‘ವೀರಲೋಕ’ ಪ್ರಕಾಶನದಿಂದ ಹತ್ತು ಪುಸ್ತಕಗಳ ಲೋಕಾರ್ಪಣೆ.

ಹೋಟೆಲ್, ಮಾಲ್ ಗಳಲ್ಲಿಯೂ ಸಿಗಲಿದೆ ಪುಸ್ತಕ..ಇದು ವೀರಕಪುತ್ರ ಶ್ರೀನಿವಾಸ್ ಸಾಹಸ

ಪುಸ್ತಕ ಕ್ಷೇತ್ರದಲ್ಲೊಂದು ವಿಭಿನ್ನ ಬಗೆಯ ಪ್ರಯತ್ನಕ್ಕೆ ವೀರಕಪುತ್ರ ಶ್ರೀನಿವಾಸ್ ಮುನ್ನುಡಿ ಬರೆದಿದ್ದಾರೆ. ಕಾಫಿ ಶಾಪ್‌, ಹೋಟೆಲ್, ರೆಸ್ಟೋರೆಂಟ್, ಔಷಧ ಮಳಿಗೆ, ಆಸ್ಪತ್ರೆ, ಮಾಲ್‌, ಕಾರ್ಪೊರೇಟ್‌ ಕಂಪನಿಗಳ ಕಚೇರಿಗಳು ಸೇರಿದಂತೆ ವಿವಿಧೆಡೆ ಕನ್ನಡ ಪುಸ್ತಕಗಳು ದೊರೆಯುವಂತಹ ಅವಕಾಶವನ್ನು ಶ್ರೀನಿವಾಸ್ ಕಲ್ಪಿಸಿದ್ದಾರೆ. ವೀರಕಪುತ್ರ ಶ್ರೀನಿವಾಸ್ ವೀರಲೋಕ ಪ್ರಕಾಶನ ಸಂಸ್ಥೆ ಆರಂಭಿಸಿದ್ದಾರೆ. ಈ ಮೂಲಕ ಕನ್ನಡ ಪುಸ್ತಕಗಳ ಓದುಗರಿಗೆ ಉತ್ತಮ ವೇದಿಕೆ ಒದಗಿಸಿ, ಓದುಗರ ಸಂಖ್ಯೆ ವೃದ್ಧಿಸಲು ಸಜ್ಜಾದ್ದಾರೆ.WhatsApp Image 2022 06 11 at 10.01.39 AM

ವೀರಲೋಕ ಪ್ರಕಾಶನ ಹೊರತಂದಿರುವ ಹತ್ತು ಪುಸ್ತಕಗಳನ್ನು ಲೋಕಾರ್ಪಣೆ ಮಾಡಲಾಯಿತು. ಪುಸ್ತಕಗಳು ಜ್ಞಾನದ ಕೀಲಿಕೈ ಎಂಬ ಹೆಸರಿನಡಿ ನಡೆದ ಕಾರ್ಯಕ್ರಮಕ್ಕೆ ಕನ್ನಡ ಪುಸ್ತಕಗಳ ರಾಯಭಾರಿಯಾಗಿರುವ ನಟ ರಮೇಶ್ ಅವರಿಂದ್ ಕಾರ್ಯಕ್ರಮ ಉದ್ಘಾಟಿಸಿದರು. ನಟ ಕಿಚ್ಚ ಸುದೀಪ್ ಪುಸ್ತಕಗಳನ್ನು ಲೋಕಾರ್ಪಣೆ ಮಾಡಿದರು.WhatsApp Image 2022 06 11 at 10.01.40 AM

ಕಾರ್ಯಕ್ರಮ ಉದ್ಘಾಟಿಸಿ ಮಾತಾನಾಡಿದ ರಮೇಶ್ ಅರವಿಂದ್, ಫೌಡ್ರಶಿಕ್ಷಣದಲ್ಲಿ ವಿದ್ಯಾಭ್ಯಾಸ ಮಾಡುವ ಸಮಯದಲ್ಲಿ ಸಿನಿಮಾವೊಂದರಲ್ಲಿ ನಟಿಸುವ ಅವಕಾಶ ಸಿಕ್ಕಿತು. ಆ ಪಾತ್ರಕ್ಕಾಗಿ ತಲೆ ಕೂದಲು ತೆಗೆದಿದ್ದೆ. ಹೀಗಾಗಿ ಶಾಲೆಗೆ ಹೋಗುವ ಬದಲು ಗ್ರಂಥಾಲಯಕ್ಕೆ ತೆರಳಿ ಪುಸ್ತಕ ಓದಲು ಶುರುಮಾಡಿದೆ. ನಂತ್ರ ಅದು ಹವ್ಯಾಸವಾಯಿತು. ಹಲವು ಪುಸ್ತಕಗಳನ್ನು ಓದಿದ ಪರಿಣಾಮ ನಾನು ಈಗ ಪುಸ್ತಕ ಬರೆಯಲು ಶುರು ಮಾಡಿದ್ದೇನೆ ಎಂದರು.WhatsApp Image 2022 06 11 at 10.01.41 AM

