‘ಗರಡಿ’ಯಿಂದ ಬಂತು ಮೂರನೇ ಹಾಡು .

The third song 'Garadi'

ವನಜಾ ಬಿ.ಸಿ ಪಾಟೀಲ್ ನಿರ್ಮಾಣದ ಹಾಗೂ ಯೋಗರಾಜ್ ಭಟ್ ನಿರ್ದೇಶನದ ‘ಗರಡಿ’ ಚಿತ್ರದ ಮೂರನೇ ಹಾಡು ಇತ್ತೀಚೆಗೆ ಬಿಡುಗಡೆಯಾಯಿತು. ಯೋಗರಾಜ್ ಭಟ್ ಅವರು ಬರೆದಿರುವ The third song ‘Garadi’ ‘ಬಡವನ ಹೃದಯ’ ಎಂಬ ಮನಸ್ಸಿಗೆ ಹತ್ತಿರವಾಗುವ ಈ ಹಾಡು ಸೋಮವಾರ ಬಿಡುಗಡೆಯಾಗಿದೆ. ವಿ.ಹರಿಕೃಷ್ಣ ಸಂಗೀತ ಸಂಯೋಜಿಸಿರುವ ಈ ಹಾಡಿಗೆ ಕರುನಾಡ ಕಲಾರಸಿಕರು ತಲೆದೂಗುತ್ತಿದ್ದಾರೆ. ವಿಜಯ್ ಪ್ರಕಾಶ್ ಅವರ ಕಂಠಸಿರಿಯಲ್ಲಿ ಈ ಹಾಡು ಮೂಡಿಬಂದಿದೆ. ಹಾಡು ಬಿಡುಗಡೆ ಮಾಡಿದ ಚಿತ್ರತಂಡ, ಪತ್ರಿಕಾಗೋಷ್ಠಿಯಲ್ಲಿ ಹಾಡಿನ ಬಗ್ಗೆ ವಿವರಣೆ ನೀಡಿತು.The third song  Garadi

ಎರಡನೇ ಲಾಕ್‌ಡೌನ್ ಸಮಯದಲ್ಲೇ ಈ ಹಾಡು ಬರೆದಿದ್ದೆ ಎಂದು ಮಾತು ಆರಂಭಿಸಿದ ನಿರ್ದೇಶಕ ಹಾಗೂ ಗೀತರಚನೆಕಾರ ಯೋಗರಾಜ್ ಭಟ್, ಈ ಹಾಡು, ನನಗೆ ಹಾಗೂ ನಿರ್ಮಾಪಕರಿಗೆ ಅಚ್ಚುಮೆಚ್ಚು. ಬಾದಾಮಿ, ಬೆಂಗಳೂರು ಸೇರಿದಂತೆ ಅನೇಕ ಕಡೆ ಹಾಡಿನ ಚಿತ್ರೀಕರಣ ನಡೆದಿದೆ. ಹರಿಕೃಷ್ಣರ ಸಂಗೀತ, ವಿಜಯ್ ಪ್ರಕಾಶ್ ಗಾಯನ, ಸೂರ್ಯ, ಸೋನಾಲ್ ಮೊಂತೆರೊ ಹಾಗೂ ಸುಜಯ್ ಅವರ ಅಭಿನಯ ಚೆನ್ನಾಗಿದೆ. ‘ದಯಮಾಡಿ ಉರಿಸ ಬೇಡ ಬಡವನ ಹೃದಯ’ ಎಂಬ ಮೊದಲ ಸಾಲೇ ಎಲ್ಲರ ಮನಸ್ಸಿಗೂ ಹತ್ತಿರವಾಗುತ್ತದೆ ಎಂದರು.

ನಿಮ್ಮ ಆತ್ಮೀಯ ಸ್ನೇಹಿತರು ಮತ್ತು ಕುಟುಂಬ ಸದಸ್ಯರೊಂದಿಗೆ ಹಂಚಿಕೊಳ್ಳಿ

 

The third song  Garadi

ಯೋಗರಾಜ್ ಭಟ್ ಅವರು ಬರೆದಿರುವ ಈ ಹಾಡು ಕೇಳಿದಾಗ ನನಗೆ “ಮುಂಗಾರು ಮಳೆ” ಚಿತ್ರದ ‘ಅನಿಸುತಿದೆ ಯಾಕೋ ಇಂದು’ ಹಾಡು ನೆನಪಾಯಿತು. ಈ ಹಾಡಿನ ಸಾಹಿತ್ಯ, ಗಾಯನ ಹಾಗೂ ನಟನೆ ಎಲ್ಲವೂ ಚೆನ್ನಾಗಿದೆ. ನವೆಂಬರ್ 1 ರಂದು ರಾಣಿಬೆನ್ನೂರಿನಲ್ಲಿ ಅದ್ದೂರಿಯಾಗಿ ಟ್ರೇಲರ್ ಬಿಡುಗಡೆ ಸಮಾರಂಭ ನಡೆಯಲಿದೆ. ದರ್ಶನ್ ಅವರು ಕಾರ್ಯಕ್ರಮಕ್ಕೆ ಬರಲಿದ್ದಾರೆ. ನವೆಂಬರ್ 10 ರಂದು ಚಿತ್ರ ಬಿಡುಗಡೆಯಾಗುತ್ತಿದೆ‌. ನೋಡಿ ಪ್ರೋತ್ಸಾಹಿಸಿ ಎಂದರು ನಿರ್ಮಾಪಕ ಹಾಗೂ ನಟ ಬಿ.ಸಿ.ಪಾಟೀಲ್.

ನೀವು ಅನಗತ್ಯವಾಗಿ ಚಿಂತಿಸುತ್ತಿರಿ? ಯಾರಿಗಾಗಿಯೋ ಏಕೆ ಹೆದರುತ್ತೀರಿ?

ಈ ಹಾಡಿಗಾಗಿ ಸಾಕಷ್ಟು ಶ್ರಮ ಪಟ್ಟಿದ್ದೇನೆ. ‘ಬಡವನ ಹೃದಯ’ ಹಾಡು ಯೋಗರಾಜ್ ಭಟ್ ಅವರು ನನಗಾಗಿ ಬರೆದ ಹಾಗಿದೆ. ಈ ಹಾಡನ್ನು ದರ್ಶನ್ ಸರ್‌ಗೆ ಕೇಳಿಸಿದ್ದೆ.‌‌ ಹಾಡಿನ ಸಾಹಿತ್ಯವನ್ನು ಅವರು ಬಹಳ ಇಷ್ಟ ಪಟ್ಟಿದ್ದರು.‌ ವಿ.ಹರಿಕೃಷ್ಣ ಸಂಗೀತ, ನಿರಂಜನ್ ಬಾಬು ಛಾಯಾಗ್ರಹಣ, ವಿಜಯ್ ಪ್ರಕಾಶ್ ಗಾಯನ ಹಾಗೂ ಮದನ್ – ಹರಿಣಿ ಅವರ ನೃತ್ಯ ನಿರ್ದೇಶನ ಹಾಡಿನ ಹೈಲೆಟ್ ಎಂದು ನಾಯಕ ಸೂರ್ಯ ತಿಳಿಸಿದರು.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…