ಹಲವು ಗಣ್ಯರ ಸಮ್ಮುಖದಲ್ಲಿ ಬಿಡುಗಡೆಯಾಯಿತು “ವೈಶಂಪಾಯನ ತೀರ” ದ ಟ್ರೇಲರ್

The trailer of "Vaishampayana Theer" was released

ರಂಗಕರ್ಮಿ ರಮೇಶ್ ಬೇಗಾರು ನಿರ್ದೇಶಿಸಿರುವ ‘ವೈಶಂಪಾಯನ ತೀರ’ ಚಿತ್ರದ ಟ್ರೇಲರ್ ಹಲವು ಗಣ್ಯರ ಸಮ್ಮುಖದಲ್ಲಿ ಬಿಡುಗಡೆಯಾಗಿದೆ. ಚಿತ್ರ ಜನವರಿ 6 ರಂದು ತೆರೆಗೆ ಬರಲಿದೆ.

ಸದ್ಯ ಸಿನಿಮಾದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿರುವ ಚಿತ್ರತಂಡ, ಇತ್ತೀಚಿಗೆ ‘ವೈಶಂಪಾಯನ ತೀರ’ ಸಿನಿಮಾದ ಟ್ರೇಲರ್ ಮತ್ತು ಹಾಡುಗಳನ್ನು ಬಿಡುಗಡೆ ಮಾಡಿದೆ.
ಹಿರಿಯ ನಿರ್ದೇಶಕ ಗಿರೀಶ್ ಕಾಸರವಳ್ಳಿ, ಸಾಹಿತಿ ಮಹಾಬಲಮೂರ್ತಿ ಕೊಡ್ಲೆಕೆರೆ, ಸಂಗೀತ ನಿರ್ದೇಶಕ ಗುರುಕಿರಣ್, ಹಿರಿಯ ಪತ್ರಕರ್ತ ಎನ್. ಎಸ್ ಶ್ರೀಧರಮೂರ್ತಿ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ. ಮ ಹರೀಶ್ ಸೇರಿದಂತೆ ಹಲವು ಗಣ್ಯರು ಸೇರಿ ‘ವೈಶಂಪಾಯನ ತೀರ’ ಸಿನಿಮಾದ ಟ್ರೇಲರ್ ಬಿಡುಗಡೆ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು.The trailer of "Vaishampayana Theer" was released

ಸಾಹಿತಿ ಮಹಾಬಲಮೂರ್ತಿ ಕೊಡ್ಲೆಕೆರೆ ಅವರ ಸಣ್ಣಕತೆಯನ್ನು ಆಧರಿಸಿ ಈ ಸಿನಿಮಾ ನಿರ್ಮಾಣವಾಗಿದೆ. ಯಕ್ಷಗಾನವನ್ನು ಹಿನ್ನೆಲೆಯಾಗಿಟ್ಟುಕೊಂಡು ಪ್ರಕೃತಿ ಮತ್ತು ಪುರುಷನ ಸಂಬಂಧವನ್ನು ವಿಭಿನ್ನವಾದ ಧಾಟಿಯಲ್ಲಿ ನಿರೂಪಿಸಲಾಗಿದೆ. ಇಡೀ ಸಿನಿಮಾವನ್ನು ಕೊಪ್ಪ ಮತ್ತು ಶೃಂಗೇರಿ ಸುತ್ತಮುತ್ತ ಚಿತ್ರೀಕರಿಸಲಾಗಿದೆ. ಮಲೆನಾಡ ಭಾಷೆ, ಜನಜೀವನ ಮತ್ತು ಸಂಸ್ಕೃತಿಯನ್ನು ತೆರೆಯ ಮೇಲೆ ತರಲಾಗಿದೆ ಎಂದು ಚಿತ್ರದ ಬಗ್ಗೆ ನಿರ್ದೇಶಕ ರಮೇಶ್ ಬೇಗಾರು ವಿವರಣೆ ನೀಡಿದರು.The trailer of "Vaishampayana Theer" was released

