ಧರ್ಮಸ್ಥಳ ಕೇಸ್ ಬಗ್ಗೆ ನಟಿ ರಮ್ಯಾ ಪ್ರತಿಕ್ರಿಯೆ; ಸೂಕ್ತ ತನಿಖೆಗೆ ಆಗ್ರಹ
ViewMore
ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವುಗಳು ಹಾಗೂ ಶವಗಳನ್ನ ಹೂತು ಹಾಕಲಾಗಿದೆ ಎನ್ನುವ ಪ್ರಕರಣ ಇದೀಗ ಭಾರೀ ಚರ್ಚೆ ಹುಟ್ಟು ಹಾಕಿದೆ.
ViewMore
ಇದೆಲ್ಲದರ ನಡುವೆ 22 ವರ್ಷಗಳ ಹಿಂದೆ ತಮ್ಮ ಮಗಳು ನಿಗೂಢವಾಗಿ ಕಾಣೆಯಾಗಿದ್ದಾಳೆ ಎಂದು 60 ವರ್ಷದ ಮಹಿಳೆ ಸುಜಾತ ಎಂಬುವವರು ದೂರು ನೀಡಿರುವುದು ಸಂಚಲನ ಸೃಷ್ಟಿಸಿದೆ.
ViewMore
ಸದ್ಯ ಧರ್ಮಸ್ಥಳ ಕೇಸ್ ಬಗ್ಗೆ ಕನ್ನಡ ಸಿನಿಮಾ ತಾರೆಯರು ಒಬ್ಬೊಬ್ಬರಾಗಿ ಮಾತನಾಡಲು ಆರಂಭಿಸಿದ್ದಾರೆ. ಬಹುಭಾಷಾ ನಟಿ ಪ್ರಕಾಶ್ ರಾಜ್ ಸೂಕ್ತ ತನಿಖೆಗೆ ಆಗ್ರಹಿಸಿದ್ದಾರೆ.
ViewMore
ನಟಿ ರಮ್ಯಾ ಪ್ರತಿಕ್ರಿಯಿಸಿ ಸುಜಾತ ಅವರ ಆರೋಪ ಪ್ರಕರಣದ ಸತ್ಯ ಗೊತ್ತಾಗಬೇಕು ಎಂದು ಕೇಳಿದ್ದಾರೆ. ನಟ, ಬಿಗ್ಬಾಸ್ ಸ್ಪರ್ಧಿ ರಾಕೇಶ್ ಅಡಿಗ ಕೂಡ ಈ ಬಗ್ಗೆ ಪೋಸ್ಟ್ ಮಾಡಿದ್ದಾರೆ.
ViewMore
ಸುಜಾತಾ ಮಾಧ್ಯಮಗಳ ಜೊತೆ ಮಾತನಾಡಿರುವ ವೀಡಿಯೋವನ್ನು ನಟಿ ರಮ್ಯಾ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಹಂಚಿಕೊಂಡಿದ್ದಾರೆ. "ಈ ಘಟನೆ ಬಗ್ಗೆ ತಿಳಿದು ಆಘಾತವಾಯಿತು. ಪಾರದರ್ಶಕ ತನಿಖೆ ನಡೆಯಲಿ.
ViewMore
ಸಾಕ್ಷಾಧಾರಗಳು ನಾಶವಾಗದಂತೆ... ತುರ್ತು ಕ್ರಮ ತೆಗುದುಕೊಳ್ಳಿ. SIT ರಚಿಸಿ ಮತ್ತು ಈ ವರೆಗೆ ದಾರಿ ತಪ್ಪಿಸಿದ ಅಧಿಕಾರಿಗಳ ಮೇಲೆ ತೀವ್ರ ಕ್ರಮ ಕೈಗೊಳ್ಳಿ" ಎಂದು ಟ್ವೀಟ್ ಮಾಡಿದ್ದಾರೆ.