ಆನ್‌ ಲೈನ್‌ ಭಯೋತ್ಪಾದಕರ ಜೊತೆ ಹೆಣ್ಣುಮಕ್ಕಳ ಟಕ್ಕರ್!‌

ಮನೋಜ-ರಂಜನಿ ಮೋಡಿ!


ಪ್ರಸ್ತುತ ಜಗತ್ತನ್ನು ನಲುಗಿಸುತ್ತಿರುವ, ಹೆಣ್ಣುಮಕ್ಕಳ ಮಾನ, ಪ್ರಾಣಕ್ಕೆ ಮಾರಕವಾಗಿರುವ ಕಥಾವಸ್ತು ಹೊಂದಿರುವ ಸೈಬರ್ ಕ್ರೈಂ ಕಥಾವಸ್ತು ಹೊಂದಿರುವ ಚಿತ್ರ ʻಟಕ್ಕರ್ʼ ಈ ವಾರ ತೆರೆಗೆ ಬಂದಿದೆ. ವಿ. ರಘು ಶಾಸ್ತಿ ನಿರ್ದೇಶಿಸಿರುವ ಚಿತ್ರವನ್ನು ನಾಗೇಶ್ ಕೋಗಿಲು ನಿರ್ಮಿಸಿದ್ದಾರೆ.
ಭಯ ಅಂದರೆ ಏನು ಅಂತಲೇ ಗೊತ್ತಿಲ್ಲದೆ ಬೆಳೆದವನು. ಹೆಸರು ಸಾಥ್ಯುಕಿ ಅಲಿಯಾಸ್ ಒಂಟೆ. ಕಾಲೇಜಿನಲ್ಲಿ ವಿರೋಧಿ ಗುಂಪಿನ ಜೊತೆ ಬಡಿದಾಡಿಕೊಂಡು ಪೊಲೀಸ್ ಸ್ಟೇಷನ್ನಿಗೆ ಎಡತಾಕೋದು ಮಾಮೂಲಿ. ಅದೇ ಪೊಲೀಸ್ ಸ್ಟೇಷನ್ನಿನಲ್ಲಿ ಅಪ್ಪ ಹಿರಿಯ ಅಧಿಕಾರಿ. ಅಮ್ಮ ಲಾಯರು. ಜೊತೆಗೊಬ್ಬಳು ತಂಗಿ. ಪಕ್ಕದಮನೆಯಲ್ಲಿ ಮತ್ತೊಬ್ಬಳು ಮಮತೆಯ ಸಹೋದರಿ. ಆಕೆ ಸಮಸ್ಯೆಯೊಂದರಲ್ಲಿ ಸಿಲುಕಿಕೊಳ್ಳುತ್ತಾಳೆ. ಅವಳನ್ನು ಬಚಾವು ಮಾಡಲು ಹೋದಾಗ ಒಂಟೆಯ ಮುಂದೆ ತೆರೆದುಕೊಳ್ಳೋದು ಭಯಾನಕ ಸೈಬರ್ ಜಾಲ. ಅದನ್ನು ಹೇಗೆ ಬೇಧಿಸುತ್ತಾನೆ? ಎಲ್ಲೋ ಕೂತು ಮನೆ ಹೆಣ್ಣುಮಕ್ಕಳ ಮೇಲೆ ಕಣ್ಣಿಡುವ ಕಿರಾತಕನನ್ನು ನಾಮಾವಶೇಷ ಮಾಡುತ್ತಾನಾ? ಈ ನಡುವೆ ಹೀರೋ ಮತ್ತು ವಿಲನ್ ನಡುವೆ ಏರ್ಪಡುವ ʻಟಕ್ಕರ್ʼ ಹೇಗಿರುತ್ತದೆ ಅನ್ನೋದಿಲ್ಲಿ ಬಿಚ್ಚಿಕೊಂಡಿದೆ.Takkar Kannada movie scaled

