ್ನಾಗಿರುತ್ತದೆ. ಶುಭವಾಗಲಿ ಎಂದರು ನಿರ್ಮಾಪಕ ಉಮಾಪತಿ ಗೌಡ.

ನಾವು ಹಾಗೂ ಪ್ರವೀಣ್ ಶೆಟ್ಟಿ ಅವರು ನೆರೆಹೊರೆಯವರು. ಅವರ ಮಗನ ಚಿತ್ರ ಭರ್ಜರಿ ಗೆಲುವು ಸಾಧಿಸಲಿ ಎಂದು ಲಹರಿ ವೇಲು ಹಾರೈಸಿದರು.siren kannada movie

ಟಿವಿ 9 ಹಿರಿಯ ಸಂಪಾದಕ ರಂಗನಾಥ್ ಭಾರದ್ವಾಜ್, ಶಿವಾನಂದ ಶೆಟ್ಟಿ, ಪಳನಿ ಪ್ರಕಾಶ್, ಬಂಟರ ಸಂಘದ ಅಧ್ಯಕ್ಷರು ಸೇರಿದಂತೆ ಸಾಕಷ್ಟು ಗಣ್ಯರು ತಮ್ಮ ಮಾತುಗಳ ಮೂಲಕ ಚಿತ್ರಕ್ಕೆ ಶುಭ ಕೋರಿದರು‌. ನಿರ್ಮಾಪಕ ಬಿಜು ಶಿವಾನಂದ ಎಲ್ಲರಿಗೂ ಧನ್ಯವಾದ ತಿಳಿಸಿದರು.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…