ಮತ್ತೆ ಬಂದು ‘ಕಾಂತಾರ’ ಚಿತ್ರದ ‘ವರಾಹ ರೂಪಂ‌’ ಹಾಡು; ಇಂದಿನಿಂದ ಚಿತ್ರಮಂದಿರ, ಓಟಿಟಿ ಸೇರಿದಂತೆ ಎಲ್ಲೆಡೆ ಲಭ್ಯ

'Varaha Rupam' song from the film 'Kantara' comes again; Available everywhere including cinemas, OTT from today

‘ಕಾಂತಾರ’ ಚಿತ್ರದ ‘ವರಾಹ ರೂಪಂ’ ಹಾಡಿನ ಕುರಿತು ಕೇರಳದ ಕೋರ್ಟ್​ ನೀಡಿದ್ದ ತಡೆಯಾಜ್ಞೆ ತೆರವುಗೊಂಡಿರುವ ಹಿನ್ನೆಲೆಯಲ್ಲಿ ಆ ಹಾಡು ಇಂದಿನಿಂದ ಚಿತ್ರಮಂದಿರ, ಯೂಟ್ಯೂಬ್​, ಓಟಿಟಿ ಸೇರಿದಂತೆ ಎಲ್ಲೆಡೆ ಲಭ್ಯವಿದೆ.'Varaha Rupam' song from the film 'Kantara' comes again; Available everywhere including cinemas, OTT from today
ಇದಕ್ಕೂ ಮುನ್ನ, ‘ವರಾಹ ರೂಪಂ …’ ಹಾಡನ್ನು ಯೂಟ್ಯೂಬ್ ಸೇರಿದಂತೆ ಯಾವುದೇ ಪ್ಲಾಟ್​ಫಾರ್ಮ್​ಗಳಲ್ಲಿ ಒಪ್ಪಿಗೆ ಇಲ್ಲದೆ ಬಳಸಬಾರದು ಎಂದು ಕೇರಳದ ಕೋರ್ಟ್​ ಆದೇಶ ಹೊರಡಿಸಿತ್ತು. ಇದಕ್ಕೆ ತಲೆ ಬಾಗಿದ್ದ ಚಿತ್ರತಂಡವು, ‘ವರಾಹ ರೂಪಂ’ ಹಾಡನ್ನು ಚಿತ್ರಮಂದಿರ, ಯೂಟ್ಯೂಬ್​ನ ಹೊಂಬಾಳೆ ಫಿಲಂಸ್​ನ ಚಾನಲ್​, ಮ್ಯೂಸಿಕ್ ಆ್ಯಪ್​ಗಳಾದ ಸಾವನ್ ಮುಂತಾದ ಕಡೆಗಳಿಂದ ಹಾಡನ್ನು ಡಿಲೀಟ್​ ಮಾಡಿತ್ತು. ಓಟಿಟಿಯಲ್ಲಿ ‘ಕಾಂತಾರ’ ಚಿತ್ರ ಬಿಡುಗಡೆಯಾದಾಗಲೂ ಬೇರೆ ಟ್ಯೂನ್​ ಬಳಸಲಾಗಿತ್ತು.'Varaha Rupam' song from the film 'Kantara' comes again; Available everywhere including cinemas, OTT from today
ಆ ನಂತರ ತಡೆಯಾಜ್ಞೆ ತೆರವಾಗಿ, ಹಾಡನ್ನು ಪುನಃ ಬಳಸಿಕೊಳ್ಳುವುದಕ್ಕೆ ಅನುಮತಿ ಸಿಕ್ಕಿದೆ. ಅದರಂತೆ, ತತಕ್ಷಣಕ್ಕೆ ಬರುವಂತೆ ಇಂದಿನಿಂದ ಚಿತ್ರಮಂದಿರ, ಓಟಿಟಿ, ಸೋಷಿಯಲ್​ ಮೀಡಿಯಾ ಸೇರಿದಂತೆ ಎಲ್ಲ ವೇದಿಕೆಗಳಲ್ಲೂ ಮೂಲ ‘ವರಾಹ ರೂಪಂ’ ಹಾಡು ಪುನಃ ಸಿಗಲಿದೆ.‘Kantara’ plagiarism row: Why was Thaikkudam Bridge
‘ಕಾಂತಾರ’ ಚಿತ್ರವನ್ನು ಹೊಂಬಾಳೆ ಫಿಲಂಸ್​ ಸಂಸ್ಥೆಯಡಿ ವಿಜಯ್​ ಕುಮಾರ್​ ಕಿರಗಂದೂರು ನಿರ್ಮಿಸಿದ್ದು, ರಿಷಭ್​ ಶೆಟ್ಟಿ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ರಿಷಭ್​ ಶೆಟ್ಟಿ, ಸಪ್ತಮಿ ಗೌಡ, ಅಚ್ಯುತ್​ ಕುಮಾರ್​, ಕಿಶೋರ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿರುವ ಈ ಚಿತ್ರಕ್ಕೆ, ಅಜನೀಶ್​ ಲೋಕನಾಥ್​ ಸಂಗೀತ ಮತ್ತು ಅರವಿಂದ್​ ಅವರ ಛಾಯಾಗ್ರಹಣವಿದೆ. ‘ಕಾಂತಾರಾ’ ಚಿತ್ರವು 50 ದಿನಗಳನ್ನು ಪೂರೈಸಿ, ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…