‘ರಮೇಶ್ ಬೇಗಾರು ಸುಮಾರು ಮೂರು ದಶಕಗಳಿಂದ ಕಲಾಕ್ಷೇತ್ರದಲ್ಲಿ ಸಕ್ರಿಯವಾಗಿದ್ದಾರೆ. ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಅವರಿಗೆ ಹೆಚ್ಚಿನ ಅನುಭವವಿದೆ. ಯಕ್ಷಗಾನದಂತಹ ಕಲೆಯನ್ನು ಹೊಸ ಆಯಾಮದಲ್ಲಿ ನೋಡುವಂತ ಅಪರೂಪದ ಪ್ರತಿಭಾವಂತ ರಮೇಶ್ ಅವರು. ನಾನು ಕೂಡ ಈ ಚಿತ್ರವನ್ನು ನೋಡಲು ಕಾತುರನಾಗಿದ್ದೇನೆ ಎಂದರು ಹಿರಿಯ ನಿರ್ದೇಶಕ ಗಿರೀಶ್ ಕಾಸರವಳ್ಳಿ.The trailer of "Vaishampayana Theer" was released

ಇದೊಂದು ವಿಭಿನ್ನ ಕಥೆಯ ಚಿತ್ರ. ಮಲೆನಾಡ ಸಂಸ್ಕೃತಿಯನ್ನು ನಿರ್ದೇಶಕರು ಮನಮುಟ್ಟುವಂತೆ ತೋರಿಸಿದ್ದಾರೆ. ನಾನು ಈ ಚಿತ್ರದಲ್ಲಿ ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದೀನಿ ಎಂದು ನಟ ಪ್ರಮೋದ್ ಶೆಟ್ಟಿ ತಿಳಿಸಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕಲಾವಿದರು ಹಾಗೂ ತಂತ್ರಜ್ಞರು ಚಿತ್ರ, ಪಾತ್ರ ಮತ್ತು ಚಿತ್ರೀಕರಣದ ಅನುಭವಗಳನ್ನು ಹಂಚಿಕೊಂಡರು.The trailer of "Vaishampayana Theer" was released

‘ಸ್ವರಸಂಗಮ ಎಂಟರ್‌ಟೈನ್‌ಮೆಂಟ್ ಲಾಂಛನದಲ್ಲಿ ಆರ್.ಸುರೇಶ ಬಾಬು ಈ ಚಿತ್ರವನ್ನು ನಿರ್ಮಿಸಿದ್ದಾರೆ. ‘ವೈಶಂಪಾಯನ ತೀರ’ ಸಿನಿಮಾದಲ್ಲಿ ವೈಜಯಂತಿ ಅಡಿಗ ನಾಯಕಿಯಾಗಿದ್ದು, ಉಳಿದಂತೆ ಪ್ರಮೋದ್ ಶೆಟ್ಟಿ, ಬಾಬು ಹಿರಣ್ಣಯ್ಯ, ರಮೇಶ್ ಪಂಡಿತ್, ರವೀಶ್ ಹೆಗಡೆ, ಪ್ರಸನ್ನ ಶೆಟ್ಟಿಗಾರ್, ರಮೇಶ್ ಭಟ್, ಗುರುರಾಜ ಹೊಸಕೋಟೆ, ಶೃಂಗೇರಿ ರಾಮಣ್ಣ, ರವಿಕುಮಾರ್, ಸತೀಶ್ ಪೈ, ಸಂತೋಷ್ ಪೈ ಮೊದಲಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಶ್ರೀನಿಧಿ ಕೊಪ್ಪ ಸಂಗೀತ ಸಂಯೋಜಿಸಿದ್ದು, ವಿನು ಮನಸು ಹಿನ್ನೆಲೆ ಸಂಗೀತ ನೀಡಿದ್ದಾರೆ. ಚಿತ್ರಕ್ಕೆ ಶಶೀರ ಶೃಂಗೇರಿ ಛಾಯಾಗ್ರಹಣ ಹಾಗೂ ಅವಿನಾಶ್ ಶೃಂಗೇರಿ ಅವರ ಸಂಕಲನವಿದೆ.The trailer of "Vaishampayana Theer" was released

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…