“ಐದನಿ”ಯ ಮೂಲಕ ಬಂತು “ಐಹೊಳೆ”ಯ ಹಾಡುಗಳು.

The songs of "Aihole" came through "Aidani".

ಸುಂದರ ಸಮಾರಂಭದಲ್ಲಿ ಹಂಸಲೇಖ, ನಾಗತಿಹಳ್ಳಿ ಚಂದ್ರಶೇಖರ್ ಸೇರಿದಂತೆ ಹಲವು ಗಣ್ಯರು ಭಾಗಿ.

ರವೀಂದ್ರನಾಥ ಸಿರಿವರ ನಿರ್ದೇಶನದಲ್ಲಿ ಚಾಲುಕ್ಯರ ಪ್ರಥಮ ರಾಜಧಾನಿ ಎಂದೇ ಖ್ಯಾತವಾಗಿರುವ ಐಹೊಳೆಯ ಚರಿತ್ರೆಯನ್ನು ಸಾರುವ “ಐಹೊಳೆ” ಚಿತ್ರದ ಹಾಡುಗಳು, ಟ್ರೇಲರ್ ಹಾಗೂ ಪೋಸ್ಟರ್ ಬಿಡುಗಡೆ ಸಮಾರಂಭ ಇತ್ತೀಚಿಗೆ ನಡೆಯಿತು. ‌ಸಾಹಿತಿ ಹಾಗೂ ಸಂಗೀತ ನಿರ್ದೇಶಕ ಡಾ||ಹಂಸಲೇಖ, ಲತಾ ಹಂಸಲೇಖ, ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್, ಪ್ರವಾಸೋದ್ಯಮ ಇಲಾಖೆಯ ಅಧಿಕಾರಿ ಮನೋಜ್ ಕುಮಾರ್, ಜೀ ಕನ್ನಡ ವಾಹಿನಿಯ ಮುಖ್ಯಸ್ಥ ಆಂಟೊನಿ ದಾಸ್ ಹಾಗೂ ಮಾಜಿ ಶಾಸಕ ಲಕ್ಷ್ಮೀನಾರಾಯಣ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಐದನಿ ಮ್ಯೂಸಿಕ್ ಮೂಲಕ ಈ ಚಿತ್ರದ ಹಾಡುಗಳು ಬಿಡುಗಡೆಯಾಗಿದೆ.The songs of "Aihole" came through "Aidani".

ಕರ್ನಾಟಕದ ಭವ್ಯ ಪರಂಪರೆಯನ್ನು ಬಿಂಬಿಸುವ, ಚಾಲುಕ್ಯರ ಮೊದಲ ರಾಜಧಾನಿ ಎಂದೇ ಖ್ಯಾತವಾಗಿರುವ ಸ್ಥಳ “ಐಹೊಳೆ”. ಈ ಚಾರಿತ್ರಿಕ ಸ್ಥಳದ ಕುರಿತಾದ ಹಾಗೂ ಪ್ರವಾಸೋದ್ಯಮಕ್ಕೆ ಒತ್ತು ಕೊಡುವಂತಹ “ಐಹೊಳೆ” ಸಿನಿಮಾ ತೆರೆಗೆ ಬರಲು ಸಿದ್ದವಾಗಿದ್ದು, ಸುಂದರವಾಗಿ ಮೂಡಿಬಂದಿದೆ. ನಾನೇ ಚಿತ್ರವನ್ನು ನಿರ್ದೇಶಿಸಿದ್ದೇನೆ. ಸಿರಿವರ ಕ್ರಿಯೇಷನ್ಸ್ ಅರ್ಪಿಸುವ ಹಾಗೂ ಎಂ.ಕೆ.ಬಿ ಸ್ಟುಡಿಯೋ ಮೂಲಕ ನಾನು ಸೇರಿದಂತೆ ಎಂಟು ಜನ ಮಿತ್ರರು ಚಿತ್ರವನ್ನು ನಿರ್ಮಿಸಿದ್ದೇವೆ. ಹಂಸಲೇಖ ಅವರ ಸಾಹಿತ್ಯ ಹಾಗೂ ಸಂಗೀತ “ಐಹೊಳೆ”ಗಿದೆ. ಮನೋಜ್ ಕುಮಾರ್ ಛಾಯಾಗ್ರಹಣ ಹಾಗೂ ಸಂಕಲನವಿರುವ ಈ ಚಿತ್ರದ ಕಥೆಯನ್ನು ಮಂಜುನಾಥ್ ಬರೆದಿದ್ದಾರೆ. ಸಂಭಾಷಣೆ ಶಂಕರ್ ಪಾಗೋಜಿ ಅವರದು. ರೇವಂತ್ ಮಾಳಿಗೆ, ಪ್ರಗತಿ ಸುರ್ವೆ, ಬಿರಾದಾರ್, ಡ್ರಾಮ ಜ್ಯೂನಿಯರ್ ಮಂಜು ಸೇರಿದಂತೆ ಅನೇಕ ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದಾರೆ. ಪ್ರವಾಸೋದ್ಯಮದ ಕುರಿತಾಗಿರುವ ಈ ಚಿತ್ರದ ಬಗ್ಗೆ ಪ್ರವಾಸೋದ್ಯಮ ಸಚಿವರಾದ ಆನಂದ್ ಸಿಂಗ್ ಅವರ ಬಳಿ ಹೇಳಿದಾಗ ತುಂಬಾ ಖುಷಿಪಟ್ಟರು. ಸಮಾರಂಭಕ್ಕೆ ಅವರು ಬರಬೇಕಿತ್ತು. ಅನಿವಾರ್ಯ ಕಾರಣದಿಂದ ಅವರು ಬರುವುದಕ್ಕೆ ಆಗಿಲ್ಲ. ಶುಭಾಶಯ ತಿಳಿಸಿದ್ದಾರೆ. ಟ್ರೇಲರ್, ಹಾಡುಗಳು ಹಾಗೂ ಪೋಸ್ಟರ್ ಬಿಡುಗಡೆಗೆ ಆಗಮಿಸಿರುವ ಎಲ್ಲಾ ಅತಿಥಿಗಳಿಗೆ ನನ್ನ ಧನ್ಯವಾದ ಎಂದರು ರವೀಂದ್ರನಾಥ ಸಿರಿವರ.The songs of "Aihole" came through "Aidani".

