ಬೆಳ್ಳಿತೆರೆ ಮೇಲೆ ಬರಲಿದೆ ಶ್ರೀ ವಾದಿರಾಜ ಸ್ವಾಮಿಗಳ ಜೀವನಾಧಾರಿತ ಕಥೆ- ಹಯವದನ ನಿರ್ದೇಶನದಲ್ಲಿ ಮೂಡಿಬರಲಿದೆ ಸಿನಿಮಾ

The life story of Sri Vadiraja Swami to come on the silver screen - the movie will be directed by Hayavadhan

The life story of Sri Vadiraja Swami to come on the silver screen - the movie will be directed by Hayavadhan‘ಎಲ್ಲೋ ಜೋಗಪ್ಪ ನಿನ್ನರಮನೆ’ ಸಿನಿಮಾ ನಿರ್ದೇಶಕ ಹಯವದನ ಹೊಸದೊಂದು ಸಿನಿಮಾ ಘೋಷಣೆ ಮಾಡಿದ್ದಾರೆ. ಸೋದೆ ಶ್ರೀ ವಾದಿರಾಜ ಗುರುಸಾರ್ವಭೌಮರ ಜೀವನಾಧಾರಿತ ಸಿನಿಮಾವನ್ನು ಹಯವದನ ನಿರ್ದೇಶನ ಮಾಡುತ್ತಿದ್ದಾರೆ. ವಾದಿರಾಜ ಸ್ವಾಮಿಗಳ ಮಠದ ಶ್ರೀ ಶ್ರೀ ವಿಶ್ವವಲ್ಲಭ ತೀರ್ಥರ ಆಶೀರ್ವಾದೊಂದಿಗೆ ಸಿನಿಮಾ ಸೆಟ್ಟೇರಿದೆ. ವಾದಿರಾಜ ಗುರುಗಳ ಜಯಂತಿಯಂದೇ ಶ್ರೀ ವಾದಿರಾಜ ಸ್ವಾಮಿಗಳ ಮಠ ಹೂವಿನಕೆರೆ ಕುಂದಾಪುರದಲ್ಲಿ ಸಿನಿಮಾ ಘೋಷಣೆ ಮಾಡಿದ್ದು ವಿಶೇಷವಾಗಿತ್ತು.The life story of Sri Vadiraja Swami to come on the silver screen - the movie will be directed by Hayavadhan

ಈ ಬಗ್ಗೆ ನಿರ್ದೇಶಕ ಹಯವದನ ಮಾಹಿತಿ ಹಂಚಿಕೊಂಡಿದ್ದು, ಸ್ಕ್ರಿಪ್ಟ್ ಹಾಗೂ ರಿಸರ್ಚ್ ವರ್ಕ್ ನಡೆಯುತ್ತಿದೆ. ಸಿನಿಮಾದ ತಾರಾಗಣ, ತಾಂತ್ರಿಕ ಬಳಗ ಇದ್ಯಾವುದು ಇನ್ನೂ ಫೈನಲ್ ಆಗಿಲ್ಲ. 15ನೇ ಶತಮಾನದಲ್ಲಿ ನಡೆದ ಕಥೆ ಇದು. ಶ್ರೀ ವಾದಿರಾಜ ಸ್ವಾಮಿಗಳು 120 ವರ್ಷಗಳು ಬದುಕಿದ್ದರು. ಆ ಕಾಲಘಟ್ಟವನ್ನು ಸೃಷ್ಟಿ ಮಾಡೋದೇ ಒಂದು ಚಾಲೆಂಜ್. ಸಿಜಿ, ಗ್ರಾಫಿಕ್ಸ್ ಹೆಚ್ಚಾಗಿರುತ್ತೆ, ಭಕ್ತಿ, ಸಮಾಜ ಸೇವೆ, ಮಾನವೀಯತೆ ಬಗ್ಗೆ ಸ್ವಾಮಿಗಳು ಹೇಳಿದ್ದಾರೆ. ಸಮಾಜ ಸುಧಾರಣೆ ಮಾಡಿದ್ದಾರೆ, 15ನೇ ಶತಮಾನದಲ್ಲೇ ಕನ್ನಡದಲ್ಲಿ ಕೀರ್ತನೆಗಳನ್ನು ನೀಡಿದ್ದಾರೆ, ಸಮಾಜಕ್ಕೆ ಅವರ ಕೊಡುಗೆ ತುಂಬಾ ಇದೆ. ಭಕ್ತಿ ಮತ್ತು ಗೌರವದಿಂದ ಅವರ ಕಥೆಯನ್ನು ತೆರೆ ಮೇಲೆ ತರುತ್ತಿದ್ದೇವೆ ಎಂದು ತಿಳಿಸಿದ್ದಾರೆ.The life story of Sri Vadiraja Swami to come on the silver screen - the movie will be directed by Hayavadhan