ಸುದೀಪ್ ಮಾತಾನಾಡಿ, ನಾನು ಜಾಸ್ತಿ ಓದದೆ ಇರುವುದು ತುಂಬಾ ಒಳ್ಳೆಯದಾಗಿದೆ. ಏಕಂದ್ರೆ ಇದರಿಂದ ಹೆಚ್ಚು ಪುಸ್ತಕ ಓದಲು ಸಾಧ್ಯವಾಗದೇ ಇದೀಗ ಹಲವು ಪುಸ್ತಕಗಳನ್ನು ಒಮ್ಮೆಲೇ ಬಿಡುಗಡೆ ಮಾಡಿ ಜೀವನದಲ್ಲಿ ಒಳ್ಳೆ ಕೆಲಸ ಮಾಡಿದೆ. ಎಲ್ಲಾ ಬರಹ ಹತ್ತಿರವಿಟ್ಟುಕೊಂಡಿದ್ದೇನೆ ಎಂದು ತಿಳಿಸಿದರು.WhatsApp Image 2022 06 11 at 10.01.41 AM 1

ವೀರ ಲೋಕದ ಮುಖ್ಯಸ್ಥ ವೀರಕಪುತ್ರ ಶ್ರೀನಿವಾಸ್, ‘ಕನ್ನಡ ಪುಸ್ತಕ ಎಲ್ಲಿ ಬೇಕಾದರೂ ಸಿಗುವಂತಾಗಲು ಮೊದಲ ಹಂತದಲ್ಲಿ 1 ಸಾವಿರ ಪುಸ್ತಕಗಳ ಸ್ಟ್ಯಾಂಡ್‌ಗಳನ್ನು ಬೆಂಗಳೂರಿನ ಮಾಲ್, ಅಂಗಡಿ ಮಳಿಗೆಗಳಲ್ಲಿ ಇರಿಸಲಾಗುವುದು. ಸ್ಥಳದಲ್ಲೇ ಖರೀದಿಗೆ ಅವಕಾಶ ಇದೆ’ ಎಂದರು. ‘ಕನ್ನಡ ಪುಸ್ತಕಗಳನ್ನು ಪರಿಚಯಿಸಿ ಮಾರಾಟ ಮಾಡಲು ಕಾಲ್ ಸೆಂಟರ್ ಸ್ಥಾಪಿಸಲಾಗಿದೆ. ನಮ್ಮ ಬಳಿ 11 ಲಕ್ಷ ಓದುಗರ ಮಾಹಿತಿ ಇದೆ. ಅವರನ್ನು ಸಂಪರ್ಕಿಸಿ ಪುಸ್ತಕ ಪರಿಚಯ, ಮಾರಾಟ ಮಾಡುತ್ತೇವೆ’ ಎಂದರು.WhatsApp Image 2022 06 11 at 10.01.42 AM

ಕೈಹಿಡಿದು ನೀ ನಡೆಸು ತಂದೆ(ವಿಶ್ವೇಶ್ವರ ಭಟ್), ಅವರು ಇವರು ದೇವರು(ಜೋಗಿ), ಲಾಸ್ಟ್ ಡೇಸ್ ಆಫ್ ಲೆಜೆಂಡ್ಸ್(ಗಣೇಶ್ ಕಾಸರಗೋಡು), ವಿಶ್ವ ಸುಂದರಿ(ಕುಂ. ವೀರಭದ್ರಪ್ಪ), ಸೋಲೆಂಬ ಗೆಲುವು(ದೀಪಾ ಹಿರೇಗುತ್ತಿ), ಮನಿ ಮನಿ ಎಕಾನಮಿ(ರಂಗಸ್ವಾಮಿ ಮೂಕನಹಳ್ಳಿ), ಆರ್ಟ್ ಆಫ್ ಸಕ್ಸಸ್( ರಮೇಶ್ ಅರವಿಂದ್), ನಿಮಗೆಷ್ಟು ಹಣ ಬೇಕು?(ಅನಂತ ಹುದೆಂಗಜೆ), ಒಳ್ಳೆಯ ಬದುಕಿನ ಸೂತ್ರಗಳು(ರವಿಕೃಷ್ಣಾ ರೆಡ್ಡಿ) ಕೃತಿಗಳು ಬಿಡುಗಡೆಯಾದವು.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…