ಇನ್ನೂ ಮಾತು ಬಾರದ ಮಕ್ಕಳು ಕೂಡಾ ಇಂದು ಕೈಲಿ ಮೊಬೈಲು ಹಿಡಿದಿರುತ್ತಾರೆ. ಕೈಗೆ ಮೊಬೈಲು ಕೊಡದಿದ್ದರೆ ಊಟ ಕೂಡಾ ಮಾಡದ ಮಕ್ಕಳನ್ನು ನೋಡಿದ್ದೇವೆ. ಇನ್ನು ವಯಸ್ಸಿಗೆ ಬಂದ ಹೆಣ್ಣುಮಕ್ಕಳನ್ನು ಇದೇ ಮೊಬೈಲು ಯಾವ ಮಟ್ಟಕ್ಕೆ ಹಿಂಸೆ ನೀಡಬಹುದು? ನಾಲ್ಕು ಗೋಡೆ ನಡುವೆ ನಮ್ಮ ಕೈಲಿರುವ ಮೊಬೈಲು ನಮ್ಮದೇ ಖಾಸಗೀ ಬದುಕನ್ನು ಮತ್ತೊಬ್ಬರಿಗೆ ಹೇಗೆ ಬಂಡವಾಳ ಮಾಡುತ್ತಿದೆ ಅನ್ನೋದನ್ನು ಇಲ್ಲಿ ಕಣ್ಣಿಗೆ ಕಟ್ಟಿದಂತೆ ಚಿತ್ರಿಸಲಾಗಿದೆ. ʻʻಅಯ್ಯೋ ದೇವ್ರೇ… ನಮ್ಮ ಕೈಲಿರುವ ಮೊಬೈಲು ನಮ್ಮ ಬದುಕನ್ನು ಇಷ್ಟೊಂದು ಇಕ್ಕಟ್ಟಿಗೆ ಸಿಲುಕಿಸಲು ಸಾಧ್ಯವಾ?ʼʼ ಅಂತಾ ಆಶ್ಚರ್ಯ ಮತ್ತು ಗಾಬರಿ ಒಟ್ಟೊಟ್ಟಿಗೇ ಆಗುತ್ತದೆ.8fcc8742aacfdc60712c9786e76259f2 e1651897061831
ಈ ಸಿನಿಮಾದಲ್ಲಿ ಮನೋಜ್ ಕುಮಾರ್ ಹೀರೋ ಆಗಿ ನಟಿಸಿದ್ದಾರೆ. ನಾಯಕನಾಗಿ ನಟಿಸಿರುವ ಮೊದಲ ಸಿನಿಮಾವಾದರೂ ಮನೋಜ್ ಪಾತ್ರಕ್ಕೆ ಬೇಕಾದಂತೆ ತಮ್ಮನ್ನು ಮೋಲ್ಡ್ ಮಾಡಿಕೊಂಡಿದ್ದಾರೆ. ಅನುಭವಿಯಂತೆ ಪಾತ್ರ ಪೋಷಣೆ ಮಾಡಿದ್ದಾರೆ. ದರ್ಶನ್ ಅವರ ಹತ್ತಿರದ ಸಂಬಂಧಿ ಅಂತಾ ಮನೋಜ್ ಪ್ರತ್ಯೇಕವಾಗಿ ಹೇಳಿಕೊಳ್ಳುವ ಯಾವ ಅಗತ್ಯವೂ ಇಲ್ಲ. ಯಾಕೆಂದರೆ, ಹಾವ-ಭಾವ, ನಡೆ-ನುಡಿ ಎಲ್ಲದರಲ್ಲೂ ಚಾಲೆಂಜಿಂಗ್ ಸ್ಟಾರ್ ಅವರ ಹೋಲಿಕೆ ಎದ್ದು ಕಾಣುತ್ತದೆ. ಹಾಗಂತಾ ಮನೋಜ್ ದರ್ಶನ್ ಅವರನ್ನು ಅನುಕರಿಸಿದ್ದಾರೆ ಅಂದುಕೊಳ್ಳುವಂತಿಲ್ಲ. ಅದು ಸಹಜವಾಗಿ ಮೈಗೂಡಿರುವಂಥದ್ದು. ಪಕ್ಕಾ ಮಾಸ್, ಕಮರ್ಷಿಯಲ್ ಎಲಿಮೆಂಟಿನ ಸಿನಿಮಾಗಳಿಗೆ ಹೇಳಿಮಾಡಿಸಿದಂತಾ ಗುಣಗಳಿರುವ ಮನೋಜ್ ಸ್ವಲ್ಪ ಪ್ರಯತ್ನಪಟ್ಟರೂ ಬೇರೆ ಲೆವೆಲ್ಲಿಗೆ ಹೋಗಿ ತಲುಪಬಹುದು.