ವಾದಿರಾಜ ಸ್ವಾಮಿಗಳ ಮಠದ ಶ್ರೀ ಶ್ರೀ ವಿಶ್ವವಲ್ಲಭ ತೀರ್ಥರವರು ಮಾತನಾಡಿ ವಾದಿರಾಜ ಗುರುಗಳು15,16ನೇ ಶತಮಾನದಲ್ಲಿ ಬಂದ ಮೇರು ವ್ಯಕ್ತಿ, ಈ ಜಗತ್ತಿಗೆ ಬಹುಮುಖ ಸಂದೇಶ ನೀಡಿದವರು. ಅವರು 113 ವರ್ಷ ಸನ್ಯಾಸ ಜೀವನ ನಡೆಸಿದ್ದಾರೆ. ಅವರ 120 ವರ್ಷಗಳ ಜೀವನವನ್ನು ಒಂದು ಸಿನಿಮಾದಲ್ಲಿ ತೋರಿಸೋದು ಕಷ್ಟಸಾಧ್ಯ. ಈ ಹಿಂದೆ ಹಲವು ಜನರು ಗುರುಗಳ ಧಾರಾವಾಹಿ, ಸಿನಿಮಾ ಮಾಡೋದಾಗಿ ಬಂದಿದ್ದರು ಆದರೆ ನಾವು ಒಪ್ಪಿಕೊಂಡಿರಲಿಲ್ಲ. ಒಬ್ಬ ಯೋಗ್ಯ ವ್ಯಕ್ತಿ ಬರಬೇಕು ಎಂದು ಕಾಯುತ್ತಿದ್ವಿ ಆಗ ಬಂದವರೇ ನಿರ್ದೇಶಕ ಹಯವದನ. ಅವರು ವಾದಿರಾಜ ಗುರುಗಳ ಭಕ್ತರು ಕೂಡ ಹೌದು, ಅವರಲ್ಲಿ ಅಪಾರ ಶ್ರದ್ದೆ ಇದೆ. ಸಮಾಜಕ್ಕೆ ವಾದಿರಾಜರು ಯಾವ ರೀತಿ ಸಂದೇಶ ನೀಡಿದ್ದರು ಅನ್ನೋದನ್ನು ಸಿನಿಮಾದಲ್ಲಿ ತರಬೇಕು ಎಂದು ನಾವು ಹೇಳಿದ್ದೇವೆ ಎಂದು ತಮ್ಮ ಅಭಿಪ್ರಾಯ ಹಂಚಿಕೊಂಡ್ರು.The life story of Sri Vadiraja Swami to come on the silver screen - the movie will be directed by Hayavadhan

ವಿಕ್ರಮ್ ಹತ್ವಾರ್, ನಿರ್ದೇಶಕ ಹಯವದನ ಸ್ಕ್ರಿಪ್ಟ್ ವರ್ಕ್ ನಲ್ಲಿ ಬ್ಯುಸಿಯಾಗಿದ್ದು, ಐದು ತಿಂಗಳಲ್ಲಿ ಸಿನಿಮಾ ಚಿತ್ರೀಕರಣ ಆರಂಭವಾಗಲಿದೆ. ಸಿನಿಮಾ ಟೈಟಲ್, ತಾರಾಬಳಗ, ತಾಂತ್ರಿಕ ಬಳಗದ ಬಗ್ಗೆ ಮುಂದಿನ ದಿನಗಳಲ್ಲಿ ಚಿತ್ರತಂಡ ಮಾಹಿತಿ ಹಂಚಿಕೊಳ್ಳಲಿದೆ. ಪೆಂಡೋರಾಸ್ ಬಾಕ್ಸ್ ಪ್ರೊಡಕ್ಷನ್ಸ್ ಹಾಗೂ ಕೃಷ್ಣಛಾಯ ಚಿತ್ರ ಬ್ಯಾನರ್ ನಡಿ ಪವನ್ ಸಿಮಿಕೇರಿ ಮತ್ತು ಸಿಂಧು ಹಯವದನ ಹಾಗೂ ಸ್ನೇಹಿತರು ಚಿತ್ರದ ನಿರ್ಮಾಣ ಸಾರಥ್ಯ ವಹಿಸಿಕೊಂಡಿದ್ದಾರೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…