ನವೆಂಬರ್ ಕನ್ನಡ ಮಾಸ ಎಂದೇ ಖ್ಯಾತಿ. ಅಂತಹ ಮಾಸದಲ್ಲಿ ಸ್ನೇಹಿತ ರವೀಂದ್ರನಾಥ್ ಸಿರಿವರ ಒಳ್ಳೆಯ ಕೆಲಸ ಮಾಡಿದ್ದಾರೆ. ಕರ್ನಾಟಕ ಭವ್ಯ ಪರಂಪರೆಯನ್ನು ಸಾರುವ, “ಐಹೊಳೆ” ಚಿತ್ರದ ಹಾಡುಗಳನ್ನು ಬಿಡುಗಡೆ ಮಾಡಿದ್ದಾರೆ. ಚಿತ್ರವನ್ನು ಸದ್ಯದಲ್ಲೇ ತೆರೆಗೆ ತರಲಿದ್ದಾರೆ. ನಾನು ಈ ಚಿತ್ರಕ್ಕೆ ಹಾಡುಗಳನ್ನು ಬರೆದು, ಸಂಗೀತ ನೀಡಿದ್ದೀನಿ. “ಐಹೊಳೆ” ಸೇರಿದಂತೆ ಕರ್ನಾಟಕದ ಅನೇಕ ಐತಿಹಾಸಿಕ ಸ್ಥಳಗಳನ್ನು ಮತ್ತಷ್ಟು ಅಭಿವೃದ್ಧಿ ಮಾಡಿ, ಹೆಚ್ಚಿನ ಜನರು ಅಲ್ಲಿಗೆ ಬರುವ ಹಾಗೆ ಮಾಡಬೇಕೆಂದು ಸರ್ಕಾರವನ್ನು ವಿನಂತಿಸಿಕೊಳ್ಳುತ್ತೇನೆ ಎಂದರು ಹಂಸಲೇಖ.The songs of "Aihole" came through "Aidani".

ಸ್ನೇಹಿತ ರವೀಂದ್ರನಾಥ ದೂರದ ಪ್ರಯಾಣವೊಂದರಲ್ಲಿ ನನಗೆ ಈ ಕಥೆ ಹೇಳಿದರು. ಇಷ್ಟವಾಯಿತು. ಕನ್ನಡ ಹಾಗೂ ರಾಜ್ಯೋತ್ಸವ ಅಂದರೆ ಕೇವಲ ಸಾಹಿತ್ಯ ಮತ್ತು ಪುಸ್ತಕ ಪ್ರಪಂಚ ಅಷ್ಟೇ ಅಲ್ಲ. ಕನ್ನಡದಲ್ಲಿ ಸಾವಿರಾರು ಸಂಗತಿಗಳು ಅಂತರ್ಗತವಾಗಿದೆ. ಅದರಲ್ಲಿ ಶಿಲ್ಪಕಲೆಯೂ ಒಂದು. ಸಾವಿರಾರು ವರ್ಷಗಳ ಐತಿಹ್ಯವಿರುವ “ಐಹೊಳೆ” ಚಿತ್ರವನ್ನು ರವೀಂದ್ರನಾಥ ಸಿರಿವರ ಚೆನ್ನಾಗಿ ಮಾಡಿರುತ್ತಾರೆ ಎಂಬ ಭರವಸೆ ನನಗಿದೆ. ಹಂಸಲೇಖ ಅವರು ಹೇಳಿದಂತೆ ಸಾವಿರಾರು ವರ್ಷಗಳ ಇತಿಹಾಸವಿರುವ ನಮ್ಮ ಐತಿಹಾಸಿಕ ಪ್ರವಾಸಿ ಸ್ಥಳಗಳು ಮತ್ತಷ್ಟು ಅಭಿವೃದ್ಧಿ ಹೊಂದಲಿ. ಸಾಕಷ್ಟು ಜನರು ಅಲ್ಲಿಗೆ ಬರುವಂತಾಗಲಿ ಎಂದು ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ತಿಳಿಸಿದರು.The songs of "Aihole" came through "Aidani".
ಮಾಜಿ ಶಾಸಕ ಲಕ್ಷ್ಮೀನಾರಾಯಣ, ಜೀ ವಾಹಿನಿಯ ಆಂಟೊನಿ ದಾಸ್ ಹಾಗೂ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿ ಮನೋಜ್ ಕುಮಾರ್ ಸಹ ಚಿತ್ರದ ಕುರಿತು ಮಾತನಾಡಿ, ತಂಡಕ್ಕೆ ಶುಭ ಹಾರೈಸಿದರು. ಚಿತ್ರದಲ್ಲಿ ಅಭಿನಯಿಸಿರುವ ಮಂಜು, ರೇವಂತ್ ಮಾಳಿಗೆ ಸೇರಿದಂತೆ ಅನೇಕ ಕಲಾವಿದರು, ನಿರ್ಮಾಪಕರು, ಹಾಡು ಹಾಡಿರುವ ಗುರುಕಿರಣ್, ಅಂಕಿತ ಕುಂಡು ಮತ್ತು ಚಿತ್ರತಂಡದ ಸದಸ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.The songs of "Aihole" came through "Aidani".

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…