ಇನ್ನು ನಾಯಕಿ ರಂಜನಿ ರಾಘವನ್ ಬಗ್ಗೆ ಹೊಸದಾಗೇನು ಹೇಳುವಂಥದ್ದಿಲ್ಲ. ಈಕೆಯ ಅಭಿನಯ ಚಾತುರ್ಯ ಎಂಥದ್ದು ಅಂತಾ ಪುಟ್ಟಗೌರಿ ಮದುವೆ ಮತ್ತು ಕನ್ನಡತಿ ಎನ್ನುವ ಕಿರುತೆರೆಯ ಎರಡು ಧಾರಾವಾಹಿಗಳು ಈಗಾಗಲೇ ಹೇಳಿವೆ. ಸೀರಿಯಲ್ಲಿಗೆ ಮಾತ್ರವಲ್ಲದೆ, ಗಟ್ಟಿ ಕಥೆಯ, ಗಂಭೀರ ಪಾತ್ರಗಳ ಸಿನಿಮಾಗಳು ಸಿಕ್ಕರೆ ರಂಜನಿ ಅಲ್ಲಿಯೂ ಸ್ಕೋರು ಮಾಡಿಕೊಳ್ಳುತ್ತಾರೆ ಅನ್ನೋದನ್ನು ಟಕ್ಕರ್ ತೋರಿಸಿಕೊಟ್ಟಿದೆ. ನೋವಿಗೀಡಾದವರು ಯಾರಾದರೇನು, ಅವರ ಪ್ರಾಣ ಕಾಪಾಡುವುದೇ ಧರ್ಮ ಅಂತಾ ನಂಬಿದ ವೈದ್ಯೆಯಾಗಿ, ನಾಯಕನ ಮರ್ಮವನ್ನು ಅರಿಯದೆ, ಅವನ ಮಾತನ್ನು ನಂಬುವ ಮುಗ್ದೆಯಾಗಿ, ನಂಬಿಕೆ ದ್ರೋಹ ಅನ್ನಿಸಿದಾಗ ತಿರುಗಿಬೀಳುವ ಗಟ್ಟಿಗಿತ್ತಿಯಾಗಿ ರಂಜನಿ ಇಷ್ಟವಾಗುತ್ತಾರೆ. ಮಾದಕತೆ ಇಲ್ಲದೆ, ನಾಯಕಿಯೊಬ್ಬಳು ನಟನೆಯಿಂದಲೇ ಎಲ್ಲರನ್ನೂ ಸೆಳೆಯಬಲ್ಲಳು ಅನ್ನೋದಕ್ಕೆ ರಂಜನಿ ಇಲ್ಲಿ ಸ್ಪಷ್ಟ ಉದಾಹರಣೆಯಾಗಿದ್ದಾರೆ.
ಭಜರಂಗಿ ಖ್ಯಾತಿಯ ಸೌರವ್ ಲೋಕಿಯಂತೂ ಇಂಟರ್ ವಲ್ ಸಮಯಕ್ಕೆ ಬಂದರೂ ನಂತರದ ಭಾಗವನ್ನು ಪೂರ್ತಿಯಾಗಿ ಆವರಿಸಿಕೊಳ್ಳುತ್ತಾರೆ. ಘನ ಗಾಂಭೀರ್ಯದ ದನಿ, ಕಣ್ಣುಗಳ ಚಲನೆಯಲ್ಲೇ ಭಯ ಹುಟ್ಟಿಸುತ್ತಾರೆ. ಭಜರಂಗಿ, ರಥಾವರ ನಂತರ ʻಟಕ್ಕರ್ʼ ಚಿತ್ರದಲ್ಲಿ ಲೋಕಿ ಅವರನ್ನು ಬೇರೆಯದ್ದೇ ಶೇಡ್ ನಲ್ಲಿ ನೋಡಬಹುದು. ಈ ಸಿನಿಮಾ ನೋಡಿ ಹೊರಬಂದಮೇಲೆ ಹೆಣ್ಣುಮಕ್ಕಳು ಇವರಿಗೆ ಹಿಡಿ ಶಾಪ ಹಾಕೋದಂತೂ ಖಂಡಿತಾ. ಆ ಮಟ್ಟಿಗೆ ಎಲ್ಲರನ್ನೂ ಹೆದಸಿರುವ, ನೇರವಾಗಿ ಭಾಗಿಯಾಗದೇ ಕೂತಲ್ಲಿಂದಲೇ ಬೆದರಿಸುವ ಆನ್ ಲೈನ್ ಭಯೋತ್ಪಾದಕನಂತೆ ಲೋಕಿ ಕಾಣಿಸಿಕೊಂಡಿದ್ದಾರೆ.MV5BZTYwNWQ3OGMtNjRjNy00NjFjLTlkYTEtNzRiZGQzMTllOWYxXkEyXkFqcGdeQXVyMTEyMTExMzM2. V1 FMjpg UX1000 e1651897149809

ಸಾಧುಕೋಕಿಲಾ ಕಾಮಿಡಿ ದೃಶ್ಯಗಳು ನಗು ಹುಟ್ಟಿಸೋದರಲ್ಲಿ ಡೌಟೇ ಇಲ್ಲ. ಯಾವ ಪಾತ್ರ ಕೊಟ್ಟರೂ ಲೀಲಾಜಾಲವಾಗಿ ನಟಿಸುವ ಸಿ.ವಿ. ಶಿವಶಂಕರ್ ಪುತ್ರ ಲಕ್ಷ್ಮಣ್ ಇಲ್ಲಿ ಹ್ಯಾಕರ್ ಪಾತ್ರಕ್ಕೆ ಹೇಳಿ ಮಾಡಿಸಿದಂತಿದ್ದಾರೆ. ಅಶ್ವಿನ್ ಹಾಸನ್ ಥರದ ಶಕ್ತಿಶಾಲಿ ನಟ, ಕಾಮಿಡಿ ಕಿಲಾಡಿ ನಯನಾ, ಹಿರಿಯ ನಟಿ ಸುಮಿತ್ರಾ ಮುಂತಾದ ಕಲಾವಿದರನ್ನು ತೀರಾ ಕಡಿಮೆ ದೃಶ್ಯಗಳಲ್ಲಿ ಬಳಸಿಕೊಂಡಿರೋದು ಯಾಕೆ ಅಂತಾ ನಿರ್ದೇಶಕರೇ ಹೇಳಬೇಕು.
ಟಕ್ಕರ್ ಚಿತ್ರದಲ್ಲಿ ಒಬ್ಬಬ್ಬರದ್ದೂ ಒಂದೊಂದು ತೂಕವಾದರೆ, ಅವರೆಲ್ಲರನ್ನೂ ಸರಿಗಟ್ಟುವಂತೆ ಕೆಲಸ ಮಾಡಿ ತೋರಿಸಿರೋದು ಸಂಗೀತ ನಿರ್ದೇಶಕ ಮಣಿಕಾಂತ್ ಕದ್ರಿ. ಬಹುಶಃ ಕದ್ರಿಯವರ ಹಿನ್ನೆಲೆ ಸಂಗೀತದಲ್ಲಿನ ಮೋಡಿ ಮಾಡುವ ಗುಣವೇ ಟಕ್ಕರ್ ಚಿತ್ರದ ದೃಶ್ಯಗಳಿಗೆ ಹೆಚ್ಚು ಶಕ್ತಿ ನೀಡಿದಂತಿದೆ. ಹಾಡುಗಳೂ ಕೂಡಾ ಅಷ್ಟೇ ಚೆಂದ. ಡಾ. ವಿ ನಾಗೇಂದ್ರ ಪ್ರಸಾದ್ ಬರೆದಿರುವ ʻಬೀಸುವ ತಂಗಾಳಿಯ ಗೊಂಬೆ ಮಾಡಿದನುʼ ಮತ್ತು ʻಆನೆ ನಡೆದಿದ್ದೆ ದಾರಿ ಅಲ್ವೇನ್ರಿ ಯಾರೂ ಕೊಡಬೇಡಿ ಟಕ್ಕರ್ʼ ಟೈಟಲ್ ಸಾಂಗ್, ಮತ್ತು ನಿರ್ದೇಶಕ ರಘು ಶಾಸ್ತ್ರಿ ಅವರೇ ಬರೆದಿರುವ ʻಬಿರುಗಾಳಿ ಬೀಸೋ ಸದ್ದಿಗೆ, ತರಗೆಲೆಯು ನಿಲ್ಲದುʼ ಹಾಡುಗಳ ಗುಣಮಟ್ಟ ಉತ್ಕೃಷ್ಟವಾಗಿವೆ. ಟೈಟಲ್ ಸಾಂಗ್ ಹಾಡಿರುವ ಶಶಾಂಕ್ ಶೇಷಗಿರಿ ದನಿಯಲ್ಲಿ ಪವರ್ ಇದೆ.

ಅಪರೂಪಕ್ಕೆನ್ನುವಂತೆ ಈ ಕಾಲಕ್ಕೆ ಹೊಂದುವ ಗಟ್ಟಿ ಕತೆ, ಅಷ್ಟೇ ರೋಚಕವಾದ ನಿರೂಪಣೆ, ಸಂಭಾಷಣೆಗಳನ್ನು ಒಳಗೊಂಡ ಸಿನಿಮಾ ಟಕ್ಕರ್. ಪ್ರತಿಯೊಬ್ಬರೂ ತಿಳಿದುಕೊಳ್ಳಲೇಬೇಕಾದ ಅನೇಕ ಅಂಶಗಳನ್ನು ಮನರಂಜನೆಯ ಸಮೇತ ಕಟ್ಟಿಕೊಟ್ಟಿದ್ದಾರೆ. ಖಂಡಿತಾ ಒಮ್ಮೆ ನೋಡಿ